<p><strong>ಧಾರವಾಡ</strong>: ನಗರದ ಕರ್ನಾಟಕ ಮಹಾವಿದ್ಯಾಲಯದ (ಕೆಸಿಡಿ) ‘ಕಾವೇರಿ’ ಹಾಸ್ಟೆಲ್ನಲ್ಲಿ ಕಳಪೆ ಆಹಾರ, ಸ್ವಚ್ಛತೆ ಕೊರತೆ ಹಾಗೂ ಹಲವು ಅವ್ಯವಸ್ಥೆ ಉಂಟಾಗಿದ್ದು ತಕ್ಷಣ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿನಿಯರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಕರ್ನಾಟಕ ವಿಶ್ವವಿದ್ಯಾಲಯದ ಆಡಳಿತ ಕಚೇರಿಯ ಎದುರು ಸಮಾವೇಶಗೊಂಡ ವಿದ್ಯಾರ್ಥಿನಿಯರು ಹಾಗೂ ಎಬಿವಿಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತ ಪಡಿಸಿದರು.</p>.<p>‘ಕಾವೇರಿ ವಿದ್ಯಾರ್ಥಿನಿಯರ ಹಾಸ್ಟೆಲ್ನಲ್ಲಿ ಶೌಚಾಲಯಗಳು ಬ್ಲಾಕ್ ಆಗಿವೆ. ಚಾವಣಿ ಹಾಳಾಗಿ ಸಿಮೆಂಟ್ ಚೂರು ಉದುರುತ್ತಿವೆ’ ಎಂದು ಪ್ರತಿಭಟನಕಾರರು ದೂರಿದರು.</p>.<p>‘ಹಾಸ್ಟೆಲ್ನಲ್ಲಿ ನೀಡುವ ಉಪಾಹಾರದಲ್ಲಿ ಕೆಲವೊಮ್ಮೆ ಹುಳಗಳು, ಕೂದಲುಗಳು ಇರುತ್ತವೆ. ಆಹಾರದ ಗುಣಮಟ್ಟವೂ ಚೆನ್ನಾಗಿಲ್ಲ. ವಸತಿ ನಿಲಯ ಆವರಣದಲ್ಲಿ ಸ್ವಚ್ಛತೆ ಇಲ್ಲ. ಕೆಲವೆಡೆ ಗಿಡಗಂಟಿಗಳು ಬೆಳೆದಿವೆ. ಹುಳಹುಪ್ಪಟೆಗಳು ಓಡಾಡುತ್ತವೆ. ಮೂಲಸೌಕರ್ಯಗಳ ಕೊರತೆ ಇದೆ’ ಎಂದು ಆರೋಪಿಸಿದರು.</p>.<p>‘ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ. ಆದರೆ ಪರಿಹಾರಕ್ಕೆ ಕ್ರಮ ವಹಿಸಿಲ್ಲ’ ಎಂದು ದೂರಿದರು.</p>.<p>‘ಹಾಸ್ಟೆಲ್ನಲ್ಲಿ ಮೂಲಸೌಕರ್ಯಗಳ ಕೊರತೆ ನಿವಾರಿಸಲು ಕ್ರಮ ವಹಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಹಮ್ಮಿಕೊಳ್ಳಲಾಗವುದು’ ಎಂದು ಪ್ರತಿಭಟನಕಾರರು ಎಚ್ಚರಿಕೆ ನೀಡಿದರು.</p>.<p>ದರ್ಶನ್ ಹೆಗಡೆ, ಸಚಿನ್ ಕೋಟ್ಯಾಳ, ಅಭಿಷೇಕ್ ದೊಡ್ಡಮನಿ, ಸೋಹನ್ ಮಲ್ಲಾಡ ಪ್ರತಿಭಟನೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ನಗರದ ಕರ್ನಾಟಕ ಮಹಾವಿದ್ಯಾಲಯದ (ಕೆಸಿಡಿ) ‘ಕಾವೇರಿ’ ಹಾಸ್ಟೆಲ್ನಲ್ಲಿ ಕಳಪೆ ಆಹಾರ, ಸ್ವಚ್ಛತೆ ಕೊರತೆ ಹಾಗೂ ಹಲವು ಅವ್ಯವಸ್ಥೆ ಉಂಟಾಗಿದ್ದು ತಕ್ಷಣ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿನಿಯರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಕರ್ನಾಟಕ ವಿಶ್ವವಿದ್ಯಾಲಯದ ಆಡಳಿತ ಕಚೇರಿಯ ಎದುರು ಸಮಾವೇಶಗೊಂಡ ವಿದ್ಯಾರ್ಥಿನಿಯರು ಹಾಗೂ ಎಬಿವಿಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತ ಪಡಿಸಿದರು.</p>.<p>‘ಕಾವೇರಿ ವಿದ್ಯಾರ್ಥಿನಿಯರ ಹಾಸ್ಟೆಲ್ನಲ್ಲಿ ಶೌಚಾಲಯಗಳು ಬ್ಲಾಕ್ ಆಗಿವೆ. ಚಾವಣಿ ಹಾಳಾಗಿ ಸಿಮೆಂಟ್ ಚೂರು ಉದುರುತ್ತಿವೆ’ ಎಂದು ಪ್ರತಿಭಟನಕಾರರು ದೂರಿದರು.</p>.<p>‘ಹಾಸ್ಟೆಲ್ನಲ್ಲಿ ನೀಡುವ ಉಪಾಹಾರದಲ್ಲಿ ಕೆಲವೊಮ್ಮೆ ಹುಳಗಳು, ಕೂದಲುಗಳು ಇರುತ್ತವೆ. ಆಹಾರದ ಗುಣಮಟ್ಟವೂ ಚೆನ್ನಾಗಿಲ್ಲ. ವಸತಿ ನಿಲಯ ಆವರಣದಲ್ಲಿ ಸ್ವಚ್ಛತೆ ಇಲ್ಲ. ಕೆಲವೆಡೆ ಗಿಡಗಂಟಿಗಳು ಬೆಳೆದಿವೆ. ಹುಳಹುಪ್ಪಟೆಗಳು ಓಡಾಡುತ್ತವೆ. ಮೂಲಸೌಕರ್ಯಗಳ ಕೊರತೆ ಇದೆ’ ಎಂದು ಆರೋಪಿಸಿದರು.</p>.<p>‘ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ. ಆದರೆ ಪರಿಹಾರಕ್ಕೆ ಕ್ರಮ ವಹಿಸಿಲ್ಲ’ ಎಂದು ದೂರಿದರು.</p>.<p>‘ಹಾಸ್ಟೆಲ್ನಲ್ಲಿ ಮೂಲಸೌಕರ್ಯಗಳ ಕೊರತೆ ನಿವಾರಿಸಲು ಕ್ರಮ ವಹಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಹಮ್ಮಿಕೊಳ್ಳಲಾಗವುದು’ ಎಂದು ಪ್ರತಿಭಟನಕಾರರು ಎಚ್ಚರಿಕೆ ನೀಡಿದರು.</p>.<p>ದರ್ಶನ್ ಹೆಗಡೆ, ಸಚಿನ್ ಕೋಟ್ಯಾಳ, ಅಭಿಷೇಕ್ ದೊಡ್ಡಮನಿ, ಸೋಹನ್ ಮಲ್ಲಾಡ ಪ್ರತಿಭಟನೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>