<p>ಧಾರವಾಡ: ಸಂವಿಧಾನ ರಚಿಸಿ, ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಿ.ಆರ್.ಅಂಬೇಡ್ಕರ್ ತತ್ವಾದರ್ಶಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮರಾಠಾ ವಿದ್ಯಾಪ್ರಸಾರಕ ಮಂಡಳದ ಕಾರ್ಯಾಧ್ಯಕ್ಷ ಸುನೀಲ ಮೋರೆ ಹೇಳಿದರು.</p>.<p>ನಗರದ ಮರಾಠ ವಿದ್ಯಾಪ್ರಸಾರಕ ಮಂಡಳದಲ್ಲಿ ಮಂಗಳವಾರ ನಡೆದ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.</p>.<p>ಬಿ.ಆರ್.ಅಂಬೇಡ್ಕರ್ ಕುರಿತು ಉಪನ್ಯಾಸ ನೀಡಿದ ಇತಿಹಾಸ ಉಪನ್ಯಾಸಕ ವಿ.ಎಂ.ಪೋಳ ಮಾತನಾಡಿ, ಬಡತನದಲ್ಲಿ ಜನಿಸಿದ ಅಂಬೇಡ್ಕರ್, ಅನೇಕ ಅವಮಾನಕ್ಕೆ ಒಳಗಾದ ಅವರು, ಸಮಾಜದಲ್ಲಿ ಮನೆ ಮಾಡಿದ ಅಸ್ಪೃಶ್ಯತೆ ನಿವಾರಣೆಗೆ ಶ್ರಮಿಸಿದ ಧೀಮಂತ ನಾಯಕರು ಎಂದರು.</p>.<p>ಸಂವಿಧಾನ ರಚಿಸುವ ಮೂಲಕ ಸಮಾಜದ ಎಲ್ಲ ವರ್ಗದವರಿಗೂ ಸಮಾನ ಹಕ್ಕುಗಳು, ಸಾಮಾಜಿಕ ನ್ಯಾಯ ಒದಗಿಸಿದ ಅಂಬೇಡ್ಕರ್, ಹಿಂದೂ ಕೋಡ್ ಬಿಲ್ ಜಾರಿಗೆ ತಂದರು. ಸಂವಿಧಾನ ಬರದಿದ್ದರೆ, ಮೇಲ್ವರ್ಗ ಹಾಗೂ ಕೆಳವರ್ಗದ ಜನಾಂಗ ಅಷ್ಟೇ ಇರುತ್ತಿತ್ತು. ಮಧ್ಯಮ ವರ್ಗವೇ ಇರುತ್ತಿರಲಿಲ್ಲ ಎಂದರು.</p>.<p>ಛತ್ರಪತಿ ಶಿವಾಜಿ ಮಹಾರಾಜ ಪದವಿ ಕಾಲೇಜಿನ ಪ್ರಾಚಾರ್ಯ ಎಂ.ಎಸ್.ಗಾಣಿಗೇರ, ಪ್ರೌಢ ಶಾಲೆ ಮುಖ್ಯಶಿಕ್ಷಕ ಎ.ಬಿ.ಬಾಬರ, ಎಂ.ಎ.ಘಾಟಗೆ ಎಸ್.ಎಂ. ಸಂಕೋಜಿ, ನಾಗರಾಜ ಆರೇರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-24-864774078</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ಸಂವಿಧಾನ ರಚಿಸಿ, ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಿ.ಆರ್.ಅಂಬೇಡ್ಕರ್ ತತ್ವಾದರ್ಶಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮರಾಠಾ ವಿದ್ಯಾಪ್ರಸಾರಕ ಮಂಡಳದ ಕಾರ್ಯಾಧ್ಯಕ್ಷ ಸುನೀಲ ಮೋರೆ ಹೇಳಿದರು.</p>.<p>ನಗರದ ಮರಾಠ ವಿದ್ಯಾಪ್ರಸಾರಕ ಮಂಡಳದಲ್ಲಿ ಮಂಗಳವಾರ ನಡೆದ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.</p>.<p>ಬಿ.ಆರ್.ಅಂಬೇಡ್ಕರ್ ಕುರಿತು ಉಪನ್ಯಾಸ ನೀಡಿದ ಇತಿಹಾಸ ಉಪನ್ಯಾಸಕ ವಿ.ಎಂ.ಪೋಳ ಮಾತನಾಡಿ, ಬಡತನದಲ್ಲಿ ಜನಿಸಿದ ಅಂಬೇಡ್ಕರ್, ಅನೇಕ ಅವಮಾನಕ್ಕೆ ಒಳಗಾದ ಅವರು, ಸಮಾಜದಲ್ಲಿ ಮನೆ ಮಾಡಿದ ಅಸ್ಪೃಶ್ಯತೆ ನಿವಾರಣೆಗೆ ಶ್ರಮಿಸಿದ ಧೀಮಂತ ನಾಯಕರು ಎಂದರು.</p>.<p>ಸಂವಿಧಾನ ರಚಿಸುವ ಮೂಲಕ ಸಮಾಜದ ಎಲ್ಲ ವರ್ಗದವರಿಗೂ ಸಮಾನ ಹಕ್ಕುಗಳು, ಸಾಮಾಜಿಕ ನ್ಯಾಯ ಒದಗಿಸಿದ ಅಂಬೇಡ್ಕರ್, ಹಿಂದೂ ಕೋಡ್ ಬಿಲ್ ಜಾರಿಗೆ ತಂದರು. ಸಂವಿಧಾನ ಬರದಿದ್ದರೆ, ಮೇಲ್ವರ್ಗ ಹಾಗೂ ಕೆಳವರ್ಗದ ಜನಾಂಗ ಅಷ್ಟೇ ಇರುತ್ತಿತ್ತು. ಮಧ್ಯಮ ವರ್ಗವೇ ಇರುತ್ತಿರಲಿಲ್ಲ ಎಂದರು.</p>.<p>ಛತ್ರಪತಿ ಶಿವಾಜಿ ಮಹಾರಾಜ ಪದವಿ ಕಾಲೇಜಿನ ಪ್ರಾಚಾರ್ಯ ಎಂ.ಎಸ್.ಗಾಣಿಗೇರ, ಪ್ರೌಢ ಶಾಲೆ ಮುಖ್ಯಶಿಕ್ಷಕ ಎ.ಬಿ.ಬಾಬರ, ಎಂ.ಎ.ಘಾಟಗೆ ಎಸ್.ಎಂ. ಸಂಕೋಜಿ, ನಾಗರಾಜ ಆರೇರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-24-864774078</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>