<p><strong>ಧಾರವಾಡ:</strong> ನಗರದ ಹೊಸಯಲ್ಲಾಪುರದ ಕಸ ವಿಲೇವಾರಿ ಘಟಕದಲ್ಲಿ ಕಸ ರಾಶಿಗೆ ಹೊತ್ತಿಕೊಂಡಿರುವ ಬೆಂಕಿ ನಂದಿಸಿ, ಹೊಗೆ ಸಮಸ್ಯೆ ನಿವಾರಿಸಬೇಕೆಂದು ಆಗ್ರಹಿಸಿ ಸ್ಥಳೀಯರು ಕಸ ಸಂಗ್ರಹ ವಾಹನಗಳನ್ನು ತಡೆದು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಘಟಕದ ಬಳಿಯ ಸ್ಮಶಾನದ ರಸ್ತೆಯಲ್ಲಿ ಧರಣಿ ನಡೆಸಿ, ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಘಟಕ ಸ್ಥಳಾಂತರಿಸುವಂತೆ ಒತ್ತಾಯಿಸಿದರು.</p>.<p>ಪ್ರತಿಭಟನಕಾರ ನಿಂಗಾ ರೆಡ್ಡಿ ಮಾತನಾಡಿ, ‘ಕಸ ರಾಶಿಗೆ ಬೆಂಕಿ ಹೊತ್ತಿಕೊಂಡು ಎರಡು ದಿನಗಳಾಗಿದೆ. ಜನ್ನತ್ ನಗರ, ಲಕ್ಷ್ಮಿ ನಗರ, ಗಾಂಧಿ ನಗರ, ವಿದ್ಯಾಗಿರಿ, ಶಿವಾನಂದ ನಗರ, ಟೋಲ್ ನಾಕಾ ಸುತ್ತಲಿನ ಪ್ರದೇಶಗಳಲ್ಲಿ ದಟ್ಟ ಹೊಗೆ ಆವರಿಸಿದೆ. ಘಟಕದ ಸುತ್ತಲಿನ ಪ್ರದೇಶದ ನಿವಾಸಿಗಳು ದುರ್ನಾತ, ಹೊಗೆ ಸಮಸ್ಯೆ ನಡುವೆ ಬದುಕು ಸಾಗಿಸಬೇಕಾಗಿದೆ’ ಎಂದು ಹೇಳಿದರು.</p>.<p>ಸ್ಥಳಕ್ಕೆ ಪೊಲೀಸರು ಆಗಮಿಸಿ, ಪರಿಸ್ಥಿತಿ ನಿಯಂತ್ರಿಸಿದರು. ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ ಮೊದಲಾದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ದಿವಾನ್ ಬಳ್ಳಾರಿ, ಮಣಿಕಂಠ, ಅರುಣ್ ಅಂಗಡಿ, ರಾಜು ಮೆಣಸಿಕಾಯಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<p>ಸೋಮವಾರವೂ ನಡೆದಿದ್ದ ಪ್ರತಿಭಟನೆ: ಹೊಸಯಲ್ಲಾಪುರದ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ ನಂದಿಸಲು ಕ್ರಮವಹಿಸಬೇಕೆಂದು ಆಗ್ರಹಿಸಿ ಸ್ಥಳೀಯರು ನಗರದ ಟೋಲ್ ನಾಕಾ ವೃತ್ತದಲ್ಲಿ ಸೋಮವಾರ ಸಹ ಪ್ರತಿಭಟನೆ ನಡೆಸಿದ್ದರು.</p>.<p>ಹು–ಧಾ ಮಹಾನಗರ ಪಾಲಿಕೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು, ‘ಈ ಸಮಸ್ಯೆಗೆ ಶಾಶ್ವತ ಪರಿಹಾರ ರೂಪಿಸಬೇಕು’ ಎಂದು ಒತ್ತಾಯಿಸಿದ್ದರು.</p>.<p>ಪ್ರತಿಭಟನೆ ಕಾರಣ ಟೋಲ್ ನಾಕಾ ರಸ್ತೆಯಲ್ಲಿ ಕೆಲಹೊತ್ತು ವಾಹನ ಸಂಚಾರ ಸ್ಥಗಿತವಾಗಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರತಿಭಟನಕಾರರ ಮನವೊಲಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<p>Quote - ಹೊಸಯಲ್ಲಾಪುರದ ಕಸ ವಿಲೇವಾರಿ ಘಟಕದಲ್ಲಿ ಅಗ್ನಶಾಮಕ ದಳ ಮತ್ತು ಪಾಲಿಕೆ ಸಿಬ್ಭಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಸ್ನೇಹಲ್ ಆರ್ ಜಿಲ್ಲಾಧಿಕಾರಿ</p>.<p>Quote - ನಾಲ್ಕು ಅಗ್ನಿಶಾಮಕ ವಾಹನ 20 ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಜೆಟ್ಗಳು ಸ್ಪ್ರಿಂಕ್ಲರ್ಗಳನ್ನು ಬಳಸಿ ಅಗ್ನಿ ನಂದಿಸಲಾಗುತ್ತಿದೆ ರಾಜು ತಳವಾರ ಜಿಲ್ಲಾ ಅಗ್ನಿಶಾಮಕ ದಳದ ಪ್ರಭಾರ ಅಧಿಕಾರಿ </p>.<p>Cut-off box - ಪಾಲಿಕೆ ಎದುರು ಕಸ ಸುರಿಯುವ ಎಚ್ಚರಿಕೆ ‘ಜೋರಾಗಿ ಗಾಳಿ ಬೀಸಿದಾಗ ಹೊಗೆ ಮನೆಯೊಳಕ್ಕೆ ನುಗ್ಗುತ್ತದೆ. ಹೊಗೆ ತುಂಬಿಕೊಂಡು ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗುತ್ತದೆ. ಕಸದ ದುರ್ವಾಸನೆಯಿಂದ ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಸುಟ್ಟ ತ್ಯಾಜ್ಯದ ಪುಡಿ ಪಾತ್ರೆ ಬಟ್ಟೆ ವಸ್ತುಗಳ ಮೇಲೆ ಬಿದ್ದಿರುತ್ತದೆ. ಈ ಸಮಸ್ಯೆಯನ್ನು ಸಂಬಂಧಪಟ್ಟವರು ಪರಿಹರಿಸಬೇಕು’ ಎಂದು ಮಹಿಳೆಯೊಬ್ಬರು ಆಗ್ರಹಿಸಿದರು. ‘ಬೆಂಕಿ ನಂದಿಸಿ ಹೊಗೆ ಸಮಸ್ಯೆ ಪರಿಹರಿಸದಿದ್ದರೆ ಹು–ಧಾ ಮಹಾನಗರ ಪಾಲಿಕೆ ಕಚೇರಿ ಎದುರು ಕಸ ಸುರಿದು ಪ್ರತಿಭಟನೆ ನಡೆಸಲಾಗುವುದು’ ಎಂದು ಪ್ರತಿಭಟನಕಾರರು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ನಗರದ ಹೊಸಯಲ್ಲಾಪುರದ ಕಸ ವಿಲೇವಾರಿ ಘಟಕದಲ್ಲಿ ಕಸ ರಾಶಿಗೆ ಹೊತ್ತಿಕೊಂಡಿರುವ ಬೆಂಕಿ ನಂದಿಸಿ, ಹೊಗೆ ಸಮಸ್ಯೆ ನಿವಾರಿಸಬೇಕೆಂದು ಆಗ್ರಹಿಸಿ ಸ್ಥಳೀಯರು ಕಸ ಸಂಗ್ರಹ ವಾಹನಗಳನ್ನು ತಡೆದು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಘಟಕದ ಬಳಿಯ ಸ್ಮಶಾನದ ರಸ್ತೆಯಲ್ಲಿ ಧರಣಿ ನಡೆಸಿ, ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಘಟಕ ಸ್ಥಳಾಂತರಿಸುವಂತೆ ಒತ್ತಾಯಿಸಿದರು.</p>.<p>ಪ್ರತಿಭಟನಕಾರ ನಿಂಗಾ ರೆಡ್ಡಿ ಮಾತನಾಡಿ, ‘ಕಸ ರಾಶಿಗೆ ಬೆಂಕಿ ಹೊತ್ತಿಕೊಂಡು ಎರಡು ದಿನಗಳಾಗಿದೆ. ಜನ್ನತ್ ನಗರ, ಲಕ್ಷ್ಮಿ ನಗರ, ಗಾಂಧಿ ನಗರ, ವಿದ್ಯಾಗಿರಿ, ಶಿವಾನಂದ ನಗರ, ಟೋಲ್ ನಾಕಾ ಸುತ್ತಲಿನ ಪ್ರದೇಶಗಳಲ್ಲಿ ದಟ್ಟ ಹೊಗೆ ಆವರಿಸಿದೆ. ಘಟಕದ ಸುತ್ತಲಿನ ಪ್ರದೇಶದ ನಿವಾಸಿಗಳು ದುರ್ನಾತ, ಹೊಗೆ ಸಮಸ್ಯೆ ನಡುವೆ ಬದುಕು ಸಾಗಿಸಬೇಕಾಗಿದೆ’ ಎಂದು ಹೇಳಿದರು.</p>.<p>ಸ್ಥಳಕ್ಕೆ ಪೊಲೀಸರು ಆಗಮಿಸಿ, ಪರಿಸ್ಥಿತಿ ನಿಯಂತ್ರಿಸಿದರು. ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ ಮೊದಲಾದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ದಿವಾನ್ ಬಳ್ಳಾರಿ, ಮಣಿಕಂಠ, ಅರುಣ್ ಅಂಗಡಿ, ರಾಜು ಮೆಣಸಿಕಾಯಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<p>ಸೋಮವಾರವೂ ನಡೆದಿದ್ದ ಪ್ರತಿಭಟನೆ: ಹೊಸಯಲ್ಲಾಪುರದ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ ನಂದಿಸಲು ಕ್ರಮವಹಿಸಬೇಕೆಂದು ಆಗ್ರಹಿಸಿ ಸ್ಥಳೀಯರು ನಗರದ ಟೋಲ್ ನಾಕಾ ವೃತ್ತದಲ್ಲಿ ಸೋಮವಾರ ಸಹ ಪ್ರತಿಭಟನೆ ನಡೆಸಿದ್ದರು.</p>.<p>ಹು–ಧಾ ಮಹಾನಗರ ಪಾಲಿಕೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು, ‘ಈ ಸಮಸ್ಯೆಗೆ ಶಾಶ್ವತ ಪರಿಹಾರ ರೂಪಿಸಬೇಕು’ ಎಂದು ಒತ್ತಾಯಿಸಿದ್ದರು.</p>.<p>ಪ್ರತಿಭಟನೆ ಕಾರಣ ಟೋಲ್ ನಾಕಾ ರಸ್ತೆಯಲ್ಲಿ ಕೆಲಹೊತ್ತು ವಾಹನ ಸಂಚಾರ ಸ್ಥಗಿತವಾಗಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರತಿಭಟನಕಾರರ ಮನವೊಲಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<p>Quote - ಹೊಸಯಲ್ಲಾಪುರದ ಕಸ ವಿಲೇವಾರಿ ಘಟಕದಲ್ಲಿ ಅಗ್ನಶಾಮಕ ದಳ ಮತ್ತು ಪಾಲಿಕೆ ಸಿಬ್ಭಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಸ್ನೇಹಲ್ ಆರ್ ಜಿಲ್ಲಾಧಿಕಾರಿ</p>.<p>Quote - ನಾಲ್ಕು ಅಗ್ನಿಶಾಮಕ ವಾಹನ 20 ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಜೆಟ್ಗಳು ಸ್ಪ್ರಿಂಕ್ಲರ್ಗಳನ್ನು ಬಳಸಿ ಅಗ್ನಿ ನಂದಿಸಲಾಗುತ್ತಿದೆ ರಾಜು ತಳವಾರ ಜಿಲ್ಲಾ ಅಗ್ನಿಶಾಮಕ ದಳದ ಪ್ರಭಾರ ಅಧಿಕಾರಿ </p>.<p>Cut-off box - ಪಾಲಿಕೆ ಎದುರು ಕಸ ಸುರಿಯುವ ಎಚ್ಚರಿಕೆ ‘ಜೋರಾಗಿ ಗಾಳಿ ಬೀಸಿದಾಗ ಹೊಗೆ ಮನೆಯೊಳಕ್ಕೆ ನುಗ್ಗುತ್ತದೆ. ಹೊಗೆ ತುಂಬಿಕೊಂಡು ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗುತ್ತದೆ. ಕಸದ ದುರ್ವಾಸನೆಯಿಂದ ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಸುಟ್ಟ ತ್ಯಾಜ್ಯದ ಪುಡಿ ಪಾತ್ರೆ ಬಟ್ಟೆ ವಸ್ತುಗಳ ಮೇಲೆ ಬಿದ್ದಿರುತ್ತದೆ. ಈ ಸಮಸ್ಯೆಯನ್ನು ಸಂಬಂಧಪಟ್ಟವರು ಪರಿಹರಿಸಬೇಕು’ ಎಂದು ಮಹಿಳೆಯೊಬ್ಬರು ಆಗ್ರಹಿಸಿದರು. ‘ಬೆಂಕಿ ನಂದಿಸಿ ಹೊಗೆ ಸಮಸ್ಯೆ ಪರಿಹರಿಸದಿದ್ದರೆ ಹು–ಧಾ ಮಹಾನಗರ ಪಾಲಿಕೆ ಕಚೇರಿ ಎದುರು ಕಸ ಸುರಿದು ಪ್ರತಿಭಟನೆ ನಡೆಸಲಾಗುವುದು’ ಎಂದು ಪ್ರತಿಭಟನಕಾರರು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>