<p><strong>ಧಾರವಾಡ:</strong> ‘ನಗರದಲ್ಲಿ ಫೆ.24ರಂದು ನಡೆದ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆಯಲ್ಲಿ ನಿಯಮ ಉಲ್ಲಂಘನೆ ಆರೋಪದ ಮೇಲೆ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ಅಧ್ಯಕ್ಷ ಕಾಂತಕುಮಾರ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಹುಬ್ಬಳ್ಳಿ–ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದರು.</p>.<p>‘ಸರ್ವಮಂಗಳ ವೃತ್ತ (ಲಿಂಗಾಯತ ಭವನ ಬಳಿ) ಮತ್ತು ಜುಬಿಲಿ ವೃತ್ತದಲ್ಲಿ ಕಾನೂನು ಉಲ್ಲಂಘನೆ ಆಗಿದೆ. ಪೊಲೀಸರ ಜತೆ ಸಂಘರ್ಷ, ಕರ್ತವ್ಯಕ್ಕೆ ಅಡ್ಡಿ, ಪ್ರತಿಭಟನಾ ರ್ಯಾಲಿ, ಮಾರ್ಗ ಬದಲಾವಣೆ, ರಸ್ತೆ ತಡೆ ಇತ್ಯಾದಿ ಚಟುವಟಿಕೆ ನಡೆದಿವೆ’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಫೆ. 24ರಂದು ನಗರದಲ್ಲಿ ಪ್ರತಿಭಟನೆ ನಡೆಸಲು ಸಂಘಟನೆಗೆ ಪೊಲೀಸ್ ಇಲಾಖೆ ಅನುಮತಿ ನೀಡಿರಲಿಲ್ಲ. ಪ್ರತಿಭಟನೆಗೆ ಬಿಜೆಪಿಗೆ ಅನುಮತಿ ಪಡೆದಿತ್ತು. 5 ಡ್ರೋನ್ ಕ್ಯಾಮೆರಾ, 20 ವಿಡಿಯೊ ಕ್ಯಾಮೆರಾ, ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿರುವ ಚಿತ್ರಾವಳಿಗಳನ್ನು ತಾಂತ್ರಿಕ ತಂಡ ಪರಿಶೀಲಿಸುತ್ತಿದೆ. ವಿವರಗಳನ್ನು ಕಲೆ ಹಾಕಿ, ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>
<p><strong>ಧಾರವಾಡ:</strong> ‘ನಗರದಲ್ಲಿ ಫೆ.24ರಂದು ನಡೆದ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆಯಲ್ಲಿ ನಿಯಮ ಉಲ್ಲಂಘನೆ ಆರೋಪದ ಮೇಲೆ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ಅಧ್ಯಕ್ಷ ಕಾಂತಕುಮಾರ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಹುಬ್ಬಳ್ಳಿ–ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದರು.</p>.<p>‘ಸರ್ವಮಂಗಳ ವೃತ್ತ (ಲಿಂಗಾಯತ ಭವನ ಬಳಿ) ಮತ್ತು ಜುಬಿಲಿ ವೃತ್ತದಲ್ಲಿ ಕಾನೂನು ಉಲ್ಲಂಘನೆ ಆಗಿದೆ. ಪೊಲೀಸರ ಜತೆ ಸಂಘರ್ಷ, ಕರ್ತವ್ಯಕ್ಕೆ ಅಡ್ಡಿ, ಪ್ರತಿಭಟನಾ ರ್ಯಾಲಿ, ಮಾರ್ಗ ಬದಲಾವಣೆ, ರಸ್ತೆ ತಡೆ ಇತ್ಯಾದಿ ಚಟುವಟಿಕೆ ನಡೆದಿವೆ’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಫೆ. 24ರಂದು ನಗರದಲ್ಲಿ ಪ್ರತಿಭಟನೆ ನಡೆಸಲು ಸಂಘಟನೆಗೆ ಪೊಲೀಸ್ ಇಲಾಖೆ ಅನುಮತಿ ನೀಡಿರಲಿಲ್ಲ. ಪ್ರತಿಭಟನೆಗೆ ಬಿಜೆಪಿಗೆ ಅನುಮತಿ ಪಡೆದಿತ್ತು. 5 ಡ್ರೋನ್ ಕ್ಯಾಮೆರಾ, 20 ವಿಡಿಯೊ ಕ್ಯಾಮೆರಾ, ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿರುವ ಚಿತ್ರಾವಳಿಗಳನ್ನು ತಾಂತ್ರಿಕ ತಂಡ ಪರಿಶೀಲಿಸುತ್ತಿದೆ. ವಿವರಗಳನ್ನು ಕಲೆ ಹಾಕಿ, ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>