ಡಾ. ರಮಾಕಾಂತ ಜೋಶಿ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದು, ಸಾಹಿತಿ ಡಾ. ಗುರುಲಿಂಗ ಕಾಪಸೆ ಉದ್ಘಾಟಿಸಲಿದ್ದಾರೆ. ನಾಲ್ಕು ಸಾಹಿತ್ಯ ಗೋಷ್ಠಿ, ಎರಡು ಕವಿಗೋಷ್ಠಿ, ಉಪನ್ಯಾಸ, ಬಹಿರಂಗ ಅಧಿವೇಶನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಎರಡು ದಿನದ ಸಮ್ಮೇಳನಕ್ಕೆ ಐದು ಸಾವಿರ ಮಂದಿ ಬರುವ ನಿರೀಕ್ಷೆಯಿದ್ದು, ಉಪಾಹಾರ, ಊಟದ ವ್ಯವಸ್ಥೆ ಮಾಡಲಾಗಿದೆ. ಕಸಾಪದಿಂದ ಸಮ್ಮೇಳನಕ್ಕೆ ₹5ಲಕ್ಷ ನೆರವು ದೊರೆಯಲಿದ್ದು, ಅಂದಾಜು ₹7ಲಕ್ಷ ವೆಚ್ಚವಾಗುವ ನಿರೀಕ್ಷೆಯಿದೆ ಎಂದರು.