<p><strong>ಧಾರವಾಡ:</strong> ಮೌಲ್ಯಗಳು, ಸಂಸ್ಕೃತಿಯನ್ನು ರೂಪಿಸುವ ನಿಟ್ಟಿನಲ್ಲಿ ಸಾಹಿತ್ಯವು ಮಹತ್ವದ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಅಧ್ಯಯನ ಆಸಕ್ತಿಯನ್ನು ಬೆಳೆಸಬೇಕು ಎಂದು ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎ.ಎಂ.ಖಾನ್ ಹೇಳಿದರು.</p>.<p>ಕರ್ನಾಟಕ ವಿಶ್ವವಿದ್ಯಾಲಯದ ಮಾಳವಿಯಾ ಮಿಷನ್ ಟೀಚರ್ಸ್ ಟ್ರೇನಿಂಗ್ ಸೆಂಟರ್ ವತಿಯಿಂದ ನಡೆದ ಕನ್ನಡ ಪ್ರಾಧ್ಯಾಪಕರ ಪುನಶ್ಚೇತನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳಲ್ಲಿ ಅಧ್ಯಯನ ಕಡಿಮೆಯಾಗುತ್ತಿದೆ. ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಅಧ್ಯಯನ ಆಸಕ್ತಿಯನ್ನು ಬೆಳೆಸಬೇಕು. ಪಾಠ ಬೋಧನೆ ಮಾತ್ರವಲ್ಲ ಸಾಹಿತ್ಯದ ಮೂಲಕ ಪ್ರಗತಿಶೀಲ ಚಿಂತನೆ, ಕುತೂಹಲ ಬೆಳೆಸಬೇಕು’ ಎಂದರು.</p>.<p>‘ಸಾಹಿತ್ಯವನ್ನು ಆಕರ್ಷವಾಗಿ ಬೋಧಿಸುವ ನಿಟ್ಟಿನಲ್ಲಿ ಹೊಸ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು. ವಿಷಯಗಳನ್ನು ಮನದಟ್ಟು ಮಾಡಿಸಬೇಕು’ ಎಂದು ಹೇದರು.</p>.<p>ಅಧ್ಯಕ್ಷತೆ ವಹಿಸಿದ್ದ ಮಾಳವಿಯಾ ಸೆಂಟರ್ ನಿರ್ದೇಶಕ ಬಿ. ಎಚ್.ನಾಗೂರು ಮಾತನಾಡಿ, ‘ಅಧ್ಯಾಪಕರು ನಿರಂತರ ಜ್ಞಾನಾಭಿವೃದ್ಧಿಗೆ ಗಮನ ಹರಿಸಬೇಕು. ಶಿಬಿರದಲ್ಲಿ ತರಬೇತಿ ಪಡೆದ ಶಿಕ್ಷಕರು ತರಗತಿಗಳಲ್ಲಿ ವಿದ್ಯಾರ್ಥಿಗಳಲ್ಲಿ ಕಲಿಕಾ ಆಸಕ್ತಿಯನ್ನು ಹೆಚ್ಚಿಸಿದರೆ ತರಬೇತಿ ಉದ್ದೇಶ ಸಾರ್ಥಕವಾಗುತ್ತದೆ’ ಎಂದರು.</p>.<p>ಶಿಬಿರದಲ್ಲಿ ಭಾಗವಹಿಸಿದ ಪ್ರಾಧ್ಯಾಪಕರಿಗೆ ಪ್ರಮಾಣಪತ್ರ ನೀಡಲಾಯಿತು. ಶಿಬಿರದ ಸಂಯೋಜಕ ನಿಂಗಪ್ಪ ಮುದೇನೂರು, ಅನಸೂಯಾ ಕಂಬಳೆ, ಎಂ.ಡಿ.ಒಕ್ಕುಂದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ಮೌಲ್ಯಗಳು, ಸಂಸ್ಕೃತಿಯನ್ನು ರೂಪಿಸುವ ನಿಟ್ಟಿನಲ್ಲಿ ಸಾಹಿತ್ಯವು ಮಹತ್ವದ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಅಧ್ಯಯನ ಆಸಕ್ತಿಯನ್ನು ಬೆಳೆಸಬೇಕು ಎಂದು ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎ.ಎಂ.ಖಾನ್ ಹೇಳಿದರು.</p>.<p>ಕರ್ನಾಟಕ ವಿಶ್ವವಿದ್ಯಾಲಯದ ಮಾಳವಿಯಾ ಮಿಷನ್ ಟೀಚರ್ಸ್ ಟ್ರೇನಿಂಗ್ ಸೆಂಟರ್ ವತಿಯಿಂದ ನಡೆದ ಕನ್ನಡ ಪ್ರಾಧ್ಯಾಪಕರ ಪುನಶ್ಚೇತನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳಲ್ಲಿ ಅಧ್ಯಯನ ಕಡಿಮೆಯಾಗುತ್ತಿದೆ. ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಅಧ್ಯಯನ ಆಸಕ್ತಿಯನ್ನು ಬೆಳೆಸಬೇಕು. ಪಾಠ ಬೋಧನೆ ಮಾತ್ರವಲ್ಲ ಸಾಹಿತ್ಯದ ಮೂಲಕ ಪ್ರಗತಿಶೀಲ ಚಿಂತನೆ, ಕುತೂಹಲ ಬೆಳೆಸಬೇಕು’ ಎಂದರು.</p>.<p>‘ಸಾಹಿತ್ಯವನ್ನು ಆಕರ್ಷವಾಗಿ ಬೋಧಿಸುವ ನಿಟ್ಟಿನಲ್ಲಿ ಹೊಸ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು. ವಿಷಯಗಳನ್ನು ಮನದಟ್ಟು ಮಾಡಿಸಬೇಕು’ ಎಂದು ಹೇದರು.</p>.<p>ಅಧ್ಯಕ್ಷತೆ ವಹಿಸಿದ್ದ ಮಾಳವಿಯಾ ಸೆಂಟರ್ ನಿರ್ದೇಶಕ ಬಿ. ಎಚ್.ನಾಗೂರು ಮಾತನಾಡಿ, ‘ಅಧ್ಯಾಪಕರು ನಿರಂತರ ಜ್ಞಾನಾಭಿವೃದ್ಧಿಗೆ ಗಮನ ಹರಿಸಬೇಕು. ಶಿಬಿರದಲ್ಲಿ ತರಬೇತಿ ಪಡೆದ ಶಿಕ್ಷಕರು ತರಗತಿಗಳಲ್ಲಿ ವಿದ್ಯಾರ್ಥಿಗಳಲ್ಲಿ ಕಲಿಕಾ ಆಸಕ್ತಿಯನ್ನು ಹೆಚ್ಚಿಸಿದರೆ ತರಬೇತಿ ಉದ್ದೇಶ ಸಾರ್ಥಕವಾಗುತ್ತದೆ’ ಎಂದರು.</p>.<p>ಶಿಬಿರದಲ್ಲಿ ಭಾಗವಹಿಸಿದ ಪ್ರಾಧ್ಯಾಪಕರಿಗೆ ಪ್ರಮಾಣಪತ್ರ ನೀಡಲಾಯಿತು. ಶಿಬಿರದ ಸಂಯೋಜಕ ನಿಂಗಪ್ಪ ಮುದೇನೂರು, ಅನಸೂಯಾ ಕಂಬಳೆ, ಎಂ.ಡಿ.ಒಕ್ಕುಂದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>