<p>ಧಾರವಾಡ: ‘ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳು ಸಾಧನೆಗೆ ಪ್ರೇರಕ ಶಕ್ತಿಯಾಗಿವೆ’ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಅಂಬೇಡ್ಕರ್ ಅವರ 135 ನೇ ಜಯಂತ್ಯುತ್ಸವ ಅಂಗವಾಗಿ ಸನ್ಮತಿ ಮಾರ್ಗದ ಅಂಬೇಡ್ಕರ್ ಭವನದಲ್ಲಿ ಸೋಮವಾರ ನಡೆದ ಆಯೋಜಿಸಿದ್ದ, ವಿಚಾರಗೋಷ್ಠಿಯಲ್ಲಿ ಮಾತನಾಡಿದರು.</p>.<p>ಅಂಬೇಡ್ಕರ್ ಅವರು ಸಂವಿಧಾನ ರಚಿಸಿ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಆದರ್ಶಗಳನ್ನು ಪಾಲಿಸಿದರೆ ಸಮಾನತೆ ಮತ್ತು ನ್ಯಾಯಯುತ ಸಮಾಜ ನಿರ್ಮಾಣ ಸಾಧ್ಯ. ಅವರ ಚಿಂತನೆಗಳು ಎಲ್ಲರಿಗೂ ದಾರಿದೀಪವಾಗಿವೆ ಎಂದರು.</p>.<p>ಹಿಂದೂ ಕೋಡ್ ಬಿಲ್ ಬಹಳ ಮುಖ್ಯವಾಗಿದೆ. ಈ ಕಾನೂನು ಭಾರತೀಯ ಸಮಾಜದಲ್ಲಿ ಮಹತ್ವದ ಸಾಮಾಜಿಕ ಬದಲಾವಣೆಗೆ ಕಾರಣವಾಯಿತು. ಹಿಂದೂ ಕೋಡ್ ಬಿಲ್ ಮೂಲಕ ಮಹಿಳೆಯರಿಗೆ ಹಲವು ಹಕ್ಕುಗಳನ್ನು ನೀಡಿದೆ. ಮಹಿಳೆಯರು ಸ್ಥಾನಮಾನವನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಬಿಲ್ ಮಹತ್ವದ ಹೆಜ್ಜೆಯಾಯಿತು ಎಂದರು.</p>.<p>ಕರ್ನಾಟಕ ವಿ.ವಿ ಮಾನವಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಸದಾನಂದ ಬಿ.ಸುಗಂಧಿ ಅವರು ಅಂಬೇಡ್ಕರ್ ವಿಚಾರಧಾರೆಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.</p>.<p>ರಾಮಣ್ಣ ಗಡ್ಡರ ಅವರು ಬುದ್ಧ ಪ್ರಾರ್ಥನೆ ಪಠಣ ಮಾಡಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ ಹೆಬ್ಬಳ್ಳಿ, ಎಂ.ಅರವಿಂದ, ಲಕ್ಷ್ಮಣ ಬಕ್ಕಾಯಿ, ಅಶೋಕ ದೊಡಮನಿ, ವೆಂಕಟೇಶ ಸಗಬಲಾ ಉಪಸ್ಥಿತರಿದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-24-1776030693</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳು ಸಾಧನೆಗೆ ಪ್ರೇರಕ ಶಕ್ತಿಯಾಗಿವೆ’ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಅಂಬೇಡ್ಕರ್ ಅವರ 135 ನೇ ಜಯಂತ್ಯುತ್ಸವ ಅಂಗವಾಗಿ ಸನ್ಮತಿ ಮಾರ್ಗದ ಅಂಬೇಡ್ಕರ್ ಭವನದಲ್ಲಿ ಸೋಮವಾರ ನಡೆದ ಆಯೋಜಿಸಿದ್ದ, ವಿಚಾರಗೋಷ್ಠಿಯಲ್ಲಿ ಮಾತನಾಡಿದರು.</p>.<p>ಅಂಬೇಡ್ಕರ್ ಅವರು ಸಂವಿಧಾನ ರಚಿಸಿ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಆದರ್ಶಗಳನ್ನು ಪಾಲಿಸಿದರೆ ಸಮಾನತೆ ಮತ್ತು ನ್ಯಾಯಯುತ ಸಮಾಜ ನಿರ್ಮಾಣ ಸಾಧ್ಯ. ಅವರ ಚಿಂತನೆಗಳು ಎಲ್ಲರಿಗೂ ದಾರಿದೀಪವಾಗಿವೆ ಎಂದರು.</p>.<p>ಹಿಂದೂ ಕೋಡ್ ಬಿಲ್ ಬಹಳ ಮುಖ್ಯವಾಗಿದೆ. ಈ ಕಾನೂನು ಭಾರತೀಯ ಸಮಾಜದಲ್ಲಿ ಮಹತ್ವದ ಸಾಮಾಜಿಕ ಬದಲಾವಣೆಗೆ ಕಾರಣವಾಯಿತು. ಹಿಂದೂ ಕೋಡ್ ಬಿಲ್ ಮೂಲಕ ಮಹಿಳೆಯರಿಗೆ ಹಲವು ಹಕ್ಕುಗಳನ್ನು ನೀಡಿದೆ. ಮಹಿಳೆಯರು ಸ್ಥಾನಮಾನವನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಬಿಲ್ ಮಹತ್ವದ ಹೆಜ್ಜೆಯಾಯಿತು ಎಂದರು.</p>.<p>ಕರ್ನಾಟಕ ವಿ.ವಿ ಮಾನವಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಸದಾನಂದ ಬಿ.ಸುಗಂಧಿ ಅವರು ಅಂಬೇಡ್ಕರ್ ವಿಚಾರಧಾರೆಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.</p>.<p>ರಾಮಣ್ಣ ಗಡ್ಡರ ಅವರು ಬುದ್ಧ ಪ್ರಾರ್ಥನೆ ಪಠಣ ಮಾಡಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ ಹೆಬ್ಬಳ್ಳಿ, ಎಂ.ಅರವಿಂದ, ಲಕ್ಷ್ಮಣ ಬಕ್ಕಾಯಿ, ಅಶೋಕ ದೊಡಮನಿ, ವೆಂಕಟೇಶ ಸಗಬಲಾ ಉಪಸ್ಥಿತರಿದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-24-1776030693</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>