<p><strong>ಧಾರವಾಡ:</strong> ‘ಶಿಕ್ಷಣವು ಬೌದ್ಧಿಕ ದಾಸ್ಯದಿಂದ ಬಿಡುಗಡೆ ಮಾಡುತ್ತದೆ. ಸ್ವತಂತ್ರವಾಗಿ ಆಲೋಚನೆ ಮಾಡುವ ಶಕ್ತಿ, ಸತ್ಯವನ್ನು ಹೇಳುವ ಧೈರ್ಯ ನೀಡುತ್ತದೆ. ಬಿ.ಆರ್.ಅಂಬೇಡ್ಕರ್ ಅವರು ಅಂಥ ಶಿಕ್ಷಣವನ್ನು ಬಯಸಿದ್ದರು’ ಎಂದು ಪತ್ರಕರ್ತ ದಿನೇಶ್ ಅಮೀನ್ಮಟ್ಟು ಹೇಳಿದರು.</p>.<p>ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಆಲೂರು ವೆಂಕಟರಾವ್ ಭವನದಲ್ಲಿ ಮಂಗಳವಾರ ನಡೆದ ಕೋಮುವಾದ ಅಳಿಸಿ-ಸಂವಿಧಾನ ಉಳಿಸಿ ಜಾಗೃತ ಪ್ರಜ್ಞೆಯ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಪ್ರತಿಯೊಬ್ಬರೂ ಮೂಢನಂಬಿಕೆಗಳನ್ನು ಧಿಕ್ಕರಿಸಬೇಕು. ಧೈರ್ಯ ಹಾಗೂ ಅಂತಃಸತ್ವವನ್ನು ಬೆಳೆಸಿಕೊಳ್ಳಬೇಕು’ ಎಂದರು.</p>.<p>‘ಕೋಮುವಾದಕ್ಕೆ ಬಹುರೂಪವಿದೆ. ಅದಕ್ಕೆ ಮನುವಾದ, ಜಾತೀಯತೆ, ಲಿಂಗಭೇದ ಸೇರಿಸಿ ಸಮಗ್ರ ರೀತಿಯಲ್ಲಿ ಹೋರಾಟ ಮಾಡಿದರೆ ಮಾತ್ರ ಕೋಮುವಾದ ಅಳಿಸಲು ಸಾಧ್ಯವಿದೆ. ಅದಕ್ಕೆ ಜಾಗೃತಿ ಅಗತ್ಯ ಇದೆ’ ಎಂದು ತಿಳಿಸಿದರು.</p>.<p>‘ಅಂಬೇಡ್ಕರ್ ಅವರ ಚಿಂತನೆಗಳನ್ನು ಓದಬೇಕು. ಮನನ ಮಾಡಿಕೊಳ್ಳಬೇಕು. ಮಕ್ಕಳಿಗೆ ಅದನ್ನು ತಿಳಿಸಬೇಕು. ಆಗ ಮಾತ್ರ ವ್ಯಕ್ತಿತ್ವ ಗಟ್ಟಿಗೊಳ್ಳುತ್ತದೆ. ಕೋಮುವಾದ ಅಳಿಸಿ ಸಂವಿಧಾನ ಉಳಿಸಲು ಸಾಧ್ಯವಾಗುತ್ತದೆ’ ಎಂದರು.</p>.<p>ನಿವೃತ್ತ ಪ್ರಾಧ್ಯಾಪಕ ಸಣ್ಣರಾಮ ಮಾತನಾಡಿ, ‘ಮೂಢನಂಬಿಕೆಗಳನ್ನು ಹೋಗಲಾಡಿಸಿ ಸರ್ವರೂ ಸಮಾನತೆಯಿಂದ ಬದುಕುವಂತಾಗಬೇಕು ಎನ್ನುವುದು ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರ ಆಶಯವಾಗಿತ್ತು. ಆ ಮಹನೀಯರ ಚಿಂತನೆಗಳನ್ನು ಪ್ರೊ.ಬಿ.ಕೃಷ್ಣಪ್ಪ ಅವರು ಅಳವಡಿಸಿಕೊಂಡರು. ಖಾಸಗಿ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾತಿ ಹೆಚ್ಚಿಸಬೇಕು ಎಂದು ಪ್ರೊ.ಬಿ.ಕೃಷ್ಣಪ್ಪ ಅವರು ಹೋರಾಟ ಆರಂಭಿಸಿದರು. ಅದನ್ನು ನಾವೆಲ್ಲರೂ ಮುಂದುವರೆಸಬೇಕು’ ಎಂದು ಹೇಳಿದರು.</p>.<p>‘ಕೋಮುವಾದ ಎಂಬುವುದು ಜಾತಿ ಹಾಗೂ ಚತುರ್ವರ್ಣ ವ್ಯವಸ್ಥೆ ಉಳಿಸಿಕೊಳ್ಳುವ ಪ್ರಯತ್ನವಾಗಿದೆ. ಜಾತಿ ವ್ಯವಸ್ಥೆ ನಿರ್ಮೂಲನೆಯಾಗದಿದ್ದರೆ ಸಮಸ್ಯೆಗಳ ನಿವಾರಣೆ ಸಾಧ್ಯವಿಲ್ಲ’ ಎಂದು ಅಭಿಪ್ರಾಯಪಟ್ಟರು.</p>.<p>ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಹನುಮಂತಪ್ಪ ಕಾಕರಗಲ್, ರಮೇಶ ಭಜಂತ್ರಿ, ಎಸ್. ಫಕ್ಕೀರಪ್ಪ ಮುಂಡಗೋಡ, ಬಿ.ಎನ್.ಗಂಗಾಧರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಶಿಕ್ಷಣವು ಬೌದ್ಧಿಕ ದಾಸ್ಯದಿಂದ ಬಿಡುಗಡೆ ಮಾಡುತ್ತದೆ. ಸ್ವತಂತ್ರವಾಗಿ ಆಲೋಚನೆ ಮಾಡುವ ಶಕ್ತಿ, ಸತ್ಯವನ್ನು ಹೇಳುವ ಧೈರ್ಯ ನೀಡುತ್ತದೆ. ಬಿ.ಆರ್.ಅಂಬೇಡ್ಕರ್ ಅವರು ಅಂಥ ಶಿಕ್ಷಣವನ್ನು ಬಯಸಿದ್ದರು’ ಎಂದು ಪತ್ರಕರ್ತ ದಿನೇಶ್ ಅಮೀನ್ಮಟ್ಟು ಹೇಳಿದರು.</p>.<p>ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಆಲೂರು ವೆಂಕಟರಾವ್ ಭವನದಲ್ಲಿ ಮಂಗಳವಾರ ನಡೆದ ಕೋಮುವಾದ ಅಳಿಸಿ-ಸಂವಿಧಾನ ಉಳಿಸಿ ಜಾಗೃತ ಪ್ರಜ್ಞೆಯ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಪ್ರತಿಯೊಬ್ಬರೂ ಮೂಢನಂಬಿಕೆಗಳನ್ನು ಧಿಕ್ಕರಿಸಬೇಕು. ಧೈರ್ಯ ಹಾಗೂ ಅಂತಃಸತ್ವವನ್ನು ಬೆಳೆಸಿಕೊಳ್ಳಬೇಕು’ ಎಂದರು.</p>.<p>‘ಕೋಮುವಾದಕ್ಕೆ ಬಹುರೂಪವಿದೆ. ಅದಕ್ಕೆ ಮನುವಾದ, ಜಾತೀಯತೆ, ಲಿಂಗಭೇದ ಸೇರಿಸಿ ಸಮಗ್ರ ರೀತಿಯಲ್ಲಿ ಹೋರಾಟ ಮಾಡಿದರೆ ಮಾತ್ರ ಕೋಮುವಾದ ಅಳಿಸಲು ಸಾಧ್ಯವಿದೆ. ಅದಕ್ಕೆ ಜಾಗೃತಿ ಅಗತ್ಯ ಇದೆ’ ಎಂದು ತಿಳಿಸಿದರು.</p>.<p>‘ಅಂಬೇಡ್ಕರ್ ಅವರ ಚಿಂತನೆಗಳನ್ನು ಓದಬೇಕು. ಮನನ ಮಾಡಿಕೊಳ್ಳಬೇಕು. ಮಕ್ಕಳಿಗೆ ಅದನ್ನು ತಿಳಿಸಬೇಕು. ಆಗ ಮಾತ್ರ ವ್ಯಕ್ತಿತ್ವ ಗಟ್ಟಿಗೊಳ್ಳುತ್ತದೆ. ಕೋಮುವಾದ ಅಳಿಸಿ ಸಂವಿಧಾನ ಉಳಿಸಲು ಸಾಧ್ಯವಾಗುತ್ತದೆ’ ಎಂದರು.</p>.<p>ನಿವೃತ್ತ ಪ್ರಾಧ್ಯಾಪಕ ಸಣ್ಣರಾಮ ಮಾತನಾಡಿ, ‘ಮೂಢನಂಬಿಕೆಗಳನ್ನು ಹೋಗಲಾಡಿಸಿ ಸರ್ವರೂ ಸಮಾನತೆಯಿಂದ ಬದುಕುವಂತಾಗಬೇಕು ಎನ್ನುವುದು ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರ ಆಶಯವಾಗಿತ್ತು. ಆ ಮಹನೀಯರ ಚಿಂತನೆಗಳನ್ನು ಪ್ರೊ.ಬಿ.ಕೃಷ್ಣಪ್ಪ ಅವರು ಅಳವಡಿಸಿಕೊಂಡರು. ಖಾಸಗಿ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾತಿ ಹೆಚ್ಚಿಸಬೇಕು ಎಂದು ಪ್ರೊ.ಬಿ.ಕೃಷ್ಣಪ್ಪ ಅವರು ಹೋರಾಟ ಆರಂಭಿಸಿದರು. ಅದನ್ನು ನಾವೆಲ್ಲರೂ ಮುಂದುವರೆಸಬೇಕು’ ಎಂದು ಹೇಳಿದರು.</p>.<p>‘ಕೋಮುವಾದ ಎಂಬುವುದು ಜಾತಿ ಹಾಗೂ ಚತುರ್ವರ್ಣ ವ್ಯವಸ್ಥೆ ಉಳಿಸಿಕೊಳ್ಳುವ ಪ್ರಯತ್ನವಾಗಿದೆ. ಜಾತಿ ವ್ಯವಸ್ಥೆ ನಿರ್ಮೂಲನೆಯಾಗದಿದ್ದರೆ ಸಮಸ್ಯೆಗಳ ನಿವಾರಣೆ ಸಾಧ್ಯವಿಲ್ಲ’ ಎಂದು ಅಭಿಪ್ರಾಯಪಟ್ಟರು.</p>.<p>ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಹನುಮಂತಪ್ಪ ಕಾಕರಗಲ್, ರಮೇಶ ಭಜಂತ್ರಿ, ಎಸ್. ಫಕ್ಕೀರಪ್ಪ ಮುಂಡಗೋಡ, ಬಿ.ಎನ್.ಗಂಗಾಧರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>