<p><strong>ಧಾರವಾಡ:</strong> ‘ಕೇಂದ್ರ ಸರ್ಕಾರದ ಬೆಂಬಲಬೆಲೆಯಡಿ ಎಫ್ಎಕ್ಯೂ ಗುಣಮಟ್ಟದ ಕಡಲೆಕಾಳು ಖರೀದಿ ಕೇಂದ್ರ ಆರಂಭವಾಗಿದ್ದು, ರೈತರು ನೋಂದಣಿ ಮಾಡಿಕೊಳ್ಳಲು ಏಪ್ರಿಲ್ 18 ಕೊನೆಯ ದಿನವಾಗಿದೆ' ಎಂದು ಜಿಲ್ಲಾ ಟಾಸ್ಟ್ಪೋರ್ಸ್ ಸಮಿತಿಯ ಅಧ್ಯಕ್ಷ ಭುವನೇಶ ಪಾಟೀಲ ತಿಳಿಸಿದ್ದಾರೆ.</p>.<p>‘ಒಟ್ಟು 25 ಖರೀದಿ ಕೇಂದ್ರಗಳಲ್ಲಿ ನೋಂದಾಯಿತ ರೈತರಿಂದ ಏಪ್ರಿಲ್ 28ರವರೆಗೆ ಕಡಲೆ ಖರೀದಿಸಲಾಗುತ್ತದೆ. ಪ್ರತಿ ಕ್ವಿಂಟಲ್ ಕಡಲೆಗೆ ₹5,875 ದರ ನಿಗದಿಯಾಗಿದೆ. ಪ್ರತಿ ರೈತರಿಂದ ಎಕರೆಗೆ ಗರಿಷ್ಠ 4 ಕ್ವಿಂಟಲ್ನಂತೆ ಒಟ್ಟು 40 ಕ್ವಿಂಟಲ್ ಖರೀದಿಸಲು ಅವಕಾಶವಿದೆ. ತೇವಾಂಶ ಪ್ರಮಾಣ ಶೇ 12ಕ್ಕಿಂತ ಕಡಿಮೆ ಇರಬೇಕು’ ಎಂದಿದ್ದಾರೆ.</p>.<p>‘ಆಧಾರ್ ಮೂಲ ಹಾಗೂ ನಕಲು ಪ್ರತಿ, ಆಧಾರ್ ಜೋಡಣೆಯಾದ ಬ್ಯಾಂಕ್ ಪಾಸ್ಪುಸ್ತಕದ ಪ್ರತಿ ತರಬೇಕು. ಗುಣಮಟ್ಟ ಚೆನ್ನಾಗಿರುವ, ಉತ್ತಮ ಗಾತ್ರ, ಬಣ್ಣ ಮತ್ತು ಆಕಾರದ, ಮಣ್ಣಿನಿಂದ ಪ್ರತ್ಯೇಕಿಸಿ, ಸ್ವಚ್ಛಗೊಳಿಸಿ ಹಾಗೂ ಕ್ರಿಮಿಕೀಟಗಳಿಂದ ಮುಕ್ತವಾಗಿರುವ ಕಡಲೆಯನ್ನು ಖರೀದಿಸಲಾಗುತ್ತದೆ’ ಎಂದು ಹೇಳಿದ್ದಾರೆ.</p>.<p>‘ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಕಡಲೆಕಾಳು ಖರೀದಿಸಲಾಗುವುದು. ಮಾಹಿತಿಗೆ ಧಾರವಾಡ, ಹುಬ್ಬಳ್ಳಿ, ಕುಂದಗೋಳ ಮತ್ತು ಅಣ್ಣಿಗೇರಿ ತಹಶೀಲ್ದಾರ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ, ಶಾಖಾ ವ್ಯವಸ್ಥಾಪಕರ ದೂ.ಸಂ: 0836-2004419 ಸಂಪರ್ಕಿಸಬಹುದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಕೇಂದ್ರ ಸರ್ಕಾರದ ಬೆಂಬಲಬೆಲೆಯಡಿ ಎಫ್ಎಕ್ಯೂ ಗುಣಮಟ್ಟದ ಕಡಲೆಕಾಳು ಖರೀದಿ ಕೇಂದ್ರ ಆರಂಭವಾಗಿದ್ದು, ರೈತರು ನೋಂದಣಿ ಮಾಡಿಕೊಳ್ಳಲು ಏಪ್ರಿಲ್ 18 ಕೊನೆಯ ದಿನವಾಗಿದೆ' ಎಂದು ಜಿಲ್ಲಾ ಟಾಸ್ಟ್ಪೋರ್ಸ್ ಸಮಿತಿಯ ಅಧ್ಯಕ್ಷ ಭುವನೇಶ ಪಾಟೀಲ ತಿಳಿಸಿದ್ದಾರೆ.</p>.<p>‘ಒಟ್ಟು 25 ಖರೀದಿ ಕೇಂದ್ರಗಳಲ್ಲಿ ನೋಂದಾಯಿತ ರೈತರಿಂದ ಏಪ್ರಿಲ್ 28ರವರೆಗೆ ಕಡಲೆ ಖರೀದಿಸಲಾಗುತ್ತದೆ. ಪ್ರತಿ ಕ್ವಿಂಟಲ್ ಕಡಲೆಗೆ ₹5,875 ದರ ನಿಗದಿಯಾಗಿದೆ. ಪ್ರತಿ ರೈತರಿಂದ ಎಕರೆಗೆ ಗರಿಷ್ಠ 4 ಕ್ವಿಂಟಲ್ನಂತೆ ಒಟ್ಟು 40 ಕ್ವಿಂಟಲ್ ಖರೀದಿಸಲು ಅವಕಾಶವಿದೆ. ತೇವಾಂಶ ಪ್ರಮಾಣ ಶೇ 12ಕ್ಕಿಂತ ಕಡಿಮೆ ಇರಬೇಕು’ ಎಂದಿದ್ದಾರೆ.</p>.<p>‘ಆಧಾರ್ ಮೂಲ ಹಾಗೂ ನಕಲು ಪ್ರತಿ, ಆಧಾರ್ ಜೋಡಣೆಯಾದ ಬ್ಯಾಂಕ್ ಪಾಸ್ಪುಸ್ತಕದ ಪ್ರತಿ ತರಬೇಕು. ಗುಣಮಟ್ಟ ಚೆನ್ನಾಗಿರುವ, ಉತ್ತಮ ಗಾತ್ರ, ಬಣ್ಣ ಮತ್ತು ಆಕಾರದ, ಮಣ್ಣಿನಿಂದ ಪ್ರತ್ಯೇಕಿಸಿ, ಸ್ವಚ್ಛಗೊಳಿಸಿ ಹಾಗೂ ಕ್ರಿಮಿಕೀಟಗಳಿಂದ ಮುಕ್ತವಾಗಿರುವ ಕಡಲೆಯನ್ನು ಖರೀದಿಸಲಾಗುತ್ತದೆ’ ಎಂದು ಹೇಳಿದ್ದಾರೆ.</p>.<p>‘ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಕಡಲೆಕಾಳು ಖರೀದಿಸಲಾಗುವುದು. ಮಾಹಿತಿಗೆ ಧಾರವಾಡ, ಹುಬ್ಬಳ್ಳಿ, ಕುಂದಗೋಳ ಮತ್ತು ಅಣ್ಣಿಗೇರಿ ತಹಶೀಲ್ದಾರ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ, ಶಾಖಾ ವ್ಯವಸ್ಥಾಪಕರ ದೂ.ಸಂ: 0836-2004419 ಸಂಪರ್ಕಿಸಬಹುದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>