<p><strong>ಧಾರವಾಡ:</strong> ನಗರದ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಕೈಚಳಕದಲ್ಲಿ ಜಿಲ್ಲಾಧಿಕಾರಿ ಕಚೇರಿ, ನಿವಾಸ ಆವರಣದ ಗೋಡೆ, ಕಾಂಪೌಂಡ್ ಮೇಲೆ ವೈವಿಧ್ಯಮಯ ಚಿತ್ತಾರಗಳು ಅರಳಿವೆ.</p>.<p>ಎರಡು ದಿನಗಳಿಂದ 40 ಚಿತ್ರಕಲಾ ವಿದ್ಯಾರ್ಥಿಗಳು ಹಾಗೂ ನಾಲ್ವರು ಶಿಕ್ಷಕರು ಚಿತ್ರಗಳನ್ನು ರಚಿಸಿ, ಗೋಡೆಯ ಸೊಬಗು ಹೆಚ್ಚಿಸಿದ್ದಾರೆ.</p>.<p>ಸಾಹಿತಿಗಳಾದ ದ.ರಾ.ಬೇಂದ್ರೆ, ವಿ.ಕೃ.ಗೋಕಾಕ, ಗಿರೀಶ ಕಾರ್ನಾಡ, ಸಂಗೀತಗಾರರಾದ ಗಂಗೂಬಾಯಿ ಹಾನಗಲ್, ಭೀಮಸೇನ್ ಜೋಶಿ, ಮಲ್ಲಿಕಾರ್ಜುನ ಮನಸೂರ, ಬಸವರಾಜ ರಾಜಗುರು ಮೊದಲಾದ ಸಾಧಕರ ಚಿತ್ರಗಳನ್ನು ಬಿಡಿಸಿದ್ದಾರೆ.</p>.<p>ಜನಪದ ಕಲೆ, ಮಹಾರಾಷ್ಟ್ರ ಮೂಲದ ವರ್ಲಿಕಲೆಯ ಸೊಬಗು, ಸ್ಥಳೀಯ ಸ್ಮಾರಕಗಳು, ವಾದ್ಯಗಳು, ಗ್ರಾಮೀಣ ಪರಿಸರ, ಪಕ್ಷಿಗಳು, ವನ್ಯಜೀವಿಗಳ ಜೀವನ ಶೈಲಿ ಚಿತ್ರಗಳು ಇವೆ. ಅಕ್ರಾಲಿಕ್, ಅಲ್ಟ್ರೀಮಾ ವರ್ಣದಲ್ಲಿ ಚಿತ್ರಗಳನ್ನು ಬಿಡಿಸಿದ್ದಾರೆ.</p>.<p>‘ಸಾಹಿತ್ಯ, ಸಂಗೀತ, ಪ್ರಕೃತಿ ಮತ್ತು ಕಲೆಗೆ ಸಂಬಂಧಿಸಿದ ಚಿತ್ರಗಳನ್ನು ರಚಿಸಲಾಗಿದೆ. ಹಲವು ವರ್ಷಗಳವರೆಗೆ ಬಾಳಿಕೆ ಬರುತ್ತವೆ. ಚಿತ್ರಗಳು ಜನರ ಕಣ್ಮನ ಸೆಳೆಯುತ್ತವೆ’ ಎಂದು ಪ್ರಾಚಾರ್ಯ ಬಸವರಾಜ ಕುರಿಯವರ ತಿಳಿಸಿದರು.</p>.<p>ಪ್ರೊ.ಎಸ್.ಕೆ. ಪತ್ತಾರ, ಶಿವಕುಮಾರ ಕಂಕನವಾಡಿ ಇದ್ದರು.</p>.<p><strong>‘ಸ್ಥಳೀಯ ಪರಂಪರೆ ಪರಿಚಯ’</strong> </p><p>’ಸ್ಥಳೀಯ ಕಲೆ ಸಾಹಿತ್ಯ ಸಂಗೀತ ಮತ್ತು ರಂಗಭೂಮಿ ಸಾಧಕರನ್ನು ಸರ್ಕಾರಿ ಕಚೇರಿ ಹಾಗೂ ಕಟ್ಟಡಗಳಲ್ಲಿ ಚಿತ್ರಿಸುವುದರಿಂದ ನಮ್ಮ ಪರಂಪರೆ ಸಂಸ್ಕೃತಿ ಸಾಧನೆಯನ್ನು ನೆನಪಿಸಿಕೊಂಡಂತೆ ಆಗುತ್ತದೆ. ಯುವ ಪೀಳಿಗೆಗೆ ನಮ್ಮ ಜಿಲ್ಲೆಯ ಹೆಮ್ಮೆಯ ಸಂಗತಿ ಸಾಧನೆಗಳನ್ನು ತಿಳಿಸುವುದು ಈ ಚಿತ್ರಕಲೆಗಳ ಉದ್ದೇಶವಾಗಿದೆ’ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದರು. ‘ನಿತ್ಯ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಗೆ ವಿವಿಧ ಕಾರಣಗಳಿಗಾಗಿ ಭೇಟಿ ನೀಡುತ್ತಾರೆ. ಚಿತ್ರಗಳನ್ನು ನೋಡಿದಾಗ ಅವರ ಮನ ಮನೆಗಳಿಗೆ ಜಿಲ್ಲೆಯ ಇತಿಹಾಸ ಸಾಧಕರ ಮಾಹಿತಿ ತಲುಪುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ನಗರದ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಕೈಚಳಕದಲ್ಲಿ ಜಿಲ್ಲಾಧಿಕಾರಿ ಕಚೇರಿ, ನಿವಾಸ ಆವರಣದ ಗೋಡೆ, ಕಾಂಪೌಂಡ್ ಮೇಲೆ ವೈವಿಧ್ಯಮಯ ಚಿತ್ತಾರಗಳು ಅರಳಿವೆ.</p>.<p>ಎರಡು ದಿನಗಳಿಂದ 40 ಚಿತ್ರಕಲಾ ವಿದ್ಯಾರ್ಥಿಗಳು ಹಾಗೂ ನಾಲ್ವರು ಶಿಕ್ಷಕರು ಚಿತ್ರಗಳನ್ನು ರಚಿಸಿ, ಗೋಡೆಯ ಸೊಬಗು ಹೆಚ್ಚಿಸಿದ್ದಾರೆ.</p>.<p>ಸಾಹಿತಿಗಳಾದ ದ.ರಾ.ಬೇಂದ್ರೆ, ವಿ.ಕೃ.ಗೋಕಾಕ, ಗಿರೀಶ ಕಾರ್ನಾಡ, ಸಂಗೀತಗಾರರಾದ ಗಂಗೂಬಾಯಿ ಹಾನಗಲ್, ಭೀಮಸೇನ್ ಜೋಶಿ, ಮಲ್ಲಿಕಾರ್ಜುನ ಮನಸೂರ, ಬಸವರಾಜ ರಾಜಗುರು ಮೊದಲಾದ ಸಾಧಕರ ಚಿತ್ರಗಳನ್ನು ಬಿಡಿಸಿದ್ದಾರೆ.</p>.<p>ಜನಪದ ಕಲೆ, ಮಹಾರಾಷ್ಟ್ರ ಮೂಲದ ವರ್ಲಿಕಲೆಯ ಸೊಬಗು, ಸ್ಥಳೀಯ ಸ್ಮಾರಕಗಳು, ವಾದ್ಯಗಳು, ಗ್ರಾಮೀಣ ಪರಿಸರ, ಪಕ್ಷಿಗಳು, ವನ್ಯಜೀವಿಗಳ ಜೀವನ ಶೈಲಿ ಚಿತ್ರಗಳು ಇವೆ. ಅಕ್ರಾಲಿಕ್, ಅಲ್ಟ್ರೀಮಾ ವರ್ಣದಲ್ಲಿ ಚಿತ್ರಗಳನ್ನು ಬಿಡಿಸಿದ್ದಾರೆ.</p>.<p>‘ಸಾಹಿತ್ಯ, ಸಂಗೀತ, ಪ್ರಕೃತಿ ಮತ್ತು ಕಲೆಗೆ ಸಂಬಂಧಿಸಿದ ಚಿತ್ರಗಳನ್ನು ರಚಿಸಲಾಗಿದೆ. ಹಲವು ವರ್ಷಗಳವರೆಗೆ ಬಾಳಿಕೆ ಬರುತ್ತವೆ. ಚಿತ್ರಗಳು ಜನರ ಕಣ್ಮನ ಸೆಳೆಯುತ್ತವೆ’ ಎಂದು ಪ್ರಾಚಾರ್ಯ ಬಸವರಾಜ ಕುರಿಯವರ ತಿಳಿಸಿದರು.</p>.<p>ಪ್ರೊ.ಎಸ್.ಕೆ. ಪತ್ತಾರ, ಶಿವಕುಮಾರ ಕಂಕನವಾಡಿ ಇದ್ದರು.</p>.<p><strong>‘ಸ್ಥಳೀಯ ಪರಂಪರೆ ಪರಿಚಯ’</strong> </p><p>’ಸ್ಥಳೀಯ ಕಲೆ ಸಾಹಿತ್ಯ ಸಂಗೀತ ಮತ್ತು ರಂಗಭೂಮಿ ಸಾಧಕರನ್ನು ಸರ್ಕಾರಿ ಕಚೇರಿ ಹಾಗೂ ಕಟ್ಟಡಗಳಲ್ಲಿ ಚಿತ್ರಿಸುವುದರಿಂದ ನಮ್ಮ ಪರಂಪರೆ ಸಂಸ್ಕೃತಿ ಸಾಧನೆಯನ್ನು ನೆನಪಿಸಿಕೊಂಡಂತೆ ಆಗುತ್ತದೆ. ಯುವ ಪೀಳಿಗೆಗೆ ನಮ್ಮ ಜಿಲ್ಲೆಯ ಹೆಮ್ಮೆಯ ಸಂಗತಿ ಸಾಧನೆಗಳನ್ನು ತಿಳಿಸುವುದು ಈ ಚಿತ್ರಕಲೆಗಳ ಉದ್ದೇಶವಾಗಿದೆ’ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದರು. ‘ನಿತ್ಯ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಗೆ ವಿವಿಧ ಕಾರಣಗಳಿಗಾಗಿ ಭೇಟಿ ನೀಡುತ್ತಾರೆ. ಚಿತ್ರಗಳನ್ನು ನೋಡಿದಾಗ ಅವರ ಮನ ಮನೆಗಳಿಗೆ ಜಿಲ್ಲೆಯ ಇತಿಹಾಸ ಸಾಧಕರ ಮಾಹಿತಿ ತಲುಪುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>