<p><strong>ಹುಬ್ಬಳ್ಳಿ</strong>: ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ನೈರುತ್ಯ ರೈಲ್ವೆ ವಲಯದ ಹುಬ್ಬಳ್ಳಿ ವಿಭಾಗದ 16 ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಮೊದಲ ಹಂತದಲ್ಲಿ 6 ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುವುದು. ಈ ಕಾಮಗಾರಿಗಳ ಅನುಷ್ಠಾನಕ್ಕಾಗಿ ಅಧಿಕಾರಿಗಳ ವಿಶೇಷ ತಂಡ ‘ಗತಿ ಶಕ್ತಿ ಯುನಿಟ್’ ರಚಿಸಲಾಗಿದೆ ಎಂದು ಹುಬ್ಬಳ್ಳಿ ವಿಭಾಗೀಯ ರೈಲ್ವೆ ಮ್ಯಾನೇಜರ್ ಹರ್ಷ ಖರೆ ಹೇಳಿದರು. </p>.<p>ನಗರದ ತಮ್ಮ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರೈಲ್ವೆ ವಿಭಾಗದ ಸಿವಿಲ್ ಕಾಮಗಾರಿಗಳನ್ನು ನೋಡಿಕೊಳ್ಳುವ ಸಿಬ್ಬಂದಿಗೆ ಕೆಲಸದ ಒತ್ತಡ ಇರುವುದರಿಂದ ಹೊಸ ಯೋಜನೆಗಳ ಅನುಷ್ಠಾನಕ್ಕೆ ಪ್ರತ್ಯೇಕ ತಂಡವನ್ನು ರಚಿಸಲಾಗಿದೆ. ಈ ತಂಡದ ಸಿಬ್ಬಂದಿ ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಕಾಮಗಾರಿಗಳನ್ನು ಮಾತ್ರ ನೋಡಿಕೊಳ್ಳಲಿದ್ದಾರೆ. ನಿಗದಿತ ಅವಧಿ ಜನವರಿ ಒಳಗೆ ಕಾಮಗಾರಿ ಪೂರ್ಣಗೊಳಿಸುವ ವಿಶ್ವಾಸವಿದೆ’ ಎಂದು ತಿಳಿಸಿದರು.</p>.<p>ಹುಬ್ಬಳ್ಳಿ ವಿಭಾಗದಲ್ಲಿ ಒಟ್ಟು 135 ರೈಲ್ವೆ ನಿಲ್ದಾಣಗಳಿವೆ. ಇವುಗಳಲ್ಲಿ ಅತಿ ಹೆಚ್ಚು ಪ್ರಯಾಣಿಕರು ಬಳಸುವ, ಪ್ರಮುಖ ಸ್ಥಳಗಳ ಹಾಗೂ ಪ್ರವಾಸೋದ್ಯಮದ ದೃಷ್ಟಿಯಿಂದ 6 ನಿಲ್ದಾಣಗಳನ್ನು ಈ ಯೋಜನೆಯಡಿ ಅಭಿವೃದ್ಧಿ ಪಡಿಸಲು ತೀರ್ಮಾನಿಸಲಾಗಿದೆ. ದೇಶದಾದ್ಯಂತ 1,275 ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ನಡೆಯಲಿದೆ. ರಾಜ್ಯದಲ್ಲಿ 55 ನಿಲ್ದಾಣಗಳ ಅಭಿವೃದ್ಧಿಯಾಗಲಿದೆ ಎಂದು ಅವರು ವಿವರಿಸಿದರು. </p>.<p><strong>ಪ್ರಧಾನಿ ಚಾಲನೆ:</strong> ಈ ಯೋಜನೆಗೆ ಇದೇ ತಿಂಗಳ 6ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ನಮ್ಮ ವಿಭಾಗದ ಕಾರ್ಯಕ್ರಮವನ್ನು ಅಳ್ನಾವರ ರೈಲ್ವೆ ನಿಲ್ದಾಣದ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. </p>.<p>ಹುಬ್ಬಳ್ಳಿ, ವಾಸ್ಕೊ ನಿಲ್ದಾಣಕ್ಕೆ ಹೊಸ ರೂಪ: ಹುಬ್ಬಳ್ಳಿ ಹಾಗೂ ವಾಸ್ಕೊ ರೈಲ್ವೆ ನಿಲ್ದಾಣಗಳಿಗೆ ಹೊಸ ರೂಪ ನೀಡಲು ಯೋಜನೆಯೊಂದನ್ನು ಸಿದ್ಧಪಡಿಸಲಾಗುತ್ತಿದೆ. 4–5 ತಿಂಗಳಲ್ಲಿ ವಿಸ್ತೃತ ಯೋಜನೆಯ ವರದಿ (ಡಿಪಿಆರ್) ಸಿದ್ಧವಾಗಲಿದೆ ಎಂದು ಹೇಳಿದರು. </p>.<p> ಗತಿ ಶಕ್ತಿ ಯೋಜನೆಯ ಮುಖ್ಯ ಮ್ಯಾನೇಜರ್ ಸಂಜಯ ಕುಮಾರ್, ಉಪ ಮುಖ್ಯ ಎಂಜಿನಿಯರ್ ರಮೇಶ ಚಂದ್ರ, ವಿಭಾಗೀಯ ವಾಣಿಜ್ಯ ವಿಭಾಗದ ಹಿರಿಯ ಮ್ಯಾನೇಜರ್ ಹರೀತಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ನೈರುತ್ಯ ರೈಲ್ವೆ ವಲಯದ ಹುಬ್ಬಳ್ಳಿ ವಿಭಾಗದ 16 ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಮೊದಲ ಹಂತದಲ್ಲಿ 6 ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುವುದು. ಈ ಕಾಮಗಾರಿಗಳ ಅನುಷ್ಠಾನಕ್ಕಾಗಿ ಅಧಿಕಾರಿಗಳ ವಿಶೇಷ ತಂಡ ‘ಗತಿ ಶಕ್ತಿ ಯುನಿಟ್’ ರಚಿಸಲಾಗಿದೆ ಎಂದು ಹುಬ್ಬಳ್ಳಿ ವಿಭಾಗೀಯ ರೈಲ್ವೆ ಮ್ಯಾನೇಜರ್ ಹರ್ಷ ಖರೆ ಹೇಳಿದರು. </p>.<p>ನಗರದ ತಮ್ಮ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರೈಲ್ವೆ ವಿಭಾಗದ ಸಿವಿಲ್ ಕಾಮಗಾರಿಗಳನ್ನು ನೋಡಿಕೊಳ್ಳುವ ಸಿಬ್ಬಂದಿಗೆ ಕೆಲಸದ ಒತ್ತಡ ಇರುವುದರಿಂದ ಹೊಸ ಯೋಜನೆಗಳ ಅನುಷ್ಠಾನಕ್ಕೆ ಪ್ರತ್ಯೇಕ ತಂಡವನ್ನು ರಚಿಸಲಾಗಿದೆ. ಈ ತಂಡದ ಸಿಬ್ಬಂದಿ ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಕಾಮಗಾರಿಗಳನ್ನು ಮಾತ್ರ ನೋಡಿಕೊಳ್ಳಲಿದ್ದಾರೆ. ನಿಗದಿತ ಅವಧಿ ಜನವರಿ ಒಳಗೆ ಕಾಮಗಾರಿ ಪೂರ್ಣಗೊಳಿಸುವ ವಿಶ್ವಾಸವಿದೆ’ ಎಂದು ತಿಳಿಸಿದರು.</p>.<p>ಹುಬ್ಬಳ್ಳಿ ವಿಭಾಗದಲ್ಲಿ ಒಟ್ಟು 135 ರೈಲ್ವೆ ನಿಲ್ದಾಣಗಳಿವೆ. ಇವುಗಳಲ್ಲಿ ಅತಿ ಹೆಚ್ಚು ಪ್ರಯಾಣಿಕರು ಬಳಸುವ, ಪ್ರಮುಖ ಸ್ಥಳಗಳ ಹಾಗೂ ಪ್ರವಾಸೋದ್ಯಮದ ದೃಷ್ಟಿಯಿಂದ 6 ನಿಲ್ದಾಣಗಳನ್ನು ಈ ಯೋಜನೆಯಡಿ ಅಭಿವೃದ್ಧಿ ಪಡಿಸಲು ತೀರ್ಮಾನಿಸಲಾಗಿದೆ. ದೇಶದಾದ್ಯಂತ 1,275 ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ನಡೆಯಲಿದೆ. ರಾಜ್ಯದಲ್ಲಿ 55 ನಿಲ್ದಾಣಗಳ ಅಭಿವೃದ್ಧಿಯಾಗಲಿದೆ ಎಂದು ಅವರು ವಿವರಿಸಿದರು. </p>.<p><strong>ಪ್ರಧಾನಿ ಚಾಲನೆ:</strong> ಈ ಯೋಜನೆಗೆ ಇದೇ ತಿಂಗಳ 6ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ನಮ್ಮ ವಿಭಾಗದ ಕಾರ್ಯಕ್ರಮವನ್ನು ಅಳ್ನಾವರ ರೈಲ್ವೆ ನಿಲ್ದಾಣದ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. </p>.<p>ಹುಬ್ಬಳ್ಳಿ, ವಾಸ್ಕೊ ನಿಲ್ದಾಣಕ್ಕೆ ಹೊಸ ರೂಪ: ಹುಬ್ಬಳ್ಳಿ ಹಾಗೂ ವಾಸ್ಕೊ ರೈಲ್ವೆ ನಿಲ್ದಾಣಗಳಿಗೆ ಹೊಸ ರೂಪ ನೀಡಲು ಯೋಜನೆಯೊಂದನ್ನು ಸಿದ್ಧಪಡಿಸಲಾಗುತ್ತಿದೆ. 4–5 ತಿಂಗಳಲ್ಲಿ ವಿಸ್ತೃತ ಯೋಜನೆಯ ವರದಿ (ಡಿಪಿಆರ್) ಸಿದ್ಧವಾಗಲಿದೆ ಎಂದು ಹೇಳಿದರು. </p>.<p> ಗತಿ ಶಕ್ತಿ ಯೋಜನೆಯ ಮುಖ್ಯ ಮ್ಯಾನೇಜರ್ ಸಂಜಯ ಕುಮಾರ್, ಉಪ ಮುಖ್ಯ ಎಂಜಿನಿಯರ್ ರಮೇಶ ಚಂದ್ರ, ವಿಭಾಗೀಯ ವಾಣಿಜ್ಯ ವಿಭಾಗದ ಹಿರಿಯ ಮ್ಯಾನೇಜರ್ ಹರೀತಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>