<p><strong>ಹುಬ್ಬಳ್ಳಿ</strong>: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ವೇದಾಂತ ಕಂಪನಿಯ ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ಚಟುವಟಿಕೆಯಡಿ (ಸಿಎಸ್ಆರ್) 5 ಹೊಸ ಅಂಗನವಾಡಿ ಕೇಂದ್ರಗಳ ನಿರ್ಮಾಣ ಸೇರಿದಂತೆ ಒಟ್ಟು 96 ಅಂಗನವಾಡಿ ಕೇಂದ್ರಗಳನ್ನು ಸುಸಜ್ಜಿತ ‘ನಂದಘರ್’ ಕೇಂದ್ರಗಳನ್ನಾಗಿ ನವೀಕರಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.</p>.<p>ಎನ್ಎಂಡಿಸಿಯ ಸಿಎಸ್ಆರ್ ಅಡಿ 10 ಅಂಗನವಾಡಿ ಹಾಗೂ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ 9 ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.</p>.<p>‘ನಂದಘರ್’ ಕೇಂದ್ರಗಳಲ್ಲಿ ಮಕ್ಕಳಿಗೆ ಆಸನಗಳ ವ್ಯವಸ್ಥೆ, ಸೌರ ವಿದ್ಯುತ್ ವ್ಯವಸ್ಥೆ, ಶುದ್ಧ ಕುಡಿಯುವ ನೀರಿಗಾಗಿ ವಾಟರ್ ಫಿಲ್ಟರ್ ವ್ಯವಸ್ಥೆ, ಸುಸಜ್ಜಿತ ಶೌಚಾಲಯ, ಸ್ಮಾರ್ಟ್ ಟಿ.ವಿ.ಮೂಲಕ ‘ಇ-ಕಲಿಕೆ’ ವ್ಯವಸ್ಥೆ, ಆಟಿಕೆ ಸಾಮಗ್ರಿಗಳು ಸೇರಿದಂತೆ ವಿವಿಧ ಸೌಲಭ್ಯಗಳಿವೆ ಎಂದಿದ್ದಾರೆ.</p>.<p> ಶಿಗ್ಗಾವಿ ತಾಲ್ಲೂಕಿನ ಹಿರೆಬೆಂಡಿಗೇರಿ, ಸವಣೂರು ಪಟ್ಟಣ, ಕುಂದಗೋಳ ತಾಲ್ಲೂಕಿನ ಗುಡೇನಕಟ್ಟಿ, ನವಲಗುಂದ ತಾಲ್ಲೂಕಿನ ಮೊರಬ ಹಾಗೂ ಧಾರವಾಡ ತಾಲ್ಲೂಕಿನ ನುಗ್ಗಿಕೇರಿ ಗ್ರಾಮಗಳಲ್ಲಿ ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ತೆರವುಗೊಳಿಸಿ 5 ನಂದಘರ್ ಕೇಂದ್ರಗಳನ್ನು ನಿರ್ಮಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಮಕ್ಕಳಿಗೆ ಪೂರ್ವ ಪ್ರಾಥಮಿಕ ಹಂತದಿಂದಲೇ ಕಂಪ್ಯೂಟರ್ ಆಧಾರಿತ ಕಲಿಕೆ ಕೈಗೊಳ್ಳಲಾಗುತ್ತಿದೆ. ರೈಮ್ಸ್ಗಳನ್ನು ವಿಡಿಯೊ ಮೂಲಕ ಕಲಿಸಲಾಗುತ್ತದೆ. ಇದರಿಂದ ಪರಿಣಾಮಕಾರಿ ಕಲಿಕೆ ಸಾಧ್ಯವಾಗಲಿದ್ದು, ಆರಂಭಿಕ ಹಂತದಿಂದಲೇ ಮಕ್ಕಳಿಗೆ ಇ-ಕಲಿಕೆ ಪರಿಚಯ, ಜ್ಞಾನ ದೊರೆಯಲಿದೆ. ಇದರಿಂದ ತಂತ್ರಜ್ಷಾನ ಆಧಾರಿತ ಕಲಿಕೆಗೆ ಮಕ್ಕಳು ಸುಲಭವಾಗಿ ಹೊಂದಿಕೊಳ್ಳುತ್ತಾರೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ವೇದಾಂತ ಕಂಪನಿಯ ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ಚಟುವಟಿಕೆಯಡಿ (ಸಿಎಸ್ಆರ್) 5 ಹೊಸ ಅಂಗನವಾಡಿ ಕೇಂದ್ರಗಳ ನಿರ್ಮಾಣ ಸೇರಿದಂತೆ ಒಟ್ಟು 96 ಅಂಗನವಾಡಿ ಕೇಂದ್ರಗಳನ್ನು ಸುಸಜ್ಜಿತ ‘ನಂದಘರ್’ ಕೇಂದ್ರಗಳನ್ನಾಗಿ ನವೀಕರಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.</p>.<p>ಎನ್ಎಂಡಿಸಿಯ ಸಿಎಸ್ಆರ್ ಅಡಿ 10 ಅಂಗನವಾಡಿ ಹಾಗೂ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ 9 ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.</p>.<p>‘ನಂದಘರ್’ ಕೇಂದ್ರಗಳಲ್ಲಿ ಮಕ್ಕಳಿಗೆ ಆಸನಗಳ ವ್ಯವಸ್ಥೆ, ಸೌರ ವಿದ್ಯುತ್ ವ್ಯವಸ್ಥೆ, ಶುದ್ಧ ಕುಡಿಯುವ ನೀರಿಗಾಗಿ ವಾಟರ್ ಫಿಲ್ಟರ್ ವ್ಯವಸ್ಥೆ, ಸುಸಜ್ಜಿತ ಶೌಚಾಲಯ, ಸ್ಮಾರ್ಟ್ ಟಿ.ವಿ.ಮೂಲಕ ‘ಇ-ಕಲಿಕೆ’ ವ್ಯವಸ್ಥೆ, ಆಟಿಕೆ ಸಾಮಗ್ರಿಗಳು ಸೇರಿದಂತೆ ವಿವಿಧ ಸೌಲಭ್ಯಗಳಿವೆ ಎಂದಿದ್ದಾರೆ.</p>.<p> ಶಿಗ್ಗಾವಿ ತಾಲ್ಲೂಕಿನ ಹಿರೆಬೆಂಡಿಗೇರಿ, ಸವಣೂರು ಪಟ್ಟಣ, ಕುಂದಗೋಳ ತಾಲ್ಲೂಕಿನ ಗುಡೇನಕಟ್ಟಿ, ನವಲಗುಂದ ತಾಲ್ಲೂಕಿನ ಮೊರಬ ಹಾಗೂ ಧಾರವಾಡ ತಾಲ್ಲೂಕಿನ ನುಗ್ಗಿಕೇರಿ ಗ್ರಾಮಗಳಲ್ಲಿ ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ತೆರವುಗೊಳಿಸಿ 5 ನಂದಘರ್ ಕೇಂದ್ರಗಳನ್ನು ನಿರ್ಮಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಮಕ್ಕಳಿಗೆ ಪೂರ್ವ ಪ್ರಾಥಮಿಕ ಹಂತದಿಂದಲೇ ಕಂಪ್ಯೂಟರ್ ಆಧಾರಿತ ಕಲಿಕೆ ಕೈಗೊಳ್ಳಲಾಗುತ್ತಿದೆ. ರೈಮ್ಸ್ಗಳನ್ನು ವಿಡಿಯೊ ಮೂಲಕ ಕಲಿಸಲಾಗುತ್ತದೆ. ಇದರಿಂದ ಪರಿಣಾಮಕಾರಿ ಕಲಿಕೆ ಸಾಧ್ಯವಾಗಲಿದ್ದು, ಆರಂಭಿಕ ಹಂತದಿಂದಲೇ ಮಕ್ಕಳಿಗೆ ಇ-ಕಲಿಕೆ ಪರಿಚಯ, ಜ್ಞಾನ ದೊರೆಯಲಿದೆ. ಇದರಿಂದ ತಂತ್ರಜ್ಷಾನ ಆಧಾರಿತ ಕಲಿಕೆಗೆ ಮಕ್ಕಳು ಸುಲಭವಾಗಿ ಹೊಂದಿಕೊಳ್ಳುತ್ತಾರೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>