<p><strong>ಹುಬ್ಬಳ್ಳಿ</strong>:ಅವಳಿ ನಗರದಲ್ಲಿ ಕೋವಿಡ್ ನಿಯಂತ್ರಣ ಮಾಡುವ ಸಲುವಾಗಿ ಕಠಿಣ ಕ್ರಮಕ್ಕೆ ಮುಂದಾಗಿರುವ ಜಿಲ್ಲಾಡಳಿತ, ವಾರದಲ್ಲಿ ಎರಡು ದಿನ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಿದೆ.</p>.<p>ಉಳಿದಂತೆ ಜೂನ್ 7ರ ತನಕ ವಾರದಲ್ಲಿ ಐದು ದಿನಗಳ ಕಾಲ ಸಂಪೂರ್ಣ ಲಾಕ್ಡೌನ್ ವಿಸ್ತರಿಸಲು ತೀರ್ಮಾನಿಸಿದೆ.</p>.<p>ಹೀಗಾಗಿಜೂನ್ 7ರ ವರೆಗೆ ಪ್ರತಿ ಗುರುವಾರ ಹಾಗೂ ಶುಕ್ರವಾರ ಮಾತ್ರ ಬೆಳಿಗ್ಗೆ 6ರಿಂದ 10 ಗಂಟೆ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.</p>.<p>ಈ ಕುರಿತು ಚರ್ಚಿಸಲು ಭಾನುವಾರ ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ಸಭೆ ನಡೆಯಿತು.</p>.<p>ಸಭೆಯ ಬಳಿಕ ಮಾತನಾಡಿದ ಶೆಟ್ಟರ್ ‘ಜಿಲ್ಲೆಯ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ತಜ್ಞರ ಅಭಿಪ್ರಾಯದಂತೆ ಜೂನ್ 7ರ ತನಕ ಸಂಪೂರ್ಣ ಲಾಕ್ಡೌನ್ ವಿಸ್ತರಿಸಲಾಗಿದೆ. ಅ ಅವಧಿಯಲ್ಲಿ ವೈದ್ಯಕೀಯ ಸೇವೆ ಹೊರತುಪಡಿಸಿ ಉಳಿದ ಸೇವೆಗಳಿಗೆ ಬೆಳಿಗ್ಗೆ 8 ಗಂಟೆ ತನಕ ಮಾತ್ರ ಅವಕಾಶ ಕೊಡಲಾಗಿದೆ. ಸೋಂಕಿನ ಸರಪಳಿ ತುಂಡರಿಸಲು ಕಟ್ಟುನಿಟ್ಟಿನ ಕ್ರಮ ಅಗತ್ಯವಾಗಿದ್ದು, ಸಾರ್ವಜನಿಕರು ಮನೆಯಲ್ಲಿಯೇ ಇದ್ದು ಸಹಕರಿಸಬೇಕು’ ಎಂದು ಕೋರಿದರು.</p>.<p>ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರ್ ಲಾಬೂರಾಮ್, ಮಹಾನಗರ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ, ಹುಬ್ಬಳ್ಳಿ ತಹಶೀಲ್ದಾರ್ ಶಶಿಧರ ಮಾಡ್ಯಾಳ ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p><a href="https://www.prajavani.net/district/gadaga/police-arrested-people-who-sell-remdesivir-injection-in-black-market-832702.html" itemprop="url">ಕಾಳಸಂತೆಯಲ್ಲಿ ₹30 ಸಾವಿರಕ್ಕೆ ರೆಮ್ಡಿಸಿವಿರ್ ಮಾರಾಟ: ನಾಲ್ವರ ಬಂಧನ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>:ಅವಳಿ ನಗರದಲ್ಲಿ ಕೋವಿಡ್ ನಿಯಂತ್ರಣ ಮಾಡುವ ಸಲುವಾಗಿ ಕಠಿಣ ಕ್ರಮಕ್ಕೆ ಮುಂದಾಗಿರುವ ಜಿಲ್ಲಾಡಳಿತ, ವಾರದಲ್ಲಿ ಎರಡು ದಿನ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಿದೆ.</p>.<p>ಉಳಿದಂತೆ ಜೂನ್ 7ರ ತನಕ ವಾರದಲ್ಲಿ ಐದು ದಿನಗಳ ಕಾಲ ಸಂಪೂರ್ಣ ಲಾಕ್ಡೌನ್ ವಿಸ್ತರಿಸಲು ತೀರ್ಮಾನಿಸಿದೆ.</p>.<p>ಹೀಗಾಗಿಜೂನ್ 7ರ ವರೆಗೆ ಪ್ರತಿ ಗುರುವಾರ ಹಾಗೂ ಶುಕ್ರವಾರ ಮಾತ್ರ ಬೆಳಿಗ್ಗೆ 6ರಿಂದ 10 ಗಂಟೆ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.</p>.<p>ಈ ಕುರಿತು ಚರ್ಚಿಸಲು ಭಾನುವಾರ ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ಸಭೆ ನಡೆಯಿತು.</p>.<p>ಸಭೆಯ ಬಳಿಕ ಮಾತನಾಡಿದ ಶೆಟ್ಟರ್ ‘ಜಿಲ್ಲೆಯ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ತಜ್ಞರ ಅಭಿಪ್ರಾಯದಂತೆ ಜೂನ್ 7ರ ತನಕ ಸಂಪೂರ್ಣ ಲಾಕ್ಡೌನ್ ವಿಸ್ತರಿಸಲಾಗಿದೆ. ಅ ಅವಧಿಯಲ್ಲಿ ವೈದ್ಯಕೀಯ ಸೇವೆ ಹೊರತುಪಡಿಸಿ ಉಳಿದ ಸೇವೆಗಳಿಗೆ ಬೆಳಿಗ್ಗೆ 8 ಗಂಟೆ ತನಕ ಮಾತ್ರ ಅವಕಾಶ ಕೊಡಲಾಗಿದೆ. ಸೋಂಕಿನ ಸರಪಳಿ ತುಂಡರಿಸಲು ಕಟ್ಟುನಿಟ್ಟಿನ ಕ್ರಮ ಅಗತ್ಯವಾಗಿದ್ದು, ಸಾರ್ವಜನಿಕರು ಮನೆಯಲ್ಲಿಯೇ ಇದ್ದು ಸಹಕರಿಸಬೇಕು’ ಎಂದು ಕೋರಿದರು.</p>.<p>ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರ್ ಲಾಬೂರಾಮ್, ಮಹಾನಗರ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ, ಹುಬ್ಬಳ್ಳಿ ತಹಶೀಲ್ದಾರ್ ಶಶಿಧರ ಮಾಡ್ಯಾಳ ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p><a href="https://www.prajavani.net/district/gadaga/police-arrested-people-who-sell-remdesivir-injection-in-black-market-832702.html" itemprop="url">ಕಾಳಸಂತೆಯಲ್ಲಿ ₹30 ಸಾವಿರಕ್ಕೆ ರೆಮ್ಡಿಸಿವಿರ್ ಮಾರಾಟ: ನಾಲ್ವರ ಬಂಧನ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>