<p><strong>ಧಾರವಾಡ:</strong> ‘ಸ್ವಾತಂತ್ರ್ಯ ಹೋರಾಟದಲ್ಲಿ ಶಕುಂತಲಾ ಕುರ್ತಕೋಟಿ ಮತ್ತು ಶಂಕರ ಕುರ್ತಕೋಟಿ ಪಾಲ್ಗೊಂಡಿದ್ದರು. ಅವರ ಕೊಡುಗೆಗಳನ್ನು ಸ್ಮರಿಸಬೇಕು, ಆದರ್ಶಗಳನ್ನು ಪಾಲಿಸಬೇಕು’ ಎಂದು ಸಮಾಜ ಪರಿವರ್ತನಾ ಸಮುದಾಯ ಸಂಸ್ಥಾಪಕ ಎಸ್.ಆರ್. ಹಿರೇಮಠ ಹೇಳಿದರು.</p>.<p>ಕರ್ನಾಟಕ ವಿದ್ಯಾವರ್ಧಕ ಸಂಘ, ಗಾಂಧೀ ಶಾಂತಿ ಪ್ರತಿಷ್ಠಾನ ಕೇಂದ್ರ, ಕರ್ನಾಟಕ ವಿ.ವಿ ಗಾಂಧೀ ಅಧ್ಯಯನ ವಿಭಾಗ, ಗರಗ–ಹೆಬ್ಬಳ್ಳಿ–ಧಾರವಾಡ ಖಾದಿ ಕೇಂದ್ರಗಳ ವತಿಯಿಂದ ನಗರದ ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿಭಾನುವಾರ ನಡೆದ ಸ್ವಾತಂತ್ರ್ಯ ಹೋರಾಟಗಾರ್ತಿ ಶಕುಂತಲಾ ಕುರ್ತಕೋಟಿ ಜನ್ಮ ಶತಮಾನೋತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಶಕುಂತಲಾ ಮತ್ತು ಶಂಕರ ಅವರು ಗಾಂಧೀಜಿಯಿಂದ ಪ್ರೇರಿತವಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ದೇಶಕ್ಕಾಗಿ ಜೀವನ ಮುಡಿಪಾಗಿಟ್ಟಿದ್ದರು. ಇಂಥ ಮಹನೀಯರ ಅನುಭವಗಳಿಂದ ಪಾಠ ಕಲಿತು ಪ್ರೇರಣೆ ಪಡೆದಿದ್ದೇವೆ’ ಎಂದರು.</p>.<p>‘ಸ್ವಾತಂತ್ರ್ಯ ಆಂದೋಲನದಲ್ಲಿ ವಸಾಹತುಶಾಹಿ ವಿರುದ್ಧದ ಹಾಗೂ ಸ್ವಾವಲಂಬನೆಯ ಸಂಕೇತವಾಗಿದ್ದ ಖಾದಿ ಸಂಸ್ಕೃತಿಯನ್ನು ಶಂಕರ ಅವರು ಮುಂದುವರಿಸಿದರು, ಶಕುಂತಲಾ ಅವರು ಗಾಂಧೀ ವಿಚಾರಧಾರೆಗಳಲ್ಲಿ (ಅಹಿಂಸೆ, ಸತ್ಯ...) ತೊಡಗಿಸಿಕೊಂಡವರು. ಮಹನೀಯರ ಸಾಧನೆಗಳು, ಕೊಡುಗೆಗಳನ್ನು ಎಲ್ಲರೂ ತಿಳಿದುಕೊಳ್ಳಬೇಕು’ ಎಂದು ಹೇಳಿದರು.</p>.<p>‘ಮಹನೀಯರು ಹೋರಾಟ ಮಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಮತದಾರರಿಂದ ಸೀಮಿತ ಅವಧಿಗೆ ತಾವು ಆಯ್ಕೆಯಾದವರು ಎಂಬುದನ್ನು ಜನಪ್ರತಿನಿಧಿಗಳು ಮರೆಯಬಾರದು. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಸಾರ್ವಭೌಮರು. ದೇಶದ ಪ್ರಜಾಪ್ರಭುತ್ವದ ಸ್ಥಿತಿ ಈಗ ಏನಾಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಅಧಿಕಾರದಲ್ಲಿ ಇರುವವರು ತಪ್ಪು ಮಾಡಿದಾಗ ಅದನ್ನು ತಿಳಿಸಬೇಕು. ಜನರು ಸದಾ ಜಾಗೃತವಾಗಿರಬೇಕು’ ಎಂದರು.</p>.<p>ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಕಾರ್ಯಾಧ್ಯಕ್ಷ ಬಸವಪ್ರಭು ಹೊಸಕೇರಿ, ಕರ್ನಾಟಕ ವಿ.ವಿ ಗಾಂಧೀ ಅಧ್ಯಯನ ಕೇಂದ್ರದ ಮುಖ್ಯಸ್ಥ ಎಸ್.ಜಿ.ಬಶೆಟ್ಟಿ, ಮಾಧುರಿ, ಗೌರವ್ವ, ನೀಲವ್ವ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-24-2070848463</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಸ್ವಾತಂತ್ರ್ಯ ಹೋರಾಟದಲ್ಲಿ ಶಕುಂತಲಾ ಕುರ್ತಕೋಟಿ ಮತ್ತು ಶಂಕರ ಕುರ್ತಕೋಟಿ ಪಾಲ್ಗೊಂಡಿದ್ದರು. ಅವರ ಕೊಡುಗೆಗಳನ್ನು ಸ್ಮರಿಸಬೇಕು, ಆದರ್ಶಗಳನ್ನು ಪಾಲಿಸಬೇಕು’ ಎಂದು ಸಮಾಜ ಪರಿವರ್ತನಾ ಸಮುದಾಯ ಸಂಸ್ಥಾಪಕ ಎಸ್.ಆರ್. ಹಿರೇಮಠ ಹೇಳಿದರು.</p>.<p>ಕರ್ನಾಟಕ ವಿದ್ಯಾವರ್ಧಕ ಸಂಘ, ಗಾಂಧೀ ಶಾಂತಿ ಪ್ರತಿಷ್ಠಾನ ಕೇಂದ್ರ, ಕರ್ನಾಟಕ ವಿ.ವಿ ಗಾಂಧೀ ಅಧ್ಯಯನ ವಿಭಾಗ, ಗರಗ–ಹೆಬ್ಬಳ್ಳಿ–ಧಾರವಾಡ ಖಾದಿ ಕೇಂದ್ರಗಳ ವತಿಯಿಂದ ನಗರದ ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿಭಾನುವಾರ ನಡೆದ ಸ್ವಾತಂತ್ರ್ಯ ಹೋರಾಟಗಾರ್ತಿ ಶಕುಂತಲಾ ಕುರ್ತಕೋಟಿ ಜನ್ಮ ಶತಮಾನೋತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಶಕುಂತಲಾ ಮತ್ತು ಶಂಕರ ಅವರು ಗಾಂಧೀಜಿಯಿಂದ ಪ್ರೇರಿತವಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ದೇಶಕ್ಕಾಗಿ ಜೀವನ ಮುಡಿಪಾಗಿಟ್ಟಿದ್ದರು. ಇಂಥ ಮಹನೀಯರ ಅನುಭವಗಳಿಂದ ಪಾಠ ಕಲಿತು ಪ್ರೇರಣೆ ಪಡೆದಿದ್ದೇವೆ’ ಎಂದರು.</p>.<p>‘ಸ್ವಾತಂತ್ರ್ಯ ಆಂದೋಲನದಲ್ಲಿ ವಸಾಹತುಶಾಹಿ ವಿರುದ್ಧದ ಹಾಗೂ ಸ್ವಾವಲಂಬನೆಯ ಸಂಕೇತವಾಗಿದ್ದ ಖಾದಿ ಸಂಸ್ಕೃತಿಯನ್ನು ಶಂಕರ ಅವರು ಮುಂದುವರಿಸಿದರು, ಶಕುಂತಲಾ ಅವರು ಗಾಂಧೀ ವಿಚಾರಧಾರೆಗಳಲ್ಲಿ (ಅಹಿಂಸೆ, ಸತ್ಯ...) ತೊಡಗಿಸಿಕೊಂಡವರು. ಮಹನೀಯರ ಸಾಧನೆಗಳು, ಕೊಡುಗೆಗಳನ್ನು ಎಲ್ಲರೂ ತಿಳಿದುಕೊಳ್ಳಬೇಕು’ ಎಂದು ಹೇಳಿದರು.</p>.<p>‘ಮಹನೀಯರು ಹೋರಾಟ ಮಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಮತದಾರರಿಂದ ಸೀಮಿತ ಅವಧಿಗೆ ತಾವು ಆಯ್ಕೆಯಾದವರು ಎಂಬುದನ್ನು ಜನಪ್ರತಿನಿಧಿಗಳು ಮರೆಯಬಾರದು. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಸಾರ್ವಭೌಮರು. ದೇಶದ ಪ್ರಜಾಪ್ರಭುತ್ವದ ಸ್ಥಿತಿ ಈಗ ಏನಾಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಅಧಿಕಾರದಲ್ಲಿ ಇರುವವರು ತಪ್ಪು ಮಾಡಿದಾಗ ಅದನ್ನು ತಿಳಿಸಬೇಕು. ಜನರು ಸದಾ ಜಾಗೃತವಾಗಿರಬೇಕು’ ಎಂದರು.</p>.<p>ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಕಾರ್ಯಾಧ್ಯಕ್ಷ ಬಸವಪ್ರಭು ಹೊಸಕೇರಿ, ಕರ್ನಾಟಕ ವಿ.ವಿ ಗಾಂಧೀ ಅಧ್ಯಯನ ಕೇಂದ್ರದ ಮುಖ್ಯಸ್ಥ ಎಸ್.ಜಿ.ಬಶೆಟ್ಟಿ, ಮಾಧುರಿ, ಗೌರವ್ವ, ನೀಲವ್ವ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-24-2070848463</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>