<p>ಧಾರವಾಡ: ಮನೆ ನಿರ್ಮಿಸಿಕೊಡುವುದಾಗಿ ₹6 ಲಕ್ಷ ಮುಂಗಡ ಹಣ ಪಡೆದು ಕೈಕೊಟ್ಟ ಪ್ರಕರಣದಲ್ಲಿ ವಿಲ್ಲಾಸ್ ಬಿಲ್ಟ್ ಮಾರ್ಟ್ ಬಿಲ್ಡರ್ಗೆ ಜಿಲ್ಲಾ ಗ್ರಾಹಕರ ಆಯೋಗ ದಂಡ ವಿಧಿಸಿದೆ. ಬಡ್ಡಿಸಮೇತ ಹಣ ವಾಪಸ್ ನೀಡುವಂತೆ ಆದೇಶಿಸಿದೆ.</p>.<p>ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯೆ ವಿಶಾಲಾಕ್ಷಿ ಅ ಬೋಳಶೆಟ್ಟಿ ಅವರು ಆದೇಶ ನೀಡಿದ್ದಾರೆ. ಮುಂಗಡ ಪಾವತಿಸಿದ್ದ ₹6 ಲಕ್ಷಕ್ಕೆ ವಾರ್ಷಿಕ ಶೇ 10 ಬಡ್ಡಿ ಲೆಕ್ಕ ಹಾಕಿ ಮೊತ್ತವನ್ನು ಒಂದು ತಿಂಗಳೊಳಗೆ ಪಾವತಿಸಬೇಕು, ಪರಿಹಾರ ₹50 ಸಾವಿರ, ಪ್ರಕರಣದ ವೆಚ್ಚ ₹10 ಸಾವಿರ ನೀಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಹುಬ್ಬಳ್ಳಿಯ ನಂದೀಶ ಹೊನ್ನಿಹಳ್ಳಿ ಅವರು ಉಣಕಲ್ನ ನಿವೇಶನದಲ್ಲಿ ಮನೆ ನಿರ್ಮಿಸಲು ನಿರ್ಧರಿಸಿದ್ದರು. ₹41 ಲಕ್ಷ ವೆಚ್ಚದಲ್ಲಿ 7 ತಿಂಗಳೊಳಗೆ ಮನೆ ನಿರ್ಮಿಸಿಕೊಡಬೇಕು ಎಂದು ಬೆಂಗಳೂರಿನ ಸರ್ಜಾಪುರದ ವಿಲಾಸ ಬೋಸಲೆ ಅವರೊಂದಿಗೆ 2023 ಜೂನ್ 1ರಂದು ಒಪ್ಪಂದ ಮಾಡಿಕೊಂಡಿದ್ದರು. ₹6 ಲಕ್ಷ ಮುಂಗಡವಾಗಿ ಪಾವತಿಸಿದ್ದರು.</p>.<p>ಹಲವು ತಿಂಗಳು ಕಳೆದರೂ ಬಿಲ್ಡರ್ ಮನೆ ನಿರ್ಮಾಣ ಕಾಮಗಾರಿ ಆರಂಭಿಸಲಿಲ್ಲ. ನಂದೀಶ ಅವರು ಬಿಲ್ಡರ್ ವಿರುದ್ಧ ಜಿಲ್ಲಾ ಗ್ರಾಹಕರ ಆಯೋಗಕ್ಕೆ 2024 ಏಪ್ರಿಲ್ 12ರಂದು ದೂರು ಸಲ್ಲಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-19-1016618121</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ಮನೆ ನಿರ್ಮಿಸಿಕೊಡುವುದಾಗಿ ₹6 ಲಕ್ಷ ಮುಂಗಡ ಹಣ ಪಡೆದು ಕೈಕೊಟ್ಟ ಪ್ರಕರಣದಲ್ಲಿ ವಿಲ್ಲಾಸ್ ಬಿಲ್ಟ್ ಮಾರ್ಟ್ ಬಿಲ್ಡರ್ಗೆ ಜಿಲ್ಲಾ ಗ್ರಾಹಕರ ಆಯೋಗ ದಂಡ ವಿಧಿಸಿದೆ. ಬಡ್ಡಿಸಮೇತ ಹಣ ವಾಪಸ್ ನೀಡುವಂತೆ ಆದೇಶಿಸಿದೆ.</p>.<p>ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯೆ ವಿಶಾಲಾಕ್ಷಿ ಅ ಬೋಳಶೆಟ್ಟಿ ಅವರು ಆದೇಶ ನೀಡಿದ್ದಾರೆ. ಮುಂಗಡ ಪಾವತಿಸಿದ್ದ ₹6 ಲಕ್ಷಕ್ಕೆ ವಾರ್ಷಿಕ ಶೇ 10 ಬಡ್ಡಿ ಲೆಕ್ಕ ಹಾಕಿ ಮೊತ್ತವನ್ನು ಒಂದು ತಿಂಗಳೊಳಗೆ ಪಾವತಿಸಬೇಕು, ಪರಿಹಾರ ₹50 ಸಾವಿರ, ಪ್ರಕರಣದ ವೆಚ್ಚ ₹10 ಸಾವಿರ ನೀಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಹುಬ್ಬಳ್ಳಿಯ ನಂದೀಶ ಹೊನ್ನಿಹಳ್ಳಿ ಅವರು ಉಣಕಲ್ನ ನಿವೇಶನದಲ್ಲಿ ಮನೆ ನಿರ್ಮಿಸಲು ನಿರ್ಧರಿಸಿದ್ದರು. ₹41 ಲಕ್ಷ ವೆಚ್ಚದಲ್ಲಿ 7 ತಿಂಗಳೊಳಗೆ ಮನೆ ನಿರ್ಮಿಸಿಕೊಡಬೇಕು ಎಂದು ಬೆಂಗಳೂರಿನ ಸರ್ಜಾಪುರದ ವಿಲಾಸ ಬೋಸಲೆ ಅವರೊಂದಿಗೆ 2023 ಜೂನ್ 1ರಂದು ಒಪ್ಪಂದ ಮಾಡಿಕೊಂಡಿದ್ದರು. ₹6 ಲಕ್ಷ ಮುಂಗಡವಾಗಿ ಪಾವತಿಸಿದ್ದರು.</p>.<p>ಹಲವು ತಿಂಗಳು ಕಳೆದರೂ ಬಿಲ್ಡರ್ ಮನೆ ನಿರ್ಮಾಣ ಕಾಮಗಾರಿ ಆರಂಭಿಸಲಿಲ್ಲ. ನಂದೀಶ ಅವರು ಬಿಲ್ಡರ್ ವಿರುದ್ಧ ಜಿಲ್ಲಾ ಗ್ರಾಹಕರ ಆಯೋಗಕ್ಕೆ 2024 ಏಪ್ರಿಲ್ 12ರಂದು ದೂರು ಸಲ್ಲಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-19-1016618121</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>