<p><strong>ಧಾರವಾಡ</strong>: ‘ಕಾಂಗ್ರೆಸ್ ಯುವ ಘಟಕದ ಮುಖಂಡ ಫೈರೋಜ್ ಖಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಹು–ಧಾ ಮಹಾನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದರು. </p><p>ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಆರೋಪಿಗಳನ್ನು ಕೋರ್ಟ್ಗೆ ಹಾಜರುಪಡಿಸಲಾಗಿದೆ. ಕೋರ್ಟ್ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ’ ಎಂದರು.</p><p>‘ಪ್ರತ್ಯಕ್ಷದರ್ಶಿಗಳ ಹೇಳಿಕೆ ಪಡೆಯಲಾಗುತ್ತಿದೆ. ಆರೋಪಿಗಳನ್ನು ಗುರುತಿಸುವ ನಿಟ್ಟಿನಲ್ಲಿ ‘ಟೆಸ್ಟ್ ಐಡೆಂಟಿಪಿಕೇಷನ್ ಪರೇಡ್‘ ಮಾಡಿಸಲಾಗುವುದು. ಈ ‘ಪರೇಡ್‘ಗೆ ಕೋರ್ಟ್ ಅನುಮತಿ ಕೋರಲಾಗುವುದು’ ಎಂದು ತಿಳಿಸಿದರು.</p><p>‘ವೈಯುಕ್ತಿಕ ಸಂಘರ್ಷ ಹತ್ಯೆಗೆ ಕಾರಣ. ಫೈರೋಜ್ ಕಿರಿಕಿರಿ ಮಾಡುತ್ತಿದ್ದ ಎಂದು ಪ್ರಮುಖ ಆರೋಪಿ ವಿಚಾರಣೆಯಲ್ಲಿ ಹೇಳಿದ್ದಾನೆ. ಆರೋಪಿಗಳ ಪೈಕಿ ಕೆಲವರು ಕ್ರಿಮಿನಲ್ ಹಿನ್ನೆಲೆಯವರು ಇದ್ಧಾರೆ. ಇನ್ನು ಕೆಲ ಆರೋಪಿಗಳ ಪತ್ತೆಗಾಗಿ ಶೋಧ ಮುಂದುವರಿದಿದೆ’ ಎಂದರು. </p><p>‘ಫೈರೋಜ್ಗೆ ಮದುವೆ ನಿಗದಿಯಾಗಿತ್ತು. ಆತ ಆಮಂತ್ರಣ ಪತ್ರಿಕೆ ಹಂಚುವ ಕಾರ್ಯದಲ್ಲಿ ತೊಡಗಿದ್ದ. ದುಷ್ಕರ್ಮಿಗಳು ಕೆಲ ತಿಂಗಳ ಹಿಂದೆಯೇ ಫೈರೋಜ್ ಹತ್ಯೆಗೆ ಸಂಚು ರೂಪಿಸಿದ್ದಾರೆ. ಹೊಂಚು ಹಾಕಿ ಏ.10ರಂದು ರಾತ್ರಿ ಮನೆಗೆ ನುಗ್ಗಿ ಫೈರೋಜ್ನನ್ನು ಹತ್ಯೆ ಮಾಡಿದ್ದಾರೆ’ ಎಂದು ತಿಳಿಸಿದರು.</p>.ಅನುಚಿತವಾಗಿ ಸ್ಪರ್ಶಿಸಿದ್ದ ನಿರ್ದೇಶಕ, ಲವ್ ಜಿಹಾದ್ ಆರೋಪ ಸುಳ್ಳು: ಮೊನಾಲಿಸಾ.ರೌಡಿಶೀಟರ್ ಆರಿಫ್ ಕೊಲೆ ಪ್ರಕರಣ: 7 ಪ್ರಮುಖ ಆರೋಪಿಗಳ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ಕಾಂಗ್ರೆಸ್ ಯುವ ಘಟಕದ ಮುಖಂಡ ಫೈರೋಜ್ ಖಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಹು–ಧಾ ಮಹಾನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದರು. </p><p>ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಆರೋಪಿಗಳನ್ನು ಕೋರ್ಟ್ಗೆ ಹಾಜರುಪಡಿಸಲಾಗಿದೆ. ಕೋರ್ಟ್ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ’ ಎಂದರು.</p><p>‘ಪ್ರತ್ಯಕ್ಷದರ್ಶಿಗಳ ಹೇಳಿಕೆ ಪಡೆಯಲಾಗುತ್ತಿದೆ. ಆರೋಪಿಗಳನ್ನು ಗುರುತಿಸುವ ನಿಟ್ಟಿನಲ್ಲಿ ‘ಟೆಸ್ಟ್ ಐಡೆಂಟಿಪಿಕೇಷನ್ ಪರೇಡ್‘ ಮಾಡಿಸಲಾಗುವುದು. ಈ ‘ಪರೇಡ್‘ಗೆ ಕೋರ್ಟ್ ಅನುಮತಿ ಕೋರಲಾಗುವುದು’ ಎಂದು ತಿಳಿಸಿದರು.</p><p>‘ವೈಯುಕ್ತಿಕ ಸಂಘರ್ಷ ಹತ್ಯೆಗೆ ಕಾರಣ. ಫೈರೋಜ್ ಕಿರಿಕಿರಿ ಮಾಡುತ್ತಿದ್ದ ಎಂದು ಪ್ರಮುಖ ಆರೋಪಿ ವಿಚಾರಣೆಯಲ್ಲಿ ಹೇಳಿದ್ದಾನೆ. ಆರೋಪಿಗಳ ಪೈಕಿ ಕೆಲವರು ಕ್ರಿಮಿನಲ್ ಹಿನ್ನೆಲೆಯವರು ಇದ್ಧಾರೆ. ಇನ್ನು ಕೆಲ ಆರೋಪಿಗಳ ಪತ್ತೆಗಾಗಿ ಶೋಧ ಮುಂದುವರಿದಿದೆ’ ಎಂದರು. </p><p>‘ಫೈರೋಜ್ಗೆ ಮದುವೆ ನಿಗದಿಯಾಗಿತ್ತು. ಆತ ಆಮಂತ್ರಣ ಪತ್ರಿಕೆ ಹಂಚುವ ಕಾರ್ಯದಲ್ಲಿ ತೊಡಗಿದ್ದ. ದುಷ್ಕರ್ಮಿಗಳು ಕೆಲ ತಿಂಗಳ ಹಿಂದೆಯೇ ಫೈರೋಜ್ ಹತ್ಯೆಗೆ ಸಂಚು ರೂಪಿಸಿದ್ದಾರೆ. ಹೊಂಚು ಹಾಕಿ ಏ.10ರಂದು ರಾತ್ರಿ ಮನೆಗೆ ನುಗ್ಗಿ ಫೈರೋಜ್ನನ್ನು ಹತ್ಯೆ ಮಾಡಿದ್ದಾರೆ’ ಎಂದು ತಿಳಿಸಿದರು.</p>.ಅನುಚಿತವಾಗಿ ಸ್ಪರ್ಶಿಸಿದ್ದ ನಿರ್ದೇಶಕ, ಲವ್ ಜಿಹಾದ್ ಆರೋಪ ಸುಳ್ಳು: ಮೊನಾಲಿಸಾ.ರೌಡಿಶೀಟರ್ ಆರಿಫ್ ಕೊಲೆ ಪ್ರಕರಣ: 7 ಪ್ರಮುಖ ಆರೋಪಿಗಳ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>