ಗುರುವಾರ, 22 ಜನವರಿ 2026
×
ADVERTISEMENT
ADVERTISEMENT

ಹುಬ್ಬಳ್ಳಿ | 15ನೇ ಹಣಕಾಸು ಯೋಜನೆ: ಕಾಮಗಾರಿ ಕುಂಠಿತ, ಇಚ್ಛಾಶಕ್ತಿ ಕೊರತೆ

Published : 22 ಜನವರಿ 2026, 3:11 IST
Last Updated : 22 ಜನವರಿ 2026, 3:11 IST
ಫಾಲೋ ಮಾಡಿ
Comments
 ನವಲಗುಂದ ತಾಲ್ಲೂಕಿನ ಗುಡಿಸಾಗರ ಗ್ರಾಮದ ಗಟಾರು ನಿರ್ಮಾಣದ ನೈರ್ಮಲೀಕರಣ ಕಾಮಗಾರಿ ಅರ್ಧಕ್ಕೆ ನಿಂತಿರುವುದು
 ನವಲಗುಂದ ತಾಲ್ಲೂಕಿನ ಗುಡಿಸಾಗರ ಗ್ರಾಮದ ಗಟಾರು ನಿರ್ಮಾಣದ ನೈರ್ಮಲೀಕರಣ ಕಾಮಗಾರಿ ಅರ್ಧಕ್ಕೆ ನಿಂತಿರುವುದು
ಜಿಲ್ಲೆಯ 146 ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಂಡು ನಿಗದಿತ ಅವಧಿಯೊಳಗೆ ಯೋಜನೆಯ ಅನುದಾನ ಬಳಕೆ ಮಾಡಬೇಕು ಎಂದು ಕೆಡಿಪಿ ಸಭೆಯಲ್ಲಿ ಪಿಡಿಒಗಳಿಗೆ ಸೂಚಿಸಲಾಗುತ್ತದೆ. ಮತ್ತೊಮ್ಮೆ ಸೂಚನೆ ನೀಡಲಾಗುವುದು.
ಭುವನೇಶ್ ಪಾಟೀಲ್ ಸಿಇಒ ಜಿ.ಪಂ.ಧಾರವಾಡ
ಅನುದಾನದ ಸಮಸ್ಯೆಯಿಂದಾಗಿ ಗುಡಿಸಾಗರ ಗ್ರಾಮದ ಕೆರೆ ಮಾರ್ಗದ ರಸ್ತೆ ದುರಸ್ತಿಯಾಗಿಲ್ಲ. ಯೋಜನೆಗೆ ಸಂಬಂಧಿಸಿದ ನೈರ್ಮಲ್ಯ ಕಾಮಗಾರಿಗಳೂ ಅರ್ಧಕ್ಕೆ ನಿಂತಿವೆ
ವಿರುಪಾಕ್ಷಿ ಬಿಡ್ನಾಳ್ ಗುಡಿಸಾಗರ ಗ್ರಾಮಸ್ಥ 
ಬಿಡುಗಡೆಯಾಗದ ಅನುದಾನ 
‘ನವಲಗುಂದ ತಾಲ್ಲೂಕಿನ ಗುಡಿಸಾಗರ ಗ್ರಾಮ ಪಂಚಾಯಿತಿಗೆ ಯೋಜನೆಗೆ ಸಂಬಂಧಿಸಿದ 2025–26ನೇ ಸಾಲಿಗೆ ₹ 30 ಲಕ್ಷ ಅನುದಾನ ಬರಬೇಕಿತ್ತು. ಇನ್ನೂ ಬಂದಿಲ್ಲ. ಕಳೆದ ಏಪ್ರಿಲ್‌ನಲ್ಲಿಯೇ ಗ್ರಾಮೀಣ ಅಭಿವೃದ್ಧಿ ಕಾಮಗಾರಿಗಳ ವಾರ್ಷಿಕ ಕ್ರಿಯಾಯೋಜನೆ ವರದಿ ಸಲ್ಲಿಸಲಾಗಿತ್ತು. ಅನುದಾನ ಬಿಡುಗಡೆಯಾಗಿಲ್ಲ. ಇದರಿಂದಾಗಿ ಪಂಚಾಯಿತಿ ವ್ಯಾಪ್ತಿಯ ಗುಡಿಸಾಗರ ನಾಗನೂರು ಸೊಟಕನಾಳ ಹಾಗೂ ಕಡದಳ್ಳಿ ಗ್ರಾಮಗಳಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಆಗುತ್ತಿಲ್ಲ’ ಎಂದು ಗುಡಿಸಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ ಗಂಗಪ್ಪ ಗುಡಸಲ ಮನಿ ದೂರುತ್ತಾರೆ.  ‘ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ನಡೆಯುವ ಸಣ್ಣಪುಟ್ಟ ಕಾಮಗಾರಿಗಳಿಗೆ ಬಿಲ್‌ ಪಾವತಿ ಮಾಡಲು ಹಣವಿಲ್ಲ. ಪಂಚಾಯಿತಿಗೆ ಬರುವ ತೆರಿಗೆಯೂ ತುಂಬಾ ಕಡಿಮೆ. ಯೋಜನೆಗೆ ಸಂಬಂಧಿಸಿದ ಅನುದಾನ ಬಂದರೆ ಅರ್ಧಕ್ಕೆ ನಿಂತಿರುವ ಕಾಮಗಾರಿ ಹೊಸ ಕಾಮಗಾರಿಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ‘ ಎನ್ನುತ್ತಾರೆ ಅವರು. 
ಸಕಾಲಕ್ಕೆ ಮುಗಿಯದ ಕಾಮಗಾರಿಗಳು: ಆರೋಪ
‘ಗ್ರಾಮಗಳಲ್ಲಿ ನೀರು ನೈರ್ಮಲ್ಯ ಬಯಲು ಬಹಿರ್ದೆಸೆ ಮುಕ್ತ ಗ್ರಾಮ ನಿರ್ಮಾಣ ಸೇರಿದಂತೆ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳಿಗಾಗಿ ಕೇಂದ್ರ ಸರ್ಕಾರವು ನೇರವಾಗಿ ಆಯಾ ಗ್ರಾಮ ಪಂಚಾಯಿತಿಗಳಿಗೆ ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿಗಳ ಇಚ್ಛಾಸಕ್ತಿ ಕೊರತೆ ಹಾಗೂ ಅನುದಾನದ ಸಮಸ್ಯೆಯಿಂದಾಗಿ ಬಹುತೇಕ ಕಾಮಗಾರಿಗಳು ಸಕಾಲದಲ್ಲಿ ಅನುಷ್ಠಾನವಾಗುತ್ತಿಲ್ಲ’ ಎಂದು ಜಿಲ್ಲಾ ಪಂಚಾಯಿತಿ ಅಧಿಕಾರಿಯೊಬ್ಬರು ದೂರುತ್ತಾರೆ.  ‘15ನೇ ಹಣಕಾಸು ಯೋಜನೆಗೆ ಸಂಬಂಧಿಸಿದ ಅನುದಾನದಲ್ಲಿ ‘ನರೇಗಾ’ ಕಾಮಗಾರಿಗಳನ್ನು ಕೈಗೊಳ್ಳಬಾರದು ಎಂಬ ಸೂಚನೆಯಿದೆ. ಆದರೆ ಕೆಲ ಗ್ರಾಮ ಪಂಚಾಯಿತಿಗಳಲ್ಲಿ ಅನ್ಯಮಾರ್ಗದ ಮೂಲಕ ಈ ಅನುದಾನವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ‘ ಎನ್ನುತ್ತಾರೆ ಅವರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT