<p>ಧಾರವಾಡ: ಕೆಪಿಎಸ್ಸಿಯಲ್ಲಿ ನಡೆದಿರುವ ಅಕ್ರಮಗಳನ್ನು ಸಿಬಿಐ ತನಿಖೆಗೆ ವಹಿಸಬೇಕು, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ತಕ್ಷಣ ನೇಮಕಾತಿ ಆರಂಭಿಸಬೇಕು ಎಂದು ಒತ್ತಾಯಿಸಲು ಪ್ರತಿಭಟನೆಗೆ ಸಜ್ಜಾಗಿದ್ದ ನಾಲ್ವರನ್ನು ಮಂಗಳವಾರ ಪೊಲೀಸರು ಮುಂಜಾಗ್ರತ ಕ್ರಮವಾಗಿ ವಶಕ್ಕೆ ಪಡೆದು, ಸಂಜೆ ಬಿಡುಗಡೆಗೊಳಿಸಿದರು.</p>.<p>ಜಯನಗರ ವೃತ್ತದ ಸಮೀಪ ನಾಗರಾಜ ಛಲವಾದಿ, ಚಾಣಕ್ಯ, ಲಕ್ಷ್ಮಿಕಾಂತ ಹಾಗೂ ಕರ್ನಾಟಕ ವಿಶ್ವವಿದ್ಯಾಲಯ ಬಳಿ ಯಲ್ಲಪ್ಪ ಹೆಗಡೆ ಅವರನ್ನು ವಶಕ್ಕೆ ಪಡೆದು ಪೊಲೀಸ್ ಹೆಡ್ ಕ್ವಾರ್ಟ್ರಸ್ ಆವರಣಕ್ಕೆ ಕರೆದೊಯ್ದರು. ಸಂಜೆ 6 ಗಂಟೆ ಹೊತ್ತಿಗೆ ಬಿಡುಗಡೆಗೊಳಿಸಿದರು.</p>.<p>ಪ್ರತಿಭಟನೆಗೆ ಸಜ್ಜಾಗಿದ್ದವರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯಲಾಗಿತ್ತು ಎಂದು ವಿದ್ಯಾಗಿರಿ ಠಾಣೆ ಪೊಲೀಸ್ ಅಧಿಕಾರಿಯೊಬ್ಬರು ‘ಪ್ರಜಾವಾಣಿ‘ಗೆ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-24-75403121</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ಕೆಪಿಎಸ್ಸಿಯಲ್ಲಿ ನಡೆದಿರುವ ಅಕ್ರಮಗಳನ್ನು ಸಿಬಿಐ ತನಿಖೆಗೆ ವಹಿಸಬೇಕು, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ತಕ್ಷಣ ನೇಮಕಾತಿ ಆರಂಭಿಸಬೇಕು ಎಂದು ಒತ್ತಾಯಿಸಲು ಪ್ರತಿಭಟನೆಗೆ ಸಜ್ಜಾಗಿದ್ದ ನಾಲ್ವರನ್ನು ಮಂಗಳವಾರ ಪೊಲೀಸರು ಮುಂಜಾಗ್ರತ ಕ್ರಮವಾಗಿ ವಶಕ್ಕೆ ಪಡೆದು, ಸಂಜೆ ಬಿಡುಗಡೆಗೊಳಿಸಿದರು.</p>.<p>ಜಯನಗರ ವೃತ್ತದ ಸಮೀಪ ನಾಗರಾಜ ಛಲವಾದಿ, ಚಾಣಕ್ಯ, ಲಕ್ಷ್ಮಿಕಾಂತ ಹಾಗೂ ಕರ್ನಾಟಕ ವಿಶ್ವವಿದ್ಯಾಲಯ ಬಳಿ ಯಲ್ಲಪ್ಪ ಹೆಗಡೆ ಅವರನ್ನು ವಶಕ್ಕೆ ಪಡೆದು ಪೊಲೀಸ್ ಹೆಡ್ ಕ್ವಾರ್ಟ್ರಸ್ ಆವರಣಕ್ಕೆ ಕರೆದೊಯ್ದರು. ಸಂಜೆ 6 ಗಂಟೆ ಹೊತ್ತಿಗೆ ಬಿಡುಗಡೆಗೊಳಿಸಿದರು.</p>.<p>ಪ್ರತಿಭಟನೆಗೆ ಸಜ್ಜಾಗಿದ್ದವರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯಲಾಗಿತ್ತು ಎಂದು ವಿದ್ಯಾಗಿರಿ ಠಾಣೆ ಪೊಲೀಸ್ ಅಧಿಕಾರಿಯೊಬ್ಬರು ‘ಪ್ರಜಾವಾಣಿ‘ಗೆ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-24-75403121</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>