<p><strong>ಧಾರವಾಡ:</strong> ‘ನಗರ ಕೆಲಗೇರಿ ಕೆರೆ ಪ್ರದೇಶದ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧವಾಗಿದೆ. ₹ 40 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಉದ್ದೇಶಿಸಲಾಗಿದೆ’ ಎಂದು ಹು–ಧಾ ನಗರಾಭಿವೃದ್ಧಿ ಪ್ರಾಧಿಕಾರದ (ಹುಡಾ) ಆಯುಕ್ತ ಸಂತೋಷ ಬಿರಾದಾರ ತಿಳಿಸಿದರು.</p>.<p>ಭಾನುವಾರ ಕೆರೆ ಪ್ರದೇಶ ವೀಕ್ಷಣೆ ನಂತರ ಅವರು ಶಾಸಕ ಎನ್.ಎಚ್.ಕೋನರೆಡ್ಡಿ ಅವರಿಗೆ ಕೆರೆ ಅಭಿವೃದ್ಧಿ ಕಾಮಗಾರಿ ಕುರಿತು ಮಾಹಿತಿ ನೀಡಿದರು. ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್ಆರ್) ₹ 20 ಕೋಟಿ ನೆರವು, ಹುಡಾ ಹಾಗೂ ಪಾಲಿಕೆಯಿಂದ ತಲಾ ₹ 10 ಕೋಟಿ ಅನುದಾನ ಒದಗಿಸಲು ಯೋಜಿಸಲಾಗಿದೆ. ಜಿಲ್ಲಾಧಿಕಾರಿ, ಜನಪ್ರತಿನಿಧಿಗಳೊಂದಿಗೆ ಚರ್ಚಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಕೆಸರು ನೆಲೆಗೊಳ್ಳುವ ತೊಟ್ಟಿ (ಸೆಡಿಮೆಂಟೆಷನ್ ಟ್ಯಾಂಕ್) ನಿರ್ಮಾಣ ಮಾಡಲಾಗುವುದು. ಕೆರೆಗೆ ಕೊಳಕು ನೀರು ಸೇರದಂತೆ ಕ್ರಮ ವಹಿಸಲಾಗುವುದು. ಪಕ್ಷಿಗಳ ಚಲನವಲನಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಕೆರೆ ಭಾಗವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗೆ ವಹಿಸಲು ಉದ್ದೇಶಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಕೆರೆ ಪಕ್ಕದಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಮಾಡಬೇಕು. ಕೆರೆ ಪ್ರದೇಶದಲ್ಲಿ ಕಾವಲುಗಾರರನ್ನು ನೇಮಿಸಬೇಕು’ ಎಂದು ಸಾರ್ವಜನಿಕರೊಬ್ಬರು ಮನವಿ ಮಾಡಿದರು.</p>.<p>‘ಇಬ್ಬರು ಕಾವಲುಗಾರರನ್ನು ನೇಮಕ ಮಾಡಲಾಗುವುದು. ವಾಹನ ನಿಲುಗಡೆಗೂ ಜಾಗ ವ್ಯವಸ್ಥೆ ಮಾಡಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದರು.</p>.<div><blockquote>ಡಿಪಿಆರ್ಗೆ ಹೊಸದಾಗಿ ಏನಾದರೂ ಸೇರಿಸುವುದಿದ್ದರೆ ಪರಿಶೀಲಿಸಿ ಕ್ರಮ ವಹಿಸಬೇಕು. ಕೆರೆಯನ್ನು ಅಂದಗೊಳಿಸಬೇಕು. ವ್ಯವಸ್ಥಿತವಾಗಿ ಎಲ್ಲ ಸೌಕರ್ಯ ಕಲ್ಪಿಸಬೇಕು</blockquote><span class="attribution"> ಎನ್.ಎಚ್.ಕೋನರೆಡ್ಡಿ ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ನಗರ ಕೆಲಗೇರಿ ಕೆರೆ ಪ್ರದೇಶದ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧವಾಗಿದೆ. ₹ 40 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಉದ್ದೇಶಿಸಲಾಗಿದೆ’ ಎಂದು ಹು–ಧಾ ನಗರಾಭಿವೃದ್ಧಿ ಪ್ರಾಧಿಕಾರದ (ಹುಡಾ) ಆಯುಕ್ತ ಸಂತೋಷ ಬಿರಾದಾರ ತಿಳಿಸಿದರು.</p>.<p>ಭಾನುವಾರ ಕೆರೆ ಪ್ರದೇಶ ವೀಕ್ಷಣೆ ನಂತರ ಅವರು ಶಾಸಕ ಎನ್.ಎಚ್.ಕೋನರೆಡ್ಡಿ ಅವರಿಗೆ ಕೆರೆ ಅಭಿವೃದ್ಧಿ ಕಾಮಗಾರಿ ಕುರಿತು ಮಾಹಿತಿ ನೀಡಿದರು. ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್ಆರ್) ₹ 20 ಕೋಟಿ ನೆರವು, ಹುಡಾ ಹಾಗೂ ಪಾಲಿಕೆಯಿಂದ ತಲಾ ₹ 10 ಕೋಟಿ ಅನುದಾನ ಒದಗಿಸಲು ಯೋಜಿಸಲಾಗಿದೆ. ಜಿಲ್ಲಾಧಿಕಾರಿ, ಜನಪ್ರತಿನಿಧಿಗಳೊಂದಿಗೆ ಚರ್ಚಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಕೆಸರು ನೆಲೆಗೊಳ್ಳುವ ತೊಟ್ಟಿ (ಸೆಡಿಮೆಂಟೆಷನ್ ಟ್ಯಾಂಕ್) ನಿರ್ಮಾಣ ಮಾಡಲಾಗುವುದು. ಕೆರೆಗೆ ಕೊಳಕು ನೀರು ಸೇರದಂತೆ ಕ್ರಮ ವಹಿಸಲಾಗುವುದು. ಪಕ್ಷಿಗಳ ಚಲನವಲನಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಕೆರೆ ಭಾಗವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗೆ ವಹಿಸಲು ಉದ್ದೇಶಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಕೆರೆ ಪಕ್ಕದಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಮಾಡಬೇಕು. ಕೆರೆ ಪ್ರದೇಶದಲ್ಲಿ ಕಾವಲುಗಾರರನ್ನು ನೇಮಿಸಬೇಕು’ ಎಂದು ಸಾರ್ವಜನಿಕರೊಬ್ಬರು ಮನವಿ ಮಾಡಿದರು.</p>.<p>‘ಇಬ್ಬರು ಕಾವಲುಗಾರರನ್ನು ನೇಮಕ ಮಾಡಲಾಗುವುದು. ವಾಹನ ನಿಲುಗಡೆಗೂ ಜಾಗ ವ್ಯವಸ್ಥೆ ಮಾಡಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದರು.</p>.<div><blockquote>ಡಿಪಿಆರ್ಗೆ ಹೊಸದಾಗಿ ಏನಾದರೂ ಸೇರಿಸುವುದಿದ್ದರೆ ಪರಿಶೀಲಿಸಿ ಕ್ರಮ ವಹಿಸಬೇಕು. ಕೆರೆಯನ್ನು ಅಂದಗೊಳಿಸಬೇಕು. ವ್ಯವಸ್ಥಿತವಾಗಿ ಎಲ್ಲ ಸೌಕರ್ಯ ಕಲ್ಪಿಸಬೇಕು</blockquote><span class="attribution"> ಎನ್.ಎಚ್.ಕೋನರೆಡ್ಡಿ ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>