<p>ಧಾರವಾಡ: ‘ಬಸವೇಶ್ವರ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸೈಟಿಯ ರಜತ ಮಹೋತ್ಸವದ ಅಂಗವಾಗಿ ಮಾರ್ಚ್ 25ರಂದು ಬೆಳಿಗ್ಗೆ 11 ಗಂಟೆಗೆ ಉಳವಿ ಚನ್ನಬಸವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವಿವಾಹ ಮಹೋತ್ಸವ ಆಯೋಜಿಸಲಾಗಿದೆ’ ಎಂದು ಸೊಸೈಟಿ ಅಧ್ಯಕ್ಷ ಸಹದೇವ ನಿಗದಿ ಹೇಳಿದರು.</p>.<p>‘ಬೆಳಗಾವಿಯ ಮುಕ್ತಿಮಠದ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಬಳ್ಳಾರಿ ಅಜ್ಜನವರು ಸಾನ್ನಿಧ್ಯ ವಹಿಸುವರು. ಉಳವಿ ಚನ್ನಬಸವೇಶ್ವರ ಧರ್ಮ ಪಂಡ ಸಂಸ್ಥೆಯ ಅಧ್ಯಕ್ಷ ಎಸ್.ಆರ್. ರಾಮನಗೌಡರ, ಕಾರ್ಯಾಧ್ಯಕ್ಷ ಬಿ.ಎಂ. ಸೂರಗೊಂಡ ಪಾಲ್ಗೊಳ್ಳುವರು’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಹು-ಧಾ ಮಹಾನಗರ ಪಾಲಿಕೆ ಮೇಯರ್ ಜ್ಯೋತಿ ಪಾಟೀಲ, ಮಾಜಿ ಶಾಸಕರಾದ ಸೀಮಾ ಮಸೂತಿ, ಅಮೃತ ದೇಸಾಯಿ, ಹು-ಧಾ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ ಪಾಲ್ಗೊಳ್ಳುವರು’ ಎಂದು ಹೇಳಿದರು.</p>.<p>‘24ರಂದು ಸಂಜೆ 5.30ಕ್ಕೆ ಗಾಂಧಿ ಚೌಕ್ದಿಂದ ಕಲಾಭವನದ ವರೆಗೆ 21 ಜೋಡಿ ವಧು-ವರರ ಮೆರವಣಿಗೆ ನಡೆಯಲಿದೆ. ವಿವಾಹವಾದ ಎಲ್ಲ ವಧು-ವರರನ್ನು ಅಯೋಧ್ಯ, ಕಾಸಿ, ಪ್ರಯಾಗರಾಜ್, ಆಗ್ರಾ, ಮಥುರಾ ಸೇರಿದಂತೆ ಪ್ರಮುಖ ಸ್ಥಳಗಳಿಗೆ ಪ್ರವಾಸ ಉಚಿತ ಮಾಡಿಸಲಾಗುವುದು’ ಎಂದರು.</p>.<p>ಮುಖಂಡ ಮೋಹನ ರಾಮದುರ್ಗ, ಮೈಲಾರ ಉಪ್ಪಿನ, ಗದಿಗೆಪ್ಪ ಮುದಿಯಪ್ಪನವರ, ಶಿವಾನಂದ ಗುಂಡಗೋವಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-24-755955933</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ಬಸವೇಶ್ವರ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸೈಟಿಯ ರಜತ ಮಹೋತ್ಸವದ ಅಂಗವಾಗಿ ಮಾರ್ಚ್ 25ರಂದು ಬೆಳಿಗ್ಗೆ 11 ಗಂಟೆಗೆ ಉಳವಿ ಚನ್ನಬಸವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವಿವಾಹ ಮಹೋತ್ಸವ ಆಯೋಜಿಸಲಾಗಿದೆ’ ಎಂದು ಸೊಸೈಟಿ ಅಧ್ಯಕ್ಷ ಸಹದೇವ ನಿಗದಿ ಹೇಳಿದರು.</p>.<p>‘ಬೆಳಗಾವಿಯ ಮುಕ್ತಿಮಠದ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಬಳ್ಳಾರಿ ಅಜ್ಜನವರು ಸಾನ್ನಿಧ್ಯ ವಹಿಸುವರು. ಉಳವಿ ಚನ್ನಬಸವೇಶ್ವರ ಧರ್ಮ ಪಂಡ ಸಂಸ್ಥೆಯ ಅಧ್ಯಕ್ಷ ಎಸ್.ಆರ್. ರಾಮನಗೌಡರ, ಕಾರ್ಯಾಧ್ಯಕ್ಷ ಬಿ.ಎಂ. ಸೂರಗೊಂಡ ಪಾಲ್ಗೊಳ್ಳುವರು’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಹು-ಧಾ ಮಹಾನಗರ ಪಾಲಿಕೆ ಮೇಯರ್ ಜ್ಯೋತಿ ಪಾಟೀಲ, ಮಾಜಿ ಶಾಸಕರಾದ ಸೀಮಾ ಮಸೂತಿ, ಅಮೃತ ದೇಸಾಯಿ, ಹು-ಧಾ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ ಪಾಲ್ಗೊಳ್ಳುವರು’ ಎಂದು ಹೇಳಿದರು.</p>.<p>‘24ರಂದು ಸಂಜೆ 5.30ಕ್ಕೆ ಗಾಂಧಿ ಚೌಕ್ದಿಂದ ಕಲಾಭವನದ ವರೆಗೆ 21 ಜೋಡಿ ವಧು-ವರರ ಮೆರವಣಿಗೆ ನಡೆಯಲಿದೆ. ವಿವಾಹವಾದ ಎಲ್ಲ ವಧು-ವರರನ್ನು ಅಯೋಧ್ಯ, ಕಾಸಿ, ಪ್ರಯಾಗರಾಜ್, ಆಗ್ರಾ, ಮಥುರಾ ಸೇರಿದಂತೆ ಪ್ರಮುಖ ಸ್ಥಳಗಳಿಗೆ ಪ್ರವಾಸ ಉಚಿತ ಮಾಡಿಸಲಾಗುವುದು’ ಎಂದರು.</p>.<p>ಮುಖಂಡ ಮೋಹನ ರಾಮದುರ್ಗ, ಮೈಲಾರ ಉಪ್ಪಿನ, ಗದಿಗೆಪ್ಪ ಮುದಿಯಪ್ಪನವರ, ಶಿವಾನಂದ ಗುಂಡಗೋವಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-24-755955933</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>