<p>ಧಾರವಾಡ: ‘ಕಾಂಗ್ರೆಸ್ ಮುಖಂಡ ಫೈರೋಜ್ ಖಾನ್ ಪಠಾಣ್ ಕೊಲೆ ಪ್ರಕರಣದ ವಿಚಾರಣೆ ನಿಟ್ಟಿನಲ್ಲಿ ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ತಿಳಿಸಿದರು.</p>.<p>ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬ್ಲೂಕಾರ್ನರ್ ನೋಟಿಸ್ ಜಾರಿಗೊಳಿಸಿದ್ದಾರೆ. ಪೊಲೀಸರು ಕ್ರಮ ವಹಿಸುತ್ತಾರೆ’ ಎಂದರು.</p>.<p>‘ವಿನಯ ಕುಲಕರ್ಣಿ ವಿಚಾರದಲ್ಲಿ ಏ.25ರಂದು ನಗರದಲ್ಲಿ ಮೌನ ಮೆರವಣಿಗೆ ನಡೆಸಿರುವುದಕ್ಕೆ ಒಪ್ಪಿಗೆ ಇದೆ. ಸಭೆಯಲ್ಲಿ ಯಾರು ಏನು ಮಾತನಾಡಿದ್ದಾರೆ ಎಂದು ಗೊತ್ತಿಲ್ಲ’ ಎಂದು ಉತ್ತರಿಸಿದರು.</p>.<p>‘ಎಪಿಎಂಸಿ ಸಮಗ್ರ ವರದಿ ನೀಡಲು ತಿಳಿಸಿದ್ದೇನೆ. ಎಪಿಎಂಸಿ ಅಭಿವೃದ್ಧಿಗೆ ಸಾರ್ವಜನಿಕ–ಖಾಸಗಿ (ಪಿಪಿಪಿ) ಸಹಭಾಗಿತ್ವದಲ್ಲಿ ಯೋಜನೆ ರೂಪಿಸುವ ಚಿಂತನೆ ಇದೆ’ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-24-980991215</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ಕಾಂಗ್ರೆಸ್ ಮುಖಂಡ ಫೈರೋಜ್ ಖಾನ್ ಪಠಾಣ್ ಕೊಲೆ ಪ್ರಕರಣದ ವಿಚಾರಣೆ ನಿಟ್ಟಿನಲ್ಲಿ ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ತಿಳಿಸಿದರು.</p>.<p>ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬ್ಲೂಕಾರ್ನರ್ ನೋಟಿಸ್ ಜಾರಿಗೊಳಿಸಿದ್ದಾರೆ. ಪೊಲೀಸರು ಕ್ರಮ ವಹಿಸುತ್ತಾರೆ’ ಎಂದರು.</p>.<p>‘ವಿನಯ ಕುಲಕರ್ಣಿ ವಿಚಾರದಲ್ಲಿ ಏ.25ರಂದು ನಗರದಲ್ಲಿ ಮೌನ ಮೆರವಣಿಗೆ ನಡೆಸಿರುವುದಕ್ಕೆ ಒಪ್ಪಿಗೆ ಇದೆ. ಸಭೆಯಲ್ಲಿ ಯಾರು ಏನು ಮಾತನಾಡಿದ್ದಾರೆ ಎಂದು ಗೊತ್ತಿಲ್ಲ’ ಎಂದು ಉತ್ತರಿಸಿದರು.</p>.<p>‘ಎಪಿಎಂಸಿ ಸಮಗ್ರ ವರದಿ ನೀಡಲು ತಿಳಿಸಿದ್ದೇನೆ. ಎಪಿಎಂಸಿ ಅಭಿವೃದ್ಧಿಗೆ ಸಾರ್ವಜನಿಕ–ಖಾಸಗಿ (ಪಿಪಿಪಿ) ಸಹಭಾಗಿತ್ವದಲ್ಲಿ ಯೋಜನೆ ರೂಪಿಸುವ ಚಿಂತನೆ ಇದೆ’ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-24-980991215</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>