‘ಬೆಂಗಳೂರಿನ ಇನ್ಸೈಟ್, ಐಎಎಸ್ ಬಾಬಾ, ಇಂಡಿಯಾ ಫಾರ್ ಐಎಎಸ್ ಸಂಸ್ಥೆಯಲ್ಲಿ ತರಬೇತಿ ಪಡೆದಿದ್ದೇನೆ. ಅದರ ಮುಖ್ಯಸ್ಥರು ನನ್ನ ಬೆನ್ನುತಟ್ಟಿ ಪ್ರೋತ್ಸಾಹಿಸಿದ್ದಾರೆ. ಕನ್ನಡ ವಿಷಯದಲ್ಲಿ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ನನಗೆ ಮಾರ್ಗದರ್ಶನ ಮಾಡಿದರು. ಸರ್ಕಾರಿ ಸೇವೆಯ ಮೂಲಕ ಜನರ ಕೆಲಸ ಮಾಡುವ ಅವಕಾಶ ಸಿಕ್ಕಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ’ ಎಂದು ಸಿದ್ಧಲಿಂಗಪ್ಪ ಪೂಜಾರ ‘ಪ್ರಜಾವಾಣಿ’ಗೆ ತಿಳಿಸಿದರು.