<p><strong>ಧಾರವಾಡ</strong>: ‘ವಿಶ್ವದಾದ್ಯಂತ ಯುದ್ಧಭೀತಿ ಮತ್ತು ಅಶಾಂತಿಯ ವಾತಾವರಣ ನಿರ್ಮಾಣವಾಗುತ್ತಿರುವ ಇಂದಿನ ಸಂದರ್ಭದಲ್ಲಿ, ಭಾರತೀಯ ಸಾಹಿತ್ಯವು ಮಾನವೀಯ ಮೌಲ್ಯಗಳನ್ನು ಪುನರುಜ್ಜೀವನಗೊಳಿಸಿ ವಿಶ್ವಶಾಂತಿಯ ಸಂದೇಶ ಸಾರಬಲ್ಲ ಶಕ್ತಿಯಾಗಿದೆ’ ಎಂದು ಲೇಖಕಿ ಬಿ.ಟಿ.ಲಲಿತಾ ನಾಯಕ ಹೇಳಿದರು.</p>.<p>ಕರ್ನಾಟಕ ವಿಶ್ವವಿದ್ಯಾಲಯದ ಮಾನಸೋಲ್ಲಾಸ ಸಭಾಭವನದಲ್ಲಿ ಹಿಂದಿ ಅಧ್ಯಯನ ವಿಭಾಗದ ವತಿಯಿಂದ ಶುಕ್ರವಾರ ನಡೆದ ‘ವಿಶ್ವಶಾಂತಿಗಾಗಿ ಸಮಕಾಲೀನ ಭಾರತೀಯ ಸಾಹಿತ್ಯ ಹಾಗೂ ಪ್ರವಾಸ ಸಾಹಿತ್ಯದ ಕೊಡುಗೆ’ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಾಹಿತ್ಯಕಾರರು ಶಾಂತಿಯ ಪರಿಕಲ್ಪನೆಯನ್ನು ವಿಭಿನ್ನ ರೂಪಗಳಲ್ಲಿ ನಿರೂಪಿಸುತ್ತಾರೆ. ರಾಮಾಯಣ, ಮಹಾಭಾರತದಂತಹ ಪುರಾತನ ಕಾವ್ಯಗಳಿಂದ ಹಿಡಿದು ನವೀನ ಸಾಹಿತ್ಯದವರೆಗೂ ಯುದ್ಧ ಮತ್ತು ಶಾಂತಿಯ ವಿವಿಧ ಆಯಾಮಗಳನ್ನು ಸಾಹಿತ್ಯ ಅನಾವರಣಗೊಳಿಸಿದೆ’ ಎಂದು ಹೇಳಿದರು.</p>.<p>‘ಯುದ್ಧವು ಕೇವಲ ಎರಡು ರಾಷ್ಟ್ರಗಳ ನಡುವಿನ ಸಂಘರ್ಷವಲ್ಲ. ಅದು ಜಗತ್ತಿನಾದ್ಯಂತ ಮಾನವ ಸಮಾಜದ ಮೇಲೆ ಪರಿಣಾಮ ಬೀರುವ ದುರಂತ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಸಾಧನಗಳನ್ನು ವಿನಾಶಕ್ಕಿಂತ ಶಾಂತಿಯ ನಿರ್ಮಾಣಕ್ಕೆ ಬಳಸಬೇಕು’ ಎಂದು ಸಲಹೆ ನೀಡಿದರು.</p>.<p>ಉತ್ತರ ಪ್ರದೇಶದ ಅಂತರರಾಷ್ಟ್ರೀಯ ಸಾಹಿತ್ಯ ಕಲಾ ಮಂಚದ ಸಂಸ್ಥಾಪಕ ಅಧ್ಯಕ್ಷ ಪ್ರೊ.ಮಹೇಶ್ ದಿವಾಕರ್ ಮಾತನಾಡಿ, ಪಾಕಿಸ್ತಾನ, ಬಾಂಗ್ಲಾದೇಶ, ಉಕ್ರೇನ್-ರಷ್ಯಾ ಹಾಗೂ ಇರಾನ್-ಅಮೆರಿಕಾ ನಡುವಿನ ಸಂಘರ್ಷಗಳು ಜಾಗತಿಕ ಯುದ್ಧಭೀತಿಯನ್ನು ಹೆಚ್ಚಿಸುತ್ತಿವೆ. ಇಂತಹ ಸಂದರ್ಭಗಳಲ್ಲಿ ಭಾರತೀಯ ಸಾಹಿತ್ಯ ಮತ್ತು ಪ್ರವಾಸ ಸಾಹಿತ್ಯವು ಮಾನವೀಯ ಸಂಬಂಧಗಳನ್ನು ಬಲಪಡಿಸುವ ಶಕ್ತಿಯನ್ನು ಹೊಂದಿದೆ’ ಎಂದು ತಿಳಿಸಿದರು.</p>.<p>ಕುಲಪತಿ ಪ್ರೊ.ಎ.ಎಂ.ಖಾನ್ ಅಧ್ಯಕ್ಷತೆ ವಹಿಸಿದ್ದರು. ಪ್ರೊ.ಎಸ್.ಕೆ.ಪವಾರ್, ಪ್ರೊ.ಅರ್ಜುನ್ ಚೌವಾಣ್, ರಾಜೇಶ್ ಶ್ರೀವಾಸ್ತವ್, ರಾಕೇಶ್ ಗೋಯಲ್, ಸಿಂಡಿಕೇಟ್ ಸದಸ್ಯರಾದ ಬಿ.ಎಲ್. ಗುಂಡೂರ ,ರಾಬರ್ಟ್ ದದ್ದಾಪುರಿ, ಶ್ಯಾಮ ಮಲ್ಲನಗೌಡರ, ಬಸವರಾಜ್ ಗೊರವರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-24-401266696</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ವಿಶ್ವದಾದ್ಯಂತ ಯುದ್ಧಭೀತಿ ಮತ್ತು ಅಶಾಂತಿಯ ವಾತಾವರಣ ನಿರ್ಮಾಣವಾಗುತ್ತಿರುವ ಇಂದಿನ ಸಂದರ್ಭದಲ್ಲಿ, ಭಾರತೀಯ ಸಾಹಿತ್ಯವು ಮಾನವೀಯ ಮೌಲ್ಯಗಳನ್ನು ಪುನರುಜ್ಜೀವನಗೊಳಿಸಿ ವಿಶ್ವಶಾಂತಿಯ ಸಂದೇಶ ಸಾರಬಲ್ಲ ಶಕ್ತಿಯಾಗಿದೆ’ ಎಂದು ಲೇಖಕಿ ಬಿ.ಟಿ.ಲಲಿತಾ ನಾಯಕ ಹೇಳಿದರು.</p>.<p>ಕರ್ನಾಟಕ ವಿಶ್ವವಿದ್ಯಾಲಯದ ಮಾನಸೋಲ್ಲಾಸ ಸಭಾಭವನದಲ್ಲಿ ಹಿಂದಿ ಅಧ್ಯಯನ ವಿಭಾಗದ ವತಿಯಿಂದ ಶುಕ್ರವಾರ ನಡೆದ ‘ವಿಶ್ವಶಾಂತಿಗಾಗಿ ಸಮಕಾಲೀನ ಭಾರತೀಯ ಸಾಹಿತ್ಯ ಹಾಗೂ ಪ್ರವಾಸ ಸಾಹಿತ್ಯದ ಕೊಡುಗೆ’ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಾಹಿತ್ಯಕಾರರು ಶಾಂತಿಯ ಪರಿಕಲ್ಪನೆಯನ್ನು ವಿಭಿನ್ನ ರೂಪಗಳಲ್ಲಿ ನಿರೂಪಿಸುತ್ತಾರೆ. ರಾಮಾಯಣ, ಮಹಾಭಾರತದಂತಹ ಪುರಾತನ ಕಾವ್ಯಗಳಿಂದ ಹಿಡಿದು ನವೀನ ಸಾಹಿತ್ಯದವರೆಗೂ ಯುದ್ಧ ಮತ್ತು ಶಾಂತಿಯ ವಿವಿಧ ಆಯಾಮಗಳನ್ನು ಸಾಹಿತ್ಯ ಅನಾವರಣಗೊಳಿಸಿದೆ’ ಎಂದು ಹೇಳಿದರು.</p>.<p>‘ಯುದ್ಧವು ಕೇವಲ ಎರಡು ರಾಷ್ಟ್ರಗಳ ನಡುವಿನ ಸಂಘರ್ಷವಲ್ಲ. ಅದು ಜಗತ್ತಿನಾದ್ಯಂತ ಮಾನವ ಸಮಾಜದ ಮೇಲೆ ಪರಿಣಾಮ ಬೀರುವ ದುರಂತ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಸಾಧನಗಳನ್ನು ವಿನಾಶಕ್ಕಿಂತ ಶಾಂತಿಯ ನಿರ್ಮಾಣಕ್ಕೆ ಬಳಸಬೇಕು’ ಎಂದು ಸಲಹೆ ನೀಡಿದರು.</p>.<p>ಉತ್ತರ ಪ್ರದೇಶದ ಅಂತರರಾಷ್ಟ್ರೀಯ ಸಾಹಿತ್ಯ ಕಲಾ ಮಂಚದ ಸಂಸ್ಥಾಪಕ ಅಧ್ಯಕ್ಷ ಪ್ರೊ.ಮಹೇಶ್ ದಿವಾಕರ್ ಮಾತನಾಡಿ, ಪಾಕಿಸ್ತಾನ, ಬಾಂಗ್ಲಾದೇಶ, ಉಕ್ರೇನ್-ರಷ್ಯಾ ಹಾಗೂ ಇರಾನ್-ಅಮೆರಿಕಾ ನಡುವಿನ ಸಂಘರ್ಷಗಳು ಜಾಗತಿಕ ಯುದ್ಧಭೀತಿಯನ್ನು ಹೆಚ್ಚಿಸುತ್ತಿವೆ. ಇಂತಹ ಸಂದರ್ಭಗಳಲ್ಲಿ ಭಾರತೀಯ ಸಾಹಿತ್ಯ ಮತ್ತು ಪ್ರವಾಸ ಸಾಹಿತ್ಯವು ಮಾನವೀಯ ಸಂಬಂಧಗಳನ್ನು ಬಲಪಡಿಸುವ ಶಕ್ತಿಯನ್ನು ಹೊಂದಿದೆ’ ಎಂದು ತಿಳಿಸಿದರು.</p>.<p>ಕುಲಪತಿ ಪ್ರೊ.ಎ.ಎಂ.ಖಾನ್ ಅಧ್ಯಕ್ಷತೆ ವಹಿಸಿದ್ದರು. ಪ್ರೊ.ಎಸ್.ಕೆ.ಪವಾರ್, ಪ್ರೊ.ಅರ್ಜುನ್ ಚೌವಾಣ್, ರಾಜೇಶ್ ಶ್ರೀವಾಸ್ತವ್, ರಾಕೇಶ್ ಗೋಯಲ್, ಸಿಂಡಿಕೇಟ್ ಸದಸ್ಯರಾದ ಬಿ.ಎಲ್. ಗುಂಡೂರ ,ರಾಬರ್ಟ್ ದದ್ದಾಪುರಿ, ಶ್ಯಾಮ ಮಲ್ಲನಗೌಡರ, ಬಸವರಾಜ್ ಗೊರವರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-24-401266696</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>