<p><strong>ಧಾರವಾಡ:</strong> ‘ಹುಬ್ಬಳ್ಳಿ– ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ವಿಧೇಯಕವನ್ನು ಅನುಮೋದಿಸುವಂತೆ ರಾಜ್ಯಪಾಲರಿಗೆ ಒತ್ತಡ ಹೇರಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ತಿಳಿಸಿದರು.</p>.<p>ಇಲ್ಲಿನ ಸರ್ಕ್ಯೂಟ್ ಹೌಸ್ನಲ್ಲಿ ಮಂಗಳವಾರ ನಡೆದ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿಯವರ ಜತೆ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಕಾನೂನು ಸಚಿವ ಎಚ್.ಕೆ. ಪಾಟೀಲ ಸಹಿತ ಎಲ್ಲರ ಅಭಿಪ್ರಾಯ ಪಡೆಯಲಾಗುವುದು. ರಾಜ್ಯಪಾಲರ ಭೇಟಿಗೆ ಸಮಯ ಕೇಳುತ್ತೇವೆ. ವಿಧೇಯಕಕ್ಕೆ ಅನುಮೋದನೆ ನಿಟ್ಟಿನಲ್ಲಿ ಕಾನೂನಾತ್ಮಕ ಹೋರಾಟಗಳನ್ನು ಮಾಡುತ್ತೇವೆ’ ಎಂದು ತಿಳಿಸಿದರು.</p>.<p>ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ನಿಟ್ಟಿನಲ್ಲಿ ಹೋರಾಟ ಸಮಿತಿಯವರು ಹೋರಾಟಗಳನ್ನು ನಡೆಸಬೇಕು. ಸಾರ್ವಜನಿಕವಾಗಿ ಒತ್ತಡಗಳನ್ನು ಹೇರಬೇಕು. ವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಂಘಟನೆ, ಹೋರಾಟ ಅವಶ್ಯ. ದೊಡ್ಡ ಪ್ರಮಾಣದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು’ ಎಂದರು.</p>.<p>‘ರಾಜ್ಯ ಸರ್ಕಾರವು ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಗೆ ಒಪ್ಪಿ ಪ್ರಸ್ತಾವವನ್ನು ರಾಜ್ಯಪಾಲರ ಅನುಮೋದನೆಗೆ ಕಳುಹಿಸಿದೆ. ಧಾರವಾಡ ಜನರ, ಹೋರಾಟ ಸಮಿತಿಯವರ ಕೂಗಿಗೆ ಸ್ಪಂದಿಸುತ್ತೇವೆ. ಸಮಿತಿಯವರ ಜೊತೆ ಹೋರಾಟದಲ್ಲಿ ಪಾಲ್ಗೊಳ್ಳುತ್ತೇನೆ’ ಎಂದರು.</p>.<p>ವೀರಣ್ಣ ಮತ್ತಿಕಟ್ಟಿ, ಮಹಾದೇವ, ಶಿವಶಂಕರ ಹಂಪಣ್ಣವರ, ವೆಂಕಟೇಶ ಮಾಚಕನೂರ, ಮನೋಜ ಪಾಟೀಲ, ಗುರುರಾಜ ಹುಣಶಿಮರದ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-24-1332643410</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಹುಬ್ಬಳ್ಳಿ– ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ವಿಧೇಯಕವನ್ನು ಅನುಮೋದಿಸುವಂತೆ ರಾಜ್ಯಪಾಲರಿಗೆ ಒತ್ತಡ ಹೇರಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ತಿಳಿಸಿದರು.</p>.<p>ಇಲ್ಲಿನ ಸರ್ಕ್ಯೂಟ್ ಹೌಸ್ನಲ್ಲಿ ಮಂಗಳವಾರ ನಡೆದ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿಯವರ ಜತೆ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಕಾನೂನು ಸಚಿವ ಎಚ್.ಕೆ. ಪಾಟೀಲ ಸಹಿತ ಎಲ್ಲರ ಅಭಿಪ್ರಾಯ ಪಡೆಯಲಾಗುವುದು. ರಾಜ್ಯಪಾಲರ ಭೇಟಿಗೆ ಸಮಯ ಕೇಳುತ್ತೇವೆ. ವಿಧೇಯಕಕ್ಕೆ ಅನುಮೋದನೆ ನಿಟ್ಟಿನಲ್ಲಿ ಕಾನೂನಾತ್ಮಕ ಹೋರಾಟಗಳನ್ನು ಮಾಡುತ್ತೇವೆ’ ಎಂದು ತಿಳಿಸಿದರು.</p>.<p>ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ನಿಟ್ಟಿನಲ್ಲಿ ಹೋರಾಟ ಸಮಿತಿಯವರು ಹೋರಾಟಗಳನ್ನು ನಡೆಸಬೇಕು. ಸಾರ್ವಜನಿಕವಾಗಿ ಒತ್ತಡಗಳನ್ನು ಹೇರಬೇಕು. ವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಂಘಟನೆ, ಹೋರಾಟ ಅವಶ್ಯ. ದೊಡ್ಡ ಪ್ರಮಾಣದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು’ ಎಂದರು.</p>.<p>‘ರಾಜ್ಯ ಸರ್ಕಾರವು ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಗೆ ಒಪ್ಪಿ ಪ್ರಸ್ತಾವವನ್ನು ರಾಜ್ಯಪಾಲರ ಅನುಮೋದನೆಗೆ ಕಳುಹಿಸಿದೆ. ಧಾರವಾಡ ಜನರ, ಹೋರಾಟ ಸಮಿತಿಯವರ ಕೂಗಿಗೆ ಸ್ಪಂದಿಸುತ್ತೇವೆ. ಸಮಿತಿಯವರ ಜೊತೆ ಹೋರಾಟದಲ್ಲಿ ಪಾಲ್ಗೊಳ್ಳುತ್ತೇನೆ’ ಎಂದರು.</p>.<p>ವೀರಣ್ಣ ಮತ್ತಿಕಟ್ಟಿ, ಮಹಾದೇವ, ಶಿವಶಂಕರ ಹಂಪಣ್ಣವರ, ವೆಂಕಟೇಶ ಮಾಚಕನೂರ, ಮನೋಜ ಪಾಟೀಲ, ಗುರುರಾಜ ಹುಣಶಿಮರದ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-24-1332643410</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>