<p><strong>ಧಾರವಾಡ</strong>: ‘ನಗರದ ಕರ್ನಾಟಕ ಕಾಲೇಜು (ಕೆಸಿಡಿ) ಕಟ್ಟಡ ವಿಶಿಷ್ಟವಾಗಿದೆ. ಈ ಪಾರಂಪರಿಕ ಕಟ್ಟಡವನ್ನು ಚೆನ್ನಾಗಿ ಕಾಪಾಡಿಕೊಳ್ಳಬೇಕು’ ಎಂದು ಕೆಸಿಡಿ ಪ್ರಾಚಾರ್ಯ ಪ್ರೊ.ಐ.ಸಿ.ಮುಳಗುಂದ ಹೇಳಿದರು. </p>.<p>ಕರ್ನಾಟಕ ಕಾಲೇಜಿನ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಕಾಲೇಜಿನ ಆವರಣದ ರೊದ್ದ ಶ್ರೀನಿವಾಸರಾವ್, ಅರಟಾಳ ರುದ್ರಗೌಡ ಮತ್ತು ಸಿದ್ದಪ್ಪ ಕಂಬಳಿ ಪ್ರತಿಮೆಗೆ ಈಚೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.</p>.<p>‘ಈ ಕಾಲೇಜು ಸ್ಥಾಪನೆಗೆ ಬ್ರಿಟಿಷರು ಠೇವಣಿ ಇಟ್ಟು ಮುನ್ನುಡಿ ಬರೆದರು. ಈ ಕಾಲೇಜು ಸ್ಥಾಪನೆ ನಿಟ್ಟಿನಲ್ಲಿ ರೊದ್ದ ಶ್ರೀನಿವಾಸರಾವ್, ಅರಟಾಳ ರುದ್ರಗೌಡ, ಸಿದ್ದಪ್ಪ ಕಂಬಳಿ, ಇತರರು ಕೊಡುಗೆ ನೀಡಿದ್ದಾರೆ. ಉತ್ತರ ಕರ್ನಾಟಕದ ಹಲವು ನಾಟಕ ಕಂಪನಿಗಳು ಸೇರಿದಂತೆ ಅನೇಕರು ದೇಣಿಗೆ ನೀಡಿದ್ದಾರೆ’ ಎಂದರು. </p>.<p>ಪ್ರೊ.ಎಂ.ಎಸ್.ಸಾಳುಂಕೆ, ಜಿಮಖಾನಾದ ಉಪಾಧ್ಯಕ್ಷೆ ಮಹಾದೇವಿ ಹಿರೇಮಠ, ಜಗದೀಶ ಗುಡಗೂರ, ಪ್ರೊ.ಜಿ.ಎಚ್.ಮಳಿಮಠ, ಎಂ.ಬಿ.ದಳಪತಿ, ಸುರೇಶ ಹುಲ್ಲನ್ನವರ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ನಗರದ ಕರ್ನಾಟಕ ಕಾಲೇಜು (ಕೆಸಿಡಿ) ಕಟ್ಟಡ ವಿಶಿಷ್ಟವಾಗಿದೆ. ಈ ಪಾರಂಪರಿಕ ಕಟ್ಟಡವನ್ನು ಚೆನ್ನಾಗಿ ಕಾಪಾಡಿಕೊಳ್ಳಬೇಕು’ ಎಂದು ಕೆಸಿಡಿ ಪ್ರಾಚಾರ್ಯ ಪ್ರೊ.ಐ.ಸಿ.ಮುಳಗುಂದ ಹೇಳಿದರು. </p>.<p>ಕರ್ನಾಟಕ ಕಾಲೇಜಿನ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಕಾಲೇಜಿನ ಆವರಣದ ರೊದ್ದ ಶ್ರೀನಿವಾಸರಾವ್, ಅರಟಾಳ ರುದ್ರಗೌಡ ಮತ್ತು ಸಿದ್ದಪ್ಪ ಕಂಬಳಿ ಪ್ರತಿಮೆಗೆ ಈಚೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.</p>.<p>‘ಈ ಕಾಲೇಜು ಸ್ಥಾಪನೆಗೆ ಬ್ರಿಟಿಷರು ಠೇವಣಿ ಇಟ್ಟು ಮುನ್ನುಡಿ ಬರೆದರು. ಈ ಕಾಲೇಜು ಸ್ಥಾಪನೆ ನಿಟ್ಟಿನಲ್ಲಿ ರೊದ್ದ ಶ್ರೀನಿವಾಸರಾವ್, ಅರಟಾಳ ರುದ್ರಗೌಡ, ಸಿದ್ದಪ್ಪ ಕಂಬಳಿ, ಇತರರು ಕೊಡುಗೆ ನೀಡಿದ್ದಾರೆ. ಉತ್ತರ ಕರ್ನಾಟಕದ ಹಲವು ನಾಟಕ ಕಂಪನಿಗಳು ಸೇರಿದಂತೆ ಅನೇಕರು ದೇಣಿಗೆ ನೀಡಿದ್ದಾರೆ’ ಎಂದರು. </p>.<p>ಪ್ರೊ.ಎಂ.ಎಸ್.ಸಾಳುಂಕೆ, ಜಿಮಖಾನಾದ ಉಪಾಧ್ಯಕ್ಷೆ ಮಹಾದೇವಿ ಹಿರೇಮಠ, ಜಗದೀಶ ಗುಡಗೂರ, ಪ್ರೊ.ಜಿ.ಎಚ್.ಮಳಿಮಠ, ಎಂ.ಬಿ.ದಳಪತಿ, ಸುರೇಶ ಹುಲ್ಲನ್ನವರ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>