<p><strong>ಧಾರವಾಡ:</strong> ವಿಮಾದಾರಗೆ ಆಸ್ಪತ್ರೆಯ ಚಿಕಿತ್ಸೆ ವೆಚ್ಚ ನೀಡದ ಪ್ರಕರಣದಲ್ಲಿ ಎಚ್ಡಿಎಫ್ಸಿ ಎರ್ಗೋ ವಿಮಾ ಕಂಪನಿಗೆ ಜಿಲ್ಲಾ ಗ್ರಾಹಕರ ಆಯೋಗ ದಂಡ ವಿಧಿಸಿದೆ. ಬಡ್ಡಿಸಮೇತ ಚಿಕಿತ್ಸೆ ವೆಚ್ಚ ನೀಡಲು ಆದೇಶಿಸಿದೆ.</p>.<p>ಆಯೋಗದ ಅಧ್ಯಕ್ಷ ಈಶಪ್ಪ ಭೂತೆ, ಸದಸ್ಯೆ ವಿಶಾಲಾಕ್ಷಿ ಬೋಳಶೆಟ್ಟಿ ಅವರು ಆದೇಶ ನೀಡಿದ್ದಾರೆ. ವಿಮಾದಾರಗೆ ಪರಿಹಾರ ₹ 50 ಸಾವಿರ, ಪ್ರಕರಣದ ವೆಚ್ಚ ₹ 10 ಸಾವಿರ, ಹಾಗೂ ಆಸ್ಪತ್ರೆ ಖರ್ಚು ₹ 11 ಸಾವಿರಕ್ಕೆ (2024 ಆ.15ರಿಂದ) ವಾರ್ಷಿಕ ಶೇ 8 ಬಡ್ಡಿ ಲೆಕ್ಕ ಹಾಕಿ ಮೊತ್ತ ನೀಡಬೇಕು ಎಂದು ಆದೇಶಿಸಿದ್ದಾರೆ.</p>.<p><strong>ಏನಿದು ಪ್ರಕರಣ?:</strong> ಹುಬ್ಬಳ್ಳಿಯ ರಾಜಾಜಿನಗರದ ನಿವಾಸಿ ಯಲ್ಲಪ್ಪ ವಾಲಿಕರ ಅವರು ಪತ್ನಿ, ಮಕ್ಕಳು ಸಹಿತ ಆರೋಗ್ಯ ವಿಮೆ ಮಾಡಿಸಿದ್ದರು. ₹ 23,072 ವಿಮಾ ಕಂತು ಪಾವತಿಸಿದ್ದರು. ಅವರು ಕುಟುಂಬ ಸಮೇತ ಶಿವಮೊಗ್ಗ ಜಿಲ್ಲೆಯ ವಡ್ಡಿಗೇರಿ ಹಳ್ಳಿಗೆ ತೆರಳಿದ್ದರು. ಅಲ್ಲಿ ಪುತ್ರಿ ಮೈತ್ರಿ ಅವರಿಗೆ ಡೆಂಗಿ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಎರಡು ದಿನ ದಾಖಲಾಗಿದ್ದರು. ಆಸ್ಪತ್ರೆಗೆ ₹ 11ಸಾವಿರ ಖರ್ಚಾಗಿತ್ತು. ಯಲ್ಲಪ್ಪ ಅವರು ಚಿಕಿತ್ಸೆ ವೆಚ್ಚ ಪಡೆಯಲು ವಿಮಾ ಕಂಪನಿಗೆ ಮನವಿ ಸಲ್ಲಿಸಿದ್ದರು. ವಿಮಾ ಕಂಪನಿಯವರು ₹ 9 ಸಾವಿರ ನೀಡುವುದಾಗಿ ಹೇಳಿದ್ದರು. ಯಲ್ಲಪ್ಪ ಅವರು 2024 ಡಿ.3ರಂದು ಆಯೋಗಕ್ಕೆ ದೂರು ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ವಿಮಾದಾರಗೆ ಆಸ್ಪತ್ರೆಯ ಚಿಕಿತ್ಸೆ ವೆಚ್ಚ ನೀಡದ ಪ್ರಕರಣದಲ್ಲಿ ಎಚ್ಡಿಎಫ್ಸಿ ಎರ್ಗೋ ವಿಮಾ ಕಂಪನಿಗೆ ಜಿಲ್ಲಾ ಗ್ರಾಹಕರ ಆಯೋಗ ದಂಡ ವಿಧಿಸಿದೆ. ಬಡ್ಡಿಸಮೇತ ಚಿಕಿತ್ಸೆ ವೆಚ್ಚ ನೀಡಲು ಆದೇಶಿಸಿದೆ.</p>.<p>ಆಯೋಗದ ಅಧ್ಯಕ್ಷ ಈಶಪ್ಪ ಭೂತೆ, ಸದಸ್ಯೆ ವಿಶಾಲಾಕ್ಷಿ ಬೋಳಶೆಟ್ಟಿ ಅವರು ಆದೇಶ ನೀಡಿದ್ದಾರೆ. ವಿಮಾದಾರಗೆ ಪರಿಹಾರ ₹ 50 ಸಾವಿರ, ಪ್ರಕರಣದ ವೆಚ್ಚ ₹ 10 ಸಾವಿರ, ಹಾಗೂ ಆಸ್ಪತ್ರೆ ಖರ್ಚು ₹ 11 ಸಾವಿರಕ್ಕೆ (2024 ಆ.15ರಿಂದ) ವಾರ್ಷಿಕ ಶೇ 8 ಬಡ್ಡಿ ಲೆಕ್ಕ ಹಾಕಿ ಮೊತ್ತ ನೀಡಬೇಕು ಎಂದು ಆದೇಶಿಸಿದ್ದಾರೆ.</p>.<p><strong>ಏನಿದು ಪ್ರಕರಣ?:</strong> ಹುಬ್ಬಳ್ಳಿಯ ರಾಜಾಜಿನಗರದ ನಿವಾಸಿ ಯಲ್ಲಪ್ಪ ವಾಲಿಕರ ಅವರು ಪತ್ನಿ, ಮಕ್ಕಳು ಸಹಿತ ಆರೋಗ್ಯ ವಿಮೆ ಮಾಡಿಸಿದ್ದರು. ₹ 23,072 ವಿಮಾ ಕಂತು ಪಾವತಿಸಿದ್ದರು. ಅವರು ಕುಟುಂಬ ಸಮೇತ ಶಿವಮೊಗ್ಗ ಜಿಲ್ಲೆಯ ವಡ್ಡಿಗೇರಿ ಹಳ್ಳಿಗೆ ತೆರಳಿದ್ದರು. ಅಲ್ಲಿ ಪುತ್ರಿ ಮೈತ್ರಿ ಅವರಿಗೆ ಡೆಂಗಿ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಎರಡು ದಿನ ದಾಖಲಾಗಿದ್ದರು. ಆಸ್ಪತ್ರೆಗೆ ₹ 11ಸಾವಿರ ಖರ್ಚಾಗಿತ್ತು. ಯಲ್ಲಪ್ಪ ಅವರು ಚಿಕಿತ್ಸೆ ವೆಚ್ಚ ಪಡೆಯಲು ವಿಮಾ ಕಂಪನಿಗೆ ಮನವಿ ಸಲ್ಲಿಸಿದ್ದರು. ವಿಮಾ ಕಂಪನಿಯವರು ₹ 9 ಸಾವಿರ ನೀಡುವುದಾಗಿ ಹೇಳಿದ್ದರು. ಯಲ್ಲಪ್ಪ ಅವರು 2024 ಡಿ.3ರಂದು ಆಯೋಗಕ್ಕೆ ದೂರು ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>