<p><strong>ಧಾರವಾಡ: </strong>ಬಿಆರ್ಟಿಎಸ್ ಮಾರ್ಗದ ಅಲ್ಲಲ್ಲಿ ಬಾಕಿ ಇರುವ ಸಮಸ್ಯೆಗಳಿಗೆ ಹಿಂದಿನ ಸರ್ಕಾರಗಳು ಹಾಗೂ ವ್ಯವಸ್ಥಾಪಕ ನಿರ್ದೇಶಕರುಗಳೇ ಕಾರಣ ಎಂದು ಜಗದೀಶ ಶೆಟ್ಟರ್ ಹೇಳಿದರು.</p>.<p>ಅಧಿಕಾರಿ ವರ್ಗಗಳ ಅಲಕ್ಷ್ಯದಿಂದ ಯೋಜನೆ ಹಾಳಾಗಿದೆ ಎಂದು ಇತ್ತೀಚೆಗೆ ಸ್ವಪಕ್ಷದ ಶಾಸಕ ಅರವಿಂದ ಬೆಲ್ಲದ ಅವರು ಆರೋಪ ಮಾಡಿದ್ದರು. ಇದಕ್ಕೆ ಪೂರಕವಾಗಿ ಪ್ರತಿಕ್ರಿಯಿಸಿದ ಶೆಟ್ಟರ್, ‘2012ರಲ್ಲಿ ಭಾರೀ ನಿರೀಕ್ಷೆಯಲ್ಲಿ ಈ ಯೋಜನೆಯನ್ನು ತರಲಾಗಿತ್ತು. ಆದರೆ ನಂತರ ಬಂದ ಸರ್ಕಾರಗಳು ಹಾಗೂ ಬದಲಾದ ವ್ಯವಸ್ಥಾಪಕ ನಿರ್ದೇಶಕರುಗಳಿಂದಾಗಿ ಯೋಜನೆ ಹೀಗಾಗಿದೆ’ ಎಂದರು.</p>.<p>‘ಹೀಗಿದ್ದರೂ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ಬಿಆರ್ಟಿಎಸ್ ಪಡೆದಿದೆ. ಮಾರ್ಗದಲ್ಲಿ ಎಲ್ಲೋ ಸಣ್ಣ ಪುಟ್ಟ ತೊಂದರೆಗಳಿದ್ದರೆ ಅಧಿಕಾರಿಗಳು ನೋಡಿಕೊಳ್ಳುತ್ತಾರೆ. ಈ ಕುರಿತು ಹೆಚ್ಚಿನದೇನನ್ನೂ ಪ್ರತಿಕ್ರಿಯಿಸುವುದಿಲ್ಲ’ ಎಂದರು.</p>.<p>ರಾಜ್ಯಸಭೆ ಟಿಕೆಟ್ ಮತ್ತು ವಿಧಾನ ಪರಿಷತ್ ಚುಣಾವಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಸಿದ ಶೆಟ್ಟರ್, ‘ರಾಜ್ಯಸಭಾ ಚುನಾವಣೆಗೆ ಪಕ್ಷದ ವರಿಷ್ಠರು ಅಭ್ಯರ್ಥಿಗಳ ಆಯ್ಕೆಯನ್ನು ಪೂರ್ಣಗೊಳಿಸಿದ್ದಾರೆ. ಹೀಗಾಗಿ ಈಗ ಈ ಚರ್ಚೆ ಅಪ್ರಸ್ತುತ. ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವ ಸುಮಾರು 30ಕ್ಕೂ ಹೆಚ್ಚು ಅಕಾಂಕ್ಷಿಗಳ ಅರ್ಜಿಗಳು ನನಗೆ ಬಂದಿವೆ. ಚುನಾವಣೆ ಅಧಿಸೂಚನೆ ಹೊರಬಿದ್ದ ನಂತರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ: </strong>ಬಿಆರ್ಟಿಎಸ್ ಮಾರ್ಗದ ಅಲ್ಲಲ್ಲಿ ಬಾಕಿ ಇರುವ ಸಮಸ್ಯೆಗಳಿಗೆ ಹಿಂದಿನ ಸರ್ಕಾರಗಳು ಹಾಗೂ ವ್ಯವಸ್ಥಾಪಕ ನಿರ್ದೇಶಕರುಗಳೇ ಕಾರಣ ಎಂದು ಜಗದೀಶ ಶೆಟ್ಟರ್ ಹೇಳಿದರು.</p>.<p>ಅಧಿಕಾರಿ ವರ್ಗಗಳ ಅಲಕ್ಷ್ಯದಿಂದ ಯೋಜನೆ ಹಾಳಾಗಿದೆ ಎಂದು ಇತ್ತೀಚೆಗೆ ಸ್ವಪಕ್ಷದ ಶಾಸಕ ಅರವಿಂದ ಬೆಲ್ಲದ ಅವರು ಆರೋಪ ಮಾಡಿದ್ದರು. ಇದಕ್ಕೆ ಪೂರಕವಾಗಿ ಪ್ರತಿಕ್ರಿಯಿಸಿದ ಶೆಟ್ಟರ್, ‘2012ರಲ್ಲಿ ಭಾರೀ ನಿರೀಕ್ಷೆಯಲ್ಲಿ ಈ ಯೋಜನೆಯನ್ನು ತರಲಾಗಿತ್ತು. ಆದರೆ ನಂತರ ಬಂದ ಸರ್ಕಾರಗಳು ಹಾಗೂ ಬದಲಾದ ವ್ಯವಸ್ಥಾಪಕ ನಿರ್ದೇಶಕರುಗಳಿಂದಾಗಿ ಯೋಜನೆ ಹೀಗಾಗಿದೆ’ ಎಂದರು.</p>.<p>‘ಹೀಗಿದ್ದರೂ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ಬಿಆರ್ಟಿಎಸ್ ಪಡೆದಿದೆ. ಮಾರ್ಗದಲ್ಲಿ ಎಲ್ಲೋ ಸಣ್ಣ ಪುಟ್ಟ ತೊಂದರೆಗಳಿದ್ದರೆ ಅಧಿಕಾರಿಗಳು ನೋಡಿಕೊಳ್ಳುತ್ತಾರೆ. ಈ ಕುರಿತು ಹೆಚ್ಚಿನದೇನನ್ನೂ ಪ್ರತಿಕ್ರಿಯಿಸುವುದಿಲ್ಲ’ ಎಂದರು.</p>.<p>ರಾಜ್ಯಸಭೆ ಟಿಕೆಟ್ ಮತ್ತು ವಿಧಾನ ಪರಿಷತ್ ಚುಣಾವಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಸಿದ ಶೆಟ್ಟರ್, ‘ರಾಜ್ಯಸಭಾ ಚುನಾವಣೆಗೆ ಪಕ್ಷದ ವರಿಷ್ಠರು ಅಭ್ಯರ್ಥಿಗಳ ಆಯ್ಕೆಯನ್ನು ಪೂರ್ಣಗೊಳಿಸಿದ್ದಾರೆ. ಹೀಗಾಗಿ ಈಗ ಈ ಚರ್ಚೆ ಅಪ್ರಸ್ತುತ. ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವ ಸುಮಾರು 30ಕ್ಕೂ ಹೆಚ್ಚು ಅಕಾಂಕ್ಷಿಗಳ ಅರ್ಜಿಗಳು ನನಗೆ ಬಂದಿವೆ. ಚುನಾವಣೆ ಅಧಿಸೂಚನೆ ಹೊರಬಿದ್ದ ನಂತರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>