<p>ಧಾರವಾಡ: ‘ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದೇನೆ’ ಎಂದು ಬಿಜೆಪಿ ಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಸುಧೀಂದ್ರ ದೇಶಪಾಂಡೆ ತಿಳಿಸಿದರು.</p>.<p>ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿಯಿಂದ ಸ್ಪರ್ಧಿಸುವ ಪ್ರಬಲ ಆಕಾಂಕ್ಷೆ ಇತ್ತು. ಆದರೆ, ಬಿಜೆಪಿ ಎಸ್.ವಿ. ಸಂಕನೂರ ಅವರನ್ನು ಮತ್ತೆ ಕಣಕ್ಕಿಳಿಸಲು ನಿರ್ಧರಿಸಿದೆ. ಹೀಗಾಗಿ, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ’ ಎಂದರು.</p>.<p>‘ಎಸ್.ವಿ. ಸಂಕನೂರ ಅವರು ಎರಡು ಬಾರಿ ಆಯ್ಕೆಯಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿದೆ. ಈ ಬಾರಿ ಬಿಜೆಪಿ ಬೇರೆಯವರಿಗೆ ಅವಕಾಶ ನೀಡಬೇಕಿತ್ತು. 2022ರಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುವ ಅವಕಾಶ ಕೈತಪ್ಪಿತ್ತು. ಬಸವರಾಜ ಹೊರಟ್ಟಿ ಸ್ಪರ್ಧಿಸಿದ್ದರು. ಬಿಜೆಪಿಯಲ್ಲಿ ಇರುತ್ತೇನೆ, ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ’ ಎಂದು ತಿಳಿಸಿದರು.</p>.<p>‘ಸಿಂಡಿಕೇಟ್ ಸದಸ್ಯನಾಗಿ ಕಾರ್ಯನಿರ್ವಹಿಸಿದ, ವಿವಿಧ ಚುನಾವಣೆಯಲ್ಲಿ ಪಕ್ಷ ವಹಿಸಿದ್ದ ಜವಾಬ್ದಾರಿ ನಿರ್ವಹಿಸಿದ ಅನುಭವ ಇದೆ. ಆರ್ಎಸ್ಎಸ್ನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದೇನೆ. ಧಾರವಾಡ, ಹಾವೇರಿ, ಗದಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಓಡಾಡಿದ್ದೇನೆ. ಮತದಾರರು ಬೆಂಬಲ ನೀಡುವ ವಿಶ್ವಾಸ ಇದೆ’ ಎಂದರು.</p>.<p>ನರಸಿಂಗರಾವ್ ಸೋಮಲಾಪುರ, ಬಸವರಾಜ ಶಿರಸಂಗಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-24-414019102</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದೇನೆ’ ಎಂದು ಬಿಜೆಪಿ ಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಸುಧೀಂದ್ರ ದೇಶಪಾಂಡೆ ತಿಳಿಸಿದರು.</p>.<p>ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿಯಿಂದ ಸ್ಪರ್ಧಿಸುವ ಪ್ರಬಲ ಆಕಾಂಕ್ಷೆ ಇತ್ತು. ಆದರೆ, ಬಿಜೆಪಿ ಎಸ್.ವಿ. ಸಂಕನೂರ ಅವರನ್ನು ಮತ್ತೆ ಕಣಕ್ಕಿಳಿಸಲು ನಿರ್ಧರಿಸಿದೆ. ಹೀಗಾಗಿ, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ’ ಎಂದರು.</p>.<p>‘ಎಸ್.ವಿ. ಸಂಕನೂರ ಅವರು ಎರಡು ಬಾರಿ ಆಯ್ಕೆಯಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿದೆ. ಈ ಬಾರಿ ಬಿಜೆಪಿ ಬೇರೆಯವರಿಗೆ ಅವಕಾಶ ನೀಡಬೇಕಿತ್ತು. 2022ರಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುವ ಅವಕಾಶ ಕೈತಪ್ಪಿತ್ತು. ಬಸವರಾಜ ಹೊರಟ್ಟಿ ಸ್ಪರ್ಧಿಸಿದ್ದರು. ಬಿಜೆಪಿಯಲ್ಲಿ ಇರುತ್ತೇನೆ, ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ’ ಎಂದು ತಿಳಿಸಿದರು.</p>.<p>‘ಸಿಂಡಿಕೇಟ್ ಸದಸ್ಯನಾಗಿ ಕಾರ್ಯನಿರ್ವಹಿಸಿದ, ವಿವಿಧ ಚುನಾವಣೆಯಲ್ಲಿ ಪಕ್ಷ ವಹಿಸಿದ್ದ ಜವಾಬ್ದಾರಿ ನಿರ್ವಹಿಸಿದ ಅನುಭವ ಇದೆ. ಆರ್ಎಸ್ಎಸ್ನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದೇನೆ. ಧಾರವಾಡ, ಹಾವೇರಿ, ಗದಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಓಡಾಡಿದ್ದೇನೆ. ಮತದಾರರು ಬೆಂಬಲ ನೀಡುವ ವಿಶ್ವಾಸ ಇದೆ’ ಎಂದರು.</p>.<p>ನರಸಿಂಗರಾವ್ ಸೋಮಲಾಪುರ, ಬಸವರಾಜ ಶಿರಸಂಗಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-24-414019102</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>