<p><strong>ಕುಂದಗೋಳ</strong>: ತಾಲ್ಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ವೇದಾಂತ ಫೌಂಡೇಷನ್ನ ಸಿಎಸ್ಆರ್ ನಿಧಿಯಡಿ ಅಂಗನವಾಡಿ ಕೇಂದ್ರ ‘ನಂಧಘರ್’ ಅನ್ನು ನಿರ್ವಿಸಿ ಒಂದು ವರ್ಷ ಕಳೆದರೂ ಈವರೆಗೂ ಉದ್ಘಾಟಿಸಿಲ್ಲ.</p>.<p>ಗ್ರಾಮದಲ್ಲಿ ಸದ್ಯ ಅಂಗನವಾಡಿ ಕೇಂದ್ರದ ಕೇಂದ್ರದ ಮೇಲ್ಚಾವಣಿ ಬಿರುಕು ಬಿಟ್ಟಿದ್ದು, ಕಟ್ಟಡ ಶಿಥಿಲವಾಗಿದೆ. ಹೊಸ ಕಟ್ಟಡ ಉದ್ಘಾಟನೆಯಾಗದ ಕಾರಣ ಶಿಥಿಲಗೊಂಡ ಹಳೆಯ ಕಟ್ಟಡದಲ್ಲೇ ಮಕ್ಕಳು ಕುಳಿತುಕೊಳ್ಳಬೇಕಿದೆ. </p>.<p>ಹೊಸ ಅಂಗನವಾಡಿ ಕೇಂದ್ರದ ಕಟ್ಟಡದ ಸುತ್ತಮುತ್ತ ಜನ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಗುಟ್ಕಾ, ಸಿಗರೇಟ್, ಮದ್ಯದ ಪ್ಯಾಕೆಟ್ ಅಂಗಳದಲ್ಲಿ ಬಿದ್ದಿವೆ. ಕೇಂದ್ರದ ಎದುರಿನ ಕಟ್ಟೆ ಬಳಿ ಜಾನುವಾರುಗಳನ್ನು ಕಟ್ಟಲಾಗುತ್ತಿದೆ ಎಂದು ಗ್ರಾಮದ ಬಸವರಾಜ ಯೋಗಪ್ಪನವರ ಹೇಳಿದರು.</p>.<p>ಕಟ್ಟಡದ ಗೋಡೆ ಮೇಲೆ ಗೀಚಿ ಅಂದ ಹಾಳು ಮಾಡಲಾಗಿದೆ. ಕೇಂದ್ರದ ಒಳಗೆ ದೂಳು ತುಂಬಿದೆ. ಹೀಗಾಗಿ ಹೊಸ ಕಟ್ಟಡ ನಿರ್ಮಿಸಿದ್ದರೂ ಸೌಲಭ್ಯ ಮಕ್ಕಳಿಗೆ ಸಿಗುತ್ತಿಲ್ಲ.</p>.<p>ನೂತನ ಕೇಂದ್ರದಲ್ಲಿ ಟಿ.ವಿ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಪ್ರತ್ಯೇಕ ಅಡುಗೆ ಕೋಣೆ, ಆಧುನಿಕ ಶೌಚಾಲಯ ಸೌಲಭ್ಯ ಕಲ್ಪಿಸಲಾಗಿದೆ. ಗೋಡೆ ಮೇಲೆ ಬಿಡಿಸಿರುವ ಆಕರ್ಷಕ ಚಿತ್ರಗಳು ಮಕ್ಕಳನ್ನು ಆಕರ್ಷಿಸುತ್ತಿವೆ.</p>.<p>ಹಳೆಯ ಅಂಗನವಾಡಿ ಕೇಂದ್ರದ ಕಟ್ಟಡ ಸುರಕ್ಷಿತವಾಗಿಲ್ಲ. ನೆಲಕ್ಕೆ ಹಾಕಿದ್ದ ಕಲ್ಲುಗಳು ಕುಸಿಯುತ್ತಿವೆ. ಮಕ್ಕಳು ಭಯದಲ್ಲಿ ಪಾಠ ಕೇಳುವಂತಾಗಿದೆ. ಕೂಡಲೇ ಕೇಂದ್ರದ ಉದ್ಘಾಟನೆಗೆ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ.</p>.<div><blockquote>ಸಮಸ್ಯೆ ಗಮನಕ್ಕೆ ಬಂದಿದ್ದು ಶೀಘ್ರ ಅಂಗನವಾಡಿ ಕೇಂದ್ರದ ಕಟ್ಟಡ ಉದ್ಘಾಟನೆಗೆ ಕ್ರಮ ಕೈಗೊಳ್ಳಲಾಗುವುದು – </blockquote><span class="attribution">ಡಾ.ಕಮಲಾ ಬೈಲೂರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಂದಗೋಳ</span></div>.<div><blockquote>ಭಯದಲ್ಲಿ ಮಕ್ಕಳನ್ನು ಅಂಗನವಾಡಿಗೆ ಕಳಿಸಬೇಕಾಗಿದೆ.ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಹೊಸ ಕೇಂದ್ರ ‘ನಂದಘರ್’ ಅನ್ನು ಶೀಘ್ರ ಉದ್ಘಾಟಿಸಬೇಕು.</blockquote><span class="attribution"> – ಸುಧಾ ಕುಸುಗಲ್ ಪಾಲಕಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಗೋಳ</strong>: ತಾಲ್ಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ವೇದಾಂತ ಫೌಂಡೇಷನ್ನ ಸಿಎಸ್ಆರ್ ನಿಧಿಯಡಿ ಅಂಗನವಾಡಿ ಕೇಂದ್ರ ‘ನಂಧಘರ್’ ಅನ್ನು ನಿರ್ವಿಸಿ ಒಂದು ವರ್ಷ ಕಳೆದರೂ ಈವರೆಗೂ ಉದ್ಘಾಟಿಸಿಲ್ಲ.</p>.<p>ಗ್ರಾಮದಲ್ಲಿ ಸದ್ಯ ಅಂಗನವಾಡಿ ಕೇಂದ್ರದ ಕೇಂದ್ರದ ಮೇಲ್ಚಾವಣಿ ಬಿರುಕು ಬಿಟ್ಟಿದ್ದು, ಕಟ್ಟಡ ಶಿಥಿಲವಾಗಿದೆ. ಹೊಸ ಕಟ್ಟಡ ಉದ್ಘಾಟನೆಯಾಗದ ಕಾರಣ ಶಿಥಿಲಗೊಂಡ ಹಳೆಯ ಕಟ್ಟಡದಲ್ಲೇ ಮಕ್ಕಳು ಕುಳಿತುಕೊಳ್ಳಬೇಕಿದೆ. </p>.<p>ಹೊಸ ಅಂಗನವಾಡಿ ಕೇಂದ್ರದ ಕಟ್ಟಡದ ಸುತ್ತಮುತ್ತ ಜನ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಗುಟ್ಕಾ, ಸಿಗರೇಟ್, ಮದ್ಯದ ಪ್ಯಾಕೆಟ್ ಅಂಗಳದಲ್ಲಿ ಬಿದ್ದಿವೆ. ಕೇಂದ್ರದ ಎದುರಿನ ಕಟ್ಟೆ ಬಳಿ ಜಾನುವಾರುಗಳನ್ನು ಕಟ್ಟಲಾಗುತ್ತಿದೆ ಎಂದು ಗ್ರಾಮದ ಬಸವರಾಜ ಯೋಗಪ್ಪನವರ ಹೇಳಿದರು.</p>.<p>ಕಟ್ಟಡದ ಗೋಡೆ ಮೇಲೆ ಗೀಚಿ ಅಂದ ಹಾಳು ಮಾಡಲಾಗಿದೆ. ಕೇಂದ್ರದ ಒಳಗೆ ದೂಳು ತುಂಬಿದೆ. ಹೀಗಾಗಿ ಹೊಸ ಕಟ್ಟಡ ನಿರ್ಮಿಸಿದ್ದರೂ ಸೌಲಭ್ಯ ಮಕ್ಕಳಿಗೆ ಸಿಗುತ್ತಿಲ್ಲ.</p>.<p>ನೂತನ ಕೇಂದ್ರದಲ್ಲಿ ಟಿ.ವಿ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಪ್ರತ್ಯೇಕ ಅಡುಗೆ ಕೋಣೆ, ಆಧುನಿಕ ಶೌಚಾಲಯ ಸೌಲಭ್ಯ ಕಲ್ಪಿಸಲಾಗಿದೆ. ಗೋಡೆ ಮೇಲೆ ಬಿಡಿಸಿರುವ ಆಕರ್ಷಕ ಚಿತ್ರಗಳು ಮಕ್ಕಳನ್ನು ಆಕರ್ಷಿಸುತ್ತಿವೆ.</p>.<p>ಹಳೆಯ ಅಂಗನವಾಡಿ ಕೇಂದ್ರದ ಕಟ್ಟಡ ಸುರಕ್ಷಿತವಾಗಿಲ್ಲ. ನೆಲಕ್ಕೆ ಹಾಕಿದ್ದ ಕಲ್ಲುಗಳು ಕುಸಿಯುತ್ತಿವೆ. ಮಕ್ಕಳು ಭಯದಲ್ಲಿ ಪಾಠ ಕೇಳುವಂತಾಗಿದೆ. ಕೂಡಲೇ ಕೇಂದ್ರದ ಉದ್ಘಾಟನೆಗೆ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ.</p>.<div><blockquote>ಸಮಸ್ಯೆ ಗಮನಕ್ಕೆ ಬಂದಿದ್ದು ಶೀಘ್ರ ಅಂಗನವಾಡಿ ಕೇಂದ್ರದ ಕಟ್ಟಡ ಉದ್ಘಾಟನೆಗೆ ಕ್ರಮ ಕೈಗೊಳ್ಳಲಾಗುವುದು – </blockquote><span class="attribution">ಡಾ.ಕಮಲಾ ಬೈಲೂರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಂದಗೋಳ</span></div>.<div><blockquote>ಭಯದಲ್ಲಿ ಮಕ್ಕಳನ್ನು ಅಂಗನವಾಡಿಗೆ ಕಳಿಸಬೇಕಾಗಿದೆ.ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಹೊಸ ಕೇಂದ್ರ ‘ನಂದಘರ್’ ಅನ್ನು ಶೀಘ್ರ ಉದ್ಘಾಟಿಸಬೇಕು.</blockquote><span class="attribution"> – ಸುಧಾ ಕುಸುಗಲ್ ಪಾಲಕಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>