<p><strong>ಧಾರವಾಡ</strong>: ‘ಜಿಲ್ಲಾಧಿಕಾರಿಯವರು ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಅವರನ್ನು ವರ್ಗಾವಣೆ ಮಾಡುವಂತೆ ಮುಖ್ಯಕಾರ್ಯದರ್ಶಿಗೆ ಮನವಿ ಮಾಡಿದ್ದೇವೆ’ ಎಂದು ರೈತ ಸೇನಾ ಕರ್ನಾಟಕ ಸಂಘಟನೆ ಅಧ್ಯಕ್ಷ ವೀರೇಶ ಸೊಬರದ ಮಠ ತಿಳಿಸಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ನವಲಗುಂದ ತಾಲ್ಲೂಕಿನ ತಿರ್ಲಾಪೂರದ ರೈತ ಸಿದ್ದಲಿಂಗಪ್ಪ ಶಿವಪ್ಪ ಗುಡಿ ಅವರ ಕಬ್ಜಾದಲ್ಲಿರುವ ಜಮೀನನ್ನು ಹೊಸ ಶರ್ತಿನಿಂದ ಹಳೆಯ ಶರ್ತಿಗೆ ಪರಿವರ್ತಿಸುವಂತೆ ಮನವಿ ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿಯವರು ಈ ಬಗ್ಗೆ ಕ್ರಮ ವಹಿಸಿಲ್ಲ’ ಎಂದು ದೂರಿದರು.</p>.<p>‘13 ವರ್ಷಗಳಿಂದ ಮನವಿಯನ್ನು ಪರಿಗಣಿಸಿಲ್ಲ. ಪುನಃ ಹೊಸ ಶರ್ತು ವಿಧಿಸಲಾಗಿದೆ’ ಎಂದು ದೂರಿದರು.</p>.<p>‘ಸಮಸ್ಯೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಅರ್ಥಮಾಡಿಕೊಳ್ಳಬೇಕು. ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು’ ಎಂದರು.</p>.<p>ಮಲ್ಲಣ್ಣ ಅಲೇಕಾರ, ಸುಭಾಷ್ ಬಾಳೆಕಾಯಿ ಸುದ್ದಿಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ಜಿಲ್ಲಾಧಿಕಾರಿಯವರು ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಅವರನ್ನು ವರ್ಗಾವಣೆ ಮಾಡುವಂತೆ ಮುಖ್ಯಕಾರ್ಯದರ್ಶಿಗೆ ಮನವಿ ಮಾಡಿದ್ದೇವೆ’ ಎಂದು ರೈತ ಸೇನಾ ಕರ್ನಾಟಕ ಸಂಘಟನೆ ಅಧ್ಯಕ್ಷ ವೀರೇಶ ಸೊಬರದ ಮಠ ತಿಳಿಸಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ನವಲಗುಂದ ತಾಲ್ಲೂಕಿನ ತಿರ್ಲಾಪೂರದ ರೈತ ಸಿದ್ದಲಿಂಗಪ್ಪ ಶಿವಪ್ಪ ಗುಡಿ ಅವರ ಕಬ್ಜಾದಲ್ಲಿರುವ ಜಮೀನನ್ನು ಹೊಸ ಶರ್ತಿನಿಂದ ಹಳೆಯ ಶರ್ತಿಗೆ ಪರಿವರ್ತಿಸುವಂತೆ ಮನವಿ ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿಯವರು ಈ ಬಗ್ಗೆ ಕ್ರಮ ವಹಿಸಿಲ್ಲ’ ಎಂದು ದೂರಿದರು.</p>.<p>‘13 ವರ್ಷಗಳಿಂದ ಮನವಿಯನ್ನು ಪರಿಗಣಿಸಿಲ್ಲ. ಪುನಃ ಹೊಸ ಶರ್ತು ವಿಧಿಸಲಾಗಿದೆ’ ಎಂದು ದೂರಿದರು.</p>.<p>‘ಸಮಸ್ಯೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಅರ್ಥಮಾಡಿಕೊಳ್ಳಬೇಕು. ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು’ ಎಂದರು.</p>.<p>ಮಲ್ಲಣ್ಣ ಅಲೇಕಾರ, ಸುಭಾಷ್ ಬಾಳೆಕಾಯಿ ಸುದ್ದಿಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>