<p><strong>ಹುಬ್ಬಳ್ಳಿ:</strong> <a href="https://www.prajavani.net/tags/Dharwad" target="_blank">ಧಾರವಾಡ</a> <a href="https://www.prajavani.net/tags/loksabha-elections-2019" target="_blank">ಲೋಕಸಭಾ</a> ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಅಂತಿಮ ಹಂತದಲ್ಲಿದ್ದು, ಇಂದು (ಸೋಮವಾರ) ಸಂಜೆ ವೇಳೆಗೆ ಟಿಕೆಟ್ ಘೋಷಣೆಯಾಗಲಿದೆ ಎಂದು ಕಂದಾಯ ಸಚಿವ <a href="https://www.prajavani.net/tags/deshpande" target="_blank">ಆರ್.ವಿ. ದೇಶಪಾಂಡೆ</a> ಹೇಳಿದರು.</p>.<p>ಇಲ್ಲಿನ ವಿಮಾನನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು 'ಈ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆ ವಿಷಯದಲ್ಲಿ ಸ್ವಲ್ಪ ಗೊಂದಲ ಆಗಿದ್ದು ನಿಜ. ಶೀಘ್ರವೇ ಇದು ಪರಿಹಾರವಾಗಲಿದೆ. ಕಾಂಗ್ರೆಸ್ ಯಾವತ್ತೂ ಜಾತಿ ಆಧಾರದ ಮೇಲೆ ಟಿಕೆಟ್ ನೀಡುವುದಿಲ್ಲ ಎಂದರು.</p>.<p>ದೇಶಪಾಂಡೆ ಅವರ ಜೊತೆಯಲ್ಲೇ ಬಂದ ಟಿಕೆಟ್ ಆಕಾಂಕ್ಷಿ ವಿನಯ ಕುಲಕರ್ಣಿ 'ಟಿಕೆಟ್ ನನಗೇ ಕೊಡಬೇಕು ಎಂದು ಪಟ್ಟು ಹಿಡಿದಿರುವುದು ನಿಜ. ಆದರೆ, ಚುನಾವಣೆಯನ್ನು ನಾನೊಬ್ಬನೇ ಎದುರಿಸಲು ಆಗುವುದಿಲ್ಲ. ಎಲ್ಲರೂ ಸೇರಿ ಕೆಲಸ ಮಾಡಬೇಕಾಗುತ್ತದೆ' ಎಂದರು.</p>.<p>ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಪ್ರಶ್ನೆಯೇ ಬರುವುದಿಲ್ಲ. ಪಕ್ಷ ನನಗೇ ಟಿಕೆಟ್ ನೀಡುತ್ತದೆ ಎನ್ನುವುದು ಖಾತ್ರಿ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಟಿಕೆಟ್ಗಾಗಿ ವಿನಯ ಕುಲಕರ್ಣಿ ಹಾಗೂ ಪ್ರೊ ಐ.ಜಿ. ಸನದಿ ನಡುವೆ ಪೈಪೋಟಿ ಎರ್ಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> <a href="https://www.prajavani.net/tags/Dharwad" target="_blank">ಧಾರವಾಡ</a> <a href="https://www.prajavani.net/tags/loksabha-elections-2019" target="_blank">ಲೋಕಸಭಾ</a> ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಅಂತಿಮ ಹಂತದಲ್ಲಿದ್ದು, ಇಂದು (ಸೋಮವಾರ) ಸಂಜೆ ವೇಳೆಗೆ ಟಿಕೆಟ್ ಘೋಷಣೆಯಾಗಲಿದೆ ಎಂದು ಕಂದಾಯ ಸಚಿವ <a href="https://www.prajavani.net/tags/deshpande" target="_blank">ಆರ್.ವಿ. ದೇಶಪಾಂಡೆ</a> ಹೇಳಿದರು.</p>.<p>ಇಲ್ಲಿನ ವಿಮಾನನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು 'ಈ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆ ವಿಷಯದಲ್ಲಿ ಸ್ವಲ್ಪ ಗೊಂದಲ ಆಗಿದ್ದು ನಿಜ. ಶೀಘ್ರವೇ ಇದು ಪರಿಹಾರವಾಗಲಿದೆ. ಕಾಂಗ್ರೆಸ್ ಯಾವತ್ತೂ ಜಾತಿ ಆಧಾರದ ಮೇಲೆ ಟಿಕೆಟ್ ನೀಡುವುದಿಲ್ಲ ಎಂದರು.</p>.<p>ದೇಶಪಾಂಡೆ ಅವರ ಜೊತೆಯಲ್ಲೇ ಬಂದ ಟಿಕೆಟ್ ಆಕಾಂಕ್ಷಿ ವಿನಯ ಕುಲಕರ್ಣಿ 'ಟಿಕೆಟ್ ನನಗೇ ಕೊಡಬೇಕು ಎಂದು ಪಟ್ಟು ಹಿಡಿದಿರುವುದು ನಿಜ. ಆದರೆ, ಚುನಾವಣೆಯನ್ನು ನಾನೊಬ್ಬನೇ ಎದುರಿಸಲು ಆಗುವುದಿಲ್ಲ. ಎಲ್ಲರೂ ಸೇರಿ ಕೆಲಸ ಮಾಡಬೇಕಾಗುತ್ತದೆ' ಎಂದರು.</p>.<p>ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಪ್ರಶ್ನೆಯೇ ಬರುವುದಿಲ್ಲ. ಪಕ್ಷ ನನಗೇ ಟಿಕೆಟ್ ನೀಡುತ್ತದೆ ಎನ್ನುವುದು ಖಾತ್ರಿ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಟಿಕೆಟ್ಗಾಗಿ ವಿನಯ ಕುಲಕರ್ಣಿ ಹಾಗೂ ಪ್ರೊ ಐ.ಜಿ. ಸನದಿ ನಡುವೆ ಪೈಪೋಟಿ ಎರ್ಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>