<p>ಧಾರವಾಡ: ಪಾಲಿಕೆ ವಿಭಜನೆ ಪ್ರಸ್ತಾವ ಕೈಬಿಡುವಂತೆ ರಾಜ್ಯಪಾಲರಿಗೆ ಶಾಸಕ ಅರವಿಂದ ಬೆಲ್ಲದ ಬರೆದಿರುವ ಪತ್ರಹಿಂಪಡೆಬೇಕೆಂದು ಆಗ್ರಹಿಸಿ ಕಾಂಗ್ರೆಸ್ ನವರು ಮರಾಠಾ ಕಾಲೊನಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅವರ ನಿವಾಸದ ಎದುರು ಸಮಾವೇಶಗೊಂಡು ಪ್ರತಿಭಟನೆ ನಡೆಸಿದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಅರವಿಂದ ಬೆಲ್ಲದ, ಮೇಯರ್ ಜ್ಯೋತಿ ಪಾಟೀಲ, ಪಾಲಿಕೆ ಸಭಾನಾಯಕ ಈರೇಶ ಅಂಚಟಗೇರಿ ವಿರುದ್ಧ ಘೋಷಣೆ ಕೂಗಿದರು.</p>.<p>ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ಮಾತನಾಡಿ, ‘ಪ್ರತ್ಯೇಕ ಪಾಲಿಕೆ ರಚನೆಯಲ್ಲಿ ಶಾಸಕ ಅರವಿಂದ ಬೆಲ್ಲದ ಅವರು ದಂದ್ವ ನಿಲುವು ಅನುಸರಿಸುತ್ತಿರುವುದು ಖಂಡನೀಯ. ಕೂಡಲೇ ರಾಜ್ಯಪಾಲರಿಗೆ ಬರೆದಿರುವ ಪತ್ರವನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.</p>.<p>ಪ್ರತಿಭಟನಾಕಾರ ಜತೆಗೆ ಮಾತನಾಡಿದ ಚಂದ್ರಕಾಂತ ಬೆಲ್ಲದ, ‘ಹುಬ್ಬಳ್ಳಿ ಮನೆಯಲ್ಲಿ ಅರವಿಂದ ಬೆಲ್ಲದ ಇರುತ್ತಾರೆ. ಅಲ್ಲಿ ಹೋಗಿ ಅವರ ಗಮನ ಸೆಳೆಯಬೇಕು’ ಎಂದರು.</p>.<p>ಪ್ರತಿಭಟನಕಾರರು ವಿಶ್ವಕರ್ಮ ವೃತ್ತದಲ್ಲಿ ಕೆಲ ಹೊತ್ತು ರಸ್ತೆ ತಡೆ ನಡೆಸಿದರು. ನಾಗರಾಜ ಗುರಿಕಾರ, ಕೆ.ಪಿ. ನೀರಲಕಟ್ಟಿ, ಆನಂದ ಮುಶಣ್ಣವರ, ಸ್ವಾತಿ ಮಾಳಗಿ, ಮುದಕೇಶ ಮಾದರ ಪ್ರತಿಭಟನೆಯಲ್ಲಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-24-839736276</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ಪಾಲಿಕೆ ವಿಭಜನೆ ಪ್ರಸ್ತಾವ ಕೈಬಿಡುವಂತೆ ರಾಜ್ಯಪಾಲರಿಗೆ ಶಾಸಕ ಅರವಿಂದ ಬೆಲ್ಲದ ಬರೆದಿರುವ ಪತ್ರಹಿಂಪಡೆಬೇಕೆಂದು ಆಗ್ರಹಿಸಿ ಕಾಂಗ್ರೆಸ್ ನವರು ಮರಾಠಾ ಕಾಲೊನಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅವರ ನಿವಾಸದ ಎದುರು ಸಮಾವೇಶಗೊಂಡು ಪ್ರತಿಭಟನೆ ನಡೆಸಿದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಅರವಿಂದ ಬೆಲ್ಲದ, ಮೇಯರ್ ಜ್ಯೋತಿ ಪಾಟೀಲ, ಪಾಲಿಕೆ ಸಭಾನಾಯಕ ಈರೇಶ ಅಂಚಟಗೇರಿ ವಿರುದ್ಧ ಘೋಷಣೆ ಕೂಗಿದರು.</p>.<p>ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ಮಾತನಾಡಿ, ‘ಪ್ರತ್ಯೇಕ ಪಾಲಿಕೆ ರಚನೆಯಲ್ಲಿ ಶಾಸಕ ಅರವಿಂದ ಬೆಲ್ಲದ ಅವರು ದಂದ್ವ ನಿಲುವು ಅನುಸರಿಸುತ್ತಿರುವುದು ಖಂಡನೀಯ. ಕೂಡಲೇ ರಾಜ್ಯಪಾಲರಿಗೆ ಬರೆದಿರುವ ಪತ್ರವನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.</p>.<p>ಪ್ರತಿಭಟನಾಕಾರ ಜತೆಗೆ ಮಾತನಾಡಿದ ಚಂದ್ರಕಾಂತ ಬೆಲ್ಲದ, ‘ಹುಬ್ಬಳ್ಳಿ ಮನೆಯಲ್ಲಿ ಅರವಿಂದ ಬೆಲ್ಲದ ಇರುತ್ತಾರೆ. ಅಲ್ಲಿ ಹೋಗಿ ಅವರ ಗಮನ ಸೆಳೆಯಬೇಕು’ ಎಂದರು.</p>.<p>ಪ್ರತಿಭಟನಕಾರರು ವಿಶ್ವಕರ್ಮ ವೃತ್ತದಲ್ಲಿ ಕೆಲ ಹೊತ್ತು ರಸ್ತೆ ತಡೆ ನಡೆಸಿದರು. ನಾಗರಾಜ ಗುರಿಕಾರ, ಕೆ.ಪಿ. ನೀರಲಕಟ್ಟಿ, ಆನಂದ ಮುಶಣ್ಣವರ, ಸ್ವಾತಿ ಮಾಳಗಿ, ಮುದಕೇಶ ಮಾದರ ಪ್ರತಿಭಟನೆಯಲ್ಲಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-24-839736276</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>