<p><strong>ಹುಬ್ಬಳ್ಳಿ</strong>: 'ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಎಲ್ಲಿಂದಲೋ ಪೇಮೆಂಟ್ ಬಂದಿದೆ. ಅದಕ್ಕೆ ಸ್ಪರ್ಧಿಸಿದ್ದಾರೆ' ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು. </p><p>ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. </p><p>‘ಯಾರು ಪೇಮೆಂಟ್ ಮಾಡಿದ್ದಾರೆ ಎನ್ನುವುದನ್ನು ಮೇ 7ರ ನಂತರ ಹೇಳುವೆ' ಎಂದು ತಿಳಿಸಿದರು. </p><p>'ಮೊದಲು ಶಾಸಕ ವಿನಯ ಕುಲಕರ್ಣಿ ಅವರು ಸ್ವಾಮೀಜಿ ಅವರನ್ನು ಬೇಕಾಬಿಟ್ಟಿ ಬಯ್ಯುತ್ತಿದ್ದರು. ಈಗ ಹೊಗಳುತ್ತಿದ್ದಾರೆ ಎಂದರೆ ಪೇಮೆಂಟ್ ಆಗಿದೆ‘ ಎಂದೇ ಅರ್ಥ ಎಂದು ವ್ಯಂಗ್ಯವಾಡಿದರು. </p><p><strong>ರಾಜ್ಯಪಾಲರು ಎಚ್ಚರಿಕೆ ನೀಡಲಿ</strong>: ಕಾಂಗ್ರೆಸ್ ಸರ್ಕಾರ ಬಂದ ನಂತರ ರಾಜ್ಯದಲ್ಲಿ ನಿರಂತರವಾಗಿ ಹಲ್ಲೆ, ಕೊಲೆಗಳು ನಡೆದಿವೆ. ಈ ಪರಿಸ್ಥಿತಿ ಬಗ್ಗೆ ರಾಷ್ಟ್ರಪತಿ ಅವರಿಗೆ ವರದಿ ನೀಡಬೇಕು. ಜೊತೆಗೆ ಇಲ್ಲಿನ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು ಎಂದು ಹೇಳಿದರು. </p><p>ರಾಜ್ಯದಲ್ಲಿ ಹಿಂದೂಗಳಿಗೆ ಹಾಗೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: 'ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಎಲ್ಲಿಂದಲೋ ಪೇಮೆಂಟ್ ಬಂದಿದೆ. ಅದಕ್ಕೆ ಸ್ಪರ್ಧಿಸಿದ್ದಾರೆ' ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು. </p><p>ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. </p><p>‘ಯಾರು ಪೇಮೆಂಟ್ ಮಾಡಿದ್ದಾರೆ ಎನ್ನುವುದನ್ನು ಮೇ 7ರ ನಂತರ ಹೇಳುವೆ' ಎಂದು ತಿಳಿಸಿದರು. </p><p>'ಮೊದಲು ಶಾಸಕ ವಿನಯ ಕುಲಕರ್ಣಿ ಅವರು ಸ್ವಾಮೀಜಿ ಅವರನ್ನು ಬೇಕಾಬಿಟ್ಟಿ ಬಯ್ಯುತ್ತಿದ್ದರು. ಈಗ ಹೊಗಳುತ್ತಿದ್ದಾರೆ ಎಂದರೆ ಪೇಮೆಂಟ್ ಆಗಿದೆ‘ ಎಂದೇ ಅರ್ಥ ಎಂದು ವ್ಯಂಗ್ಯವಾಡಿದರು. </p><p><strong>ರಾಜ್ಯಪಾಲರು ಎಚ್ಚರಿಕೆ ನೀಡಲಿ</strong>: ಕಾಂಗ್ರೆಸ್ ಸರ್ಕಾರ ಬಂದ ನಂತರ ರಾಜ್ಯದಲ್ಲಿ ನಿರಂತರವಾಗಿ ಹಲ್ಲೆ, ಕೊಲೆಗಳು ನಡೆದಿವೆ. ಈ ಪರಿಸ್ಥಿತಿ ಬಗ್ಗೆ ರಾಷ್ಟ್ರಪತಿ ಅವರಿಗೆ ವರದಿ ನೀಡಬೇಕು. ಜೊತೆಗೆ ಇಲ್ಲಿನ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು ಎಂದು ಹೇಳಿದರು. </p><p>ರಾಜ್ಯದಲ್ಲಿ ಹಿಂದೂಗಳಿಗೆ ಹಾಗೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>