<p><strong>ಧಾರವಾಡ:</strong> ‘ಶಿಗ್ಗಾವಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಸರ್ಕಾರ ಈವರೆಗೆ ನ್ಯಾಯಸಮ್ಮತ ತನಿಖೆ ನಡೆಸಿಲ್ಲ’ ಎಂದು ಕರ್ನಾಟಕ ರಾಜ್ಯ ಜಾನಪದ ಸ್ನಾತಕೋತ್ತರ ಹಾಗೂ ಸಂಶೋಧಕರ ಒಕ್ಕೂಟದ ಅಧ್ಯಕ್ಷ ಶಿವಸೋಮಪ್ಪ ನಿಟ್ಟೂರು ಆರೋಪಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜುಲೈ 18 ಮತ್ತು 19 ರಂದು ವಿಶ್ವವಿದ್ಯಾಲಯದ ಎದುರು ಅಕ್ರಮ ನೇಮಕಾತಿ ಮೂರನೇ ವರ್ಷದ ಕರಾಳ ದಿನಾ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ’ ಎಂದರು.</p>.<p>‘ಜಾನಪದ ವಿವಿ ಕುಲಪತಿ ಟಿ.ಎಂ.ಭಾಸ್ಕರ ಜುಲೈ 19 ರಂದು ನಿವೃತ್ತಿಯಾಗುತ್ತಾರೆ. ಅವರನ್ನು ತನಿಖೆಗೆ ಒಳಪಡಿಸಬೇಕು. ಈ ಅಕ್ರಮ ನೇಮಕಾತಿಯ ತನಿಖೆಗೆ ನೇಮಿಸಿರುವ ಮೂರು ತನಿಖಾ ತಂಡಗಳಿಂದಲೂ ತನಿಖೆ ಪೂರ್ಣ ಆಗಿರುವ ಬಗ್ಗೆ ಮಾಹಿತಿ ಇಲ್ಲ. ತನಿಖಾ ತಂಡಗಳ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗದಂತೆ ರಾಜಕಾರಣಿಯೊಬ್ಬರು ತಡೆದಿದ್ದಾರೆಂಬ ಆರೋಪಗಳು ಕೇಳಿಬಂದಿದೆ’ ಎಂದು ತಿಳಿಸಿದರು.</p>.<p>ಈಗಲಾದರೂ ಸರ್ಕಾರ ಎಚ್ಚೆತ್ತು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿಸ್ಥರನ್ನು ಪತ್ತೆ ಹಚ್ಚಿ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.</p>.<p>ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಿ.ಎಂ.ದುಗಾಣಿ, ಉಪಾಧ್ಯಕ್ಷ ಎಸ್.ನಾಗರಾಜ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-24-1713048198</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಶಿಗ್ಗಾವಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಸರ್ಕಾರ ಈವರೆಗೆ ನ್ಯಾಯಸಮ್ಮತ ತನಿಖೆ ನಡೆಸಿಲ್ಲ’ ಎಂದು ಕರ್ನಾಟಕ ರಾಜ್ಯ ಜಾನಪದ ಸ್ನಾತಕೋತ್ತರ ಹಾಗೂ ಸಂಶೋಧಕರ ಒಕ್ಕೂಟದ ಅಧ್ಯಕ್ಷ ಶಿವಸೋಮಪ್ಪ ನಿಟ್ಟೂರು ಆರೋಪಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜುಲೈ 18 ಮತ್ತು 19 ರಂದು ವಿಶ್ವವಿದ್ಯಾಲಯದ ಎದುರು ಅಕ್ರಮ ನೇಮಕಾತಿ ಮೂರನೇ ವರ್ಷದ ಕರಾಳ ದಿನಾ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ’ ಎಂದರು.</p>.<p>‘ಜಾನಪದ ವಿವಿ ಕುಲಪತಿ ಟಿ.ಎಂ.ಭಾಸ್ಕರ ಜುಲೈ 19 ರಂದು ನಿವೃತ್ತಿಯಾಗುತ್ತಾರೆ. ಅವರನ್ನು ತನಿಖೆಗೆ ಒಳಪಡಿಸಬೇಕು. ಈ ಅಕ್ರಮ ನೇಮಕಾತಿಯ ತನಿಖೆಗೆ ನೇಮಿಸಿರುವ ಮೂರು ತನಿಖಾ ತಂಡಗಳಿಂದಲೂ ತನಿಖೆ ಪೂರ್ಣ ಆಗಿರುವ ಬಗ್ಗೆ ಮಾಹಿತಿ ಇಲ್ಲ. ತನಿಖಾ ತಂಡಗಳ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗದಂತೆ ರಾಜಕಾರಣಿಯೊಬ್ಬರು ತಡೆದಿದ್ದಾರೆಂಬ ಆರೋಪಗಳು ಕೇಳಿಬಂದಿದೆ’ ಎಂದು ತಿಳಿಸಿದರು.</p>.<p>ಈಗಲಾದರೂ ಸರ್ಕಾರ ಎಚ್ಚೆತ್ತು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿಸ್ಥರನ್ನು ಪತ್ತೆ ಹಚ್ಚಿ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.</p>.<p>ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಿ.ಎಂ.ದುಗಾಣಿ, ಉಪಾಧ್ಯಕ್ಷ ಎಸ್.ನಾಗರಾಜ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-24-1713048198</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>