<p><strong>ಧಾರವಾಡ</strong>: ರೈತರಿಗೆ ರಸಗೊಬ್ಬರ, ಬಿತ್ತನೆ ಬೀಜ, ಕೃಷಿ ಚಟುವಟಿಕೆಗೆ ಪೆಟ್ರೋಲ್, ಡೀಸೆಲ್ ಸಮರ್ಪಕವಾಗಿ ಪೂರೈಸಬೇಕು, ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ₹ 5 ಲಕ್ಷದವರೆಗೆ ಸಾಲ ನೀಡಬೇಕು ಎಂದು ಅಖಿಲ ಭಾರತ ರೈತ ಕೃಷಿಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ಜಿಲ್ಲಾ ಘಟಕದವರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡ ಪ್ರತಿಭಟನಾಕಾರರು ‘ಸಮರ್ಪಕವಾಗಿ ಗೊಬ್ಬರ, ಬೀಜ ಒದಗಿಸಿ’, ‘ಯಾವುದೇ ನಿರ್ಬಂಧ ವಿಧಿಸದೆ ಕೃಷಿ ಚಟುವಟಿಕೆಗೆ ಡೀಸೆಲ್, ಪೆಟ್ರೋಲ್ ಒದಗಿಸಿ’ ಫಲಕಗಳನ್ನು ಪ್ರದರ್ಶಿಸಿದರು.</p>.<p>ಗೊಬ್ಬರ ಮಳಿಗೆ ಮತ್ತು ರೈತ ಸಂಪರ್ಕ ಕೇಂದ್ರಗಳ ಮುಂದೆ ರೈತರು ಬೀಜ, ಗೊಬ್ಬರಕ್ಕಾಗಿ ಸಾಲಗಟ್ಟಿ ನಿಲ್ಲುವಂತಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯೂರಿಯಾ ಡಿಎಪಿ ಗೊಬ್ಬರ ಮತ್ತು ಬೀಜ ಪೂರೈಸಲು ವಿಫಲವಾಗಿವೆ ಎಂದು ಪ್ರತಿಭಟನಾಕಾರರು ದೂರಿದರು.</p>.<p>ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುವುದಕ್ಕೆ ಕಡಿವಾಣ ಹಾಕಬೇಕು. ಯೂರಿಯಾ ಗೊಬ್ಬರದ ಜತೆ ಜಿಂಕ್ ಇತರ ಗೊಬ್ಬರ ನೀಡುವುದನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದರು.</p>.<p>ಸಂಘಟನೆ ಜಿಲ್ಲಾಧ್ಯಕ್ಷೆ ದೀಪಾ ಧಾರವಾಡ, ಗೋವಿಂದ ಕೃಷ್ಣಪ್ಪನವರ್, ಶರಣು ಗೋನವಾರ, ಕಲ್ಲಪ್ಪ ಮೂಷಣ್ಣವರ , ವಿಜಯಲಕ್ಷ್ಮಿ ನಿಕ್ಕಮ್, ರುಕುಮವ್ವ, ಹುಸೇನ್ ಸಾಬ್ ಇದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-24-1587635894</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ರೈತರಿಗೆ ರಸಗೊಬ್ಬರ, ಬಿತ್ತನೆ ಬೀಜ, ಕೃಷಿ ಚಟುವಟಿಕೆಗೆ ಪೆಟ್ರೋಲ್, ಡೀಸೆಲ್ ಸಮರ್ಪಕವಾಗಿ ಪೂರೈಸಬೇಕು, ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ₹ 5 ಲಕ್ಷದವರೆಗೆ ಸಾಲ ನೀಡಬೇಕು ಎಂದು ಅಖಿಲ ಭಾರತ ರೈತ ಕೃಷಿಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ಜಿಲ್ಲಾ ಘಟಕದವರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡ ಪ್ರತಿಭಟನಾಕಾರರು ‘ಸಮರ್ಪಕವಾಗಿ ಗೊಬ್ಬರ, ಬೀಜ ಒದಗಿಸಿ’, ‘ಯಾವುದೇ ನಿರ್ಬಂಧ ವಿಧಿಸದೆ ಕೃಷಿ ಚಟುವಟಿಕೆಗೆ ಡೀಸೆಲ್, ಪೆಟ್ರೋಲ್ ಒದಗಿಸಿ’ ಫಲಕಗಳನ್ನು ಪ್ರದರ್ಶಿಸಿದರು.</p>.<p>ಗೊಬ್ಬರ ಮಳಿಗೆ ಮತ್ತು ರೈತ ಸಂಪರ್ಕ ಕೇಂದ್ರಗಳ ಮುಂದೆ ರೈತರು ಬೀಜ, ಗೊಬ್ಬರಕ್ಕಾಗಿ ಸಾಲಗಟ್ಟಿ ನಿಲ್ಲುವಂತಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯೂರಿಯಾ ಡಿಎಪಿ ಗೊಬ್ಬರ ಮತ್ತು ಬೀಜ ಪೂರೈಸಲು ವಿಫಲವಾಗಿವೆ ಎಂದು ಪ್ರತಿಭಟನಾಕಾರರು ದೂರಿದರು.</p>.<p>ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುವುದಕ್ಕೆ ಕಡಿವಾಣ ಹಾಕಬೇಕು. ಯೂರಿಯಾ ಗೊಬ್ಬರದ ಜತೆ ಜಿಂಕ್ ಇತರ ಗೊಬ್ಬರ ನೀಡುವುದನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದರು.</p>.<p>ಸಂಘಟನೆ ಜಿಲ್ಲಾಧ್ಯಕ್ಷೆ ದೀಪಾ ಧಾರವಾಡ, ಗೋವಿಂದ ಕೃಷ್ಣಪ್ಪನವರ್, ಶರಣು ಗೋನವಾರ, ಕಲ್ಲಪ್ಪ ಮೂಷಣ್ಣವರ , ವಿಜಯಲಕ್ಷ್ಮಿ ನಿಕ್ಕಮ್, ರುಕುಮವ್ವ, ಹುಸೇನ್ ಸಾಬ್ ಇದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-24-1587635894</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>