<p><strong>ಧಾರವಾಡ</strong>: ಧಾರವಾಡ ಮನೋಹರ ಗ್ರಂಥಮಾಲಾ ಸಂಪಾದಕ, ಪ್ರಕಾಶಕ, ಲೇಖಕ, ನಿವೃತ್ತ ಪ್ರೊ.ರಮಾಕಾಂತ ಜಿ. ಜೋಶಿ (89) ಅವರು ಹುಬ್ಬಳ್ಳಿಯ ಶುಚಿರಾಯಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. </p><p>ರಮಾಕಾಂತ ಅವರು ನಗರದ ಕರ್ನಾಟಕ ವಿದ್ಯಾಲಯದಲ್ಲಿ ಬಿ.ಎ, ಗುಜರಾತಿನ ಸರ್ದಾರ್ ಪಟೇಲ್ ವಿ.ವಿ.ಯಲ್ಲಿ ಎಂ.ಎ ಮತ್ತು ಪಿಎಚ್. ಡಿ ಪಡೆದಿದ್ದರು. ನಗರದ ಕಿಟೆಲ್ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿ, 1994ರಲ್ಲಿ ನಿವೃತ್ತರಾಗಿದ್ದರು. </p><p>ಅಪ್ಪ ಜಿ.ಬಿ.ಜೋಶಿ ಅವರು 1993 ರಲ್ಲಿ ನಿಧನರಾದ ನಂತರ ಮನೋಹರ ಗ್ರಂಥಮಾಲಾ ಜವಾಬ್ದಾರಿ ವಹಿಸಿಕೊಂಡಿದ್ದರು. ಗ್ರಂಥಮಾಲಾದಲ್ಲಿ ಬಹಳಷ್ಟು ಸಾಹಿತ್ಯಕ ಚಟುವಟಿಕೆಗಳನ್ನು ನಡೆಸಿದ್ದರು. </p><p>ದೀನಾನಾಥ ಮಲ್ಹೋತ್ರಾ ಅವರ ‘ಬುಕ್ ಪಬ್ಲಿಷಿಂಗ್’ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದರು. ‘ಎ.ಕೆ.ರಾಮಾನುಜನ್ ಸಮಗ್ರ ಸಂಪುಟ’, ‘ರಾಘವೇಂದ್ರ ಖಾಸನೀಸ ಸಮಗ್ರ’, ‘ಒಂದಿಷ್ಟು ಹೊಸ ಕತೆಗಳು’ ‘ಸವಣೂರ ವಾಮನರಾವ ಸಮಗ್ರ ನಾಟಕ’, ‘ಮಿತ್ ಇನ್ ಇಂಡಿಯನ್ ಡ್ರಾಮಾ’ ಮೊದಲಾದ ಕೃತಿಗಳನ್ನು ಸಂಪಾದಿಸಿದ್ದಾರೆ. </p><p>ನವದೆಹಲಿಯ ಭಾರತೀಯ ಪ್ರಕಾಶಕರ ಒಕ್ಕೂಟದ 'ವಿಶಿಷ್ಟ ಪ್ರಕಾಶಕ ಪ್ರಶಸ್ತಿ', ಕನ್ನಡ ಪುಸ್ತಕ ಪ್ರಾಧಿಕಾರದ ‘ಅತ್ಯುತ್ತಮ ಪ್ರಕಾಶನ‘ ಪ್ರಶಸ್ತಿ, 'ಆಳ್ವಾ ನುಡಿಸಿರಿ' ಪ್ರಶಸ್ತಿ ಸಹಿತ ಹಲವು ಪುರಸ್ಕಾರಕಗಳು ಸಂದಿವೆ. </p><p>ಅವರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯವರು ಇದ್ದಾರೆ. ನಗರದ ಮಂಗಳವಾರ ಪೇಟೆಯ ಮೆಣಸಿನಕಾಯಿ ಓಣಿಯ ಅವರ ಸ್ವಗೃಹದಲ್ಲಿ ಮೇ 18ರಂದು ಬೆಳಿಗ್ಗೆ 9 ರಿಂದ 10 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹೊಸಯಲ್ಲಾಪುರ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಧಾರವಾಡ ಮನೋಹರ ಗ್ರಂಥಮಾಲಾ ಸಂಪಾದಕ, ಪ್ರಕಾಶಕ, ಲೇಖಕ, ನಿವೃತ್ತ ಪ್ರೊ.ರಮಾಕಾಂತ ಜಿ. ಜೋಶಿ (89) ಅವರು ಹುಬ್ಬಳ್ಳಿಯ ಶುಚಿರಾಯಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. </p><p>ರಮಾಕಾಂತ ಅವರು ನಗರದ ಕರ್ನಾಟಕ ವಿದ್ಯಾಲಯದಲ್ಲಿ ಬಿ.ಎ, ಗುಜರಾತಿನ ಸರ್ದಾರ್ ಪಟೇಲ್ ವಿ.ವಿ.ಯಲ್ಲಿ ಎಂ.ಎ ಮತ್ತು ಪಿಎಚ್. ಡಿ ಪಡೆದಿದ್ದರು. ನಗರದ ಕಿಟೆಲ್ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿ, 1994ರಲ್ಲಿ ನಿವೃತ್ತರಾಗಿದ್ದರು. </p><p>ಅಪ್ಪ ಜಿ.ಬಿ.ಜೋಶಿ ಅವರು 1993 ರಲ್ಲಿ ನಿಧನರಾದ ನಂತರ ಮನೋಹರ ಗ್ರಂಥಮಾಲಾ ಜವಾಬ್ದಾರಿ ವಹಿಸಿಕೊಂಡಿದ್ದರು. ಗ್ರಂಥಮಾಲಾದಲ್ಲಿ ಬಹಳಷ್ಟು ಸಾಹಿತ್ಯಕ ಚಟುವಟಿಕೆಗಳನ್ನು ನಡೆಸಿದ್ದರು. </p><p>ದೀನಾನಾಥ ಮಲ್ಹೋತ್ರಾ ಅವರ ‘ಬುಕ್ ಪಬ್ಲಿಷಿಂಗ್’ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದರು. ‘ಎ.ಕೆ.ರಾಮಾನುಜನ್ ಸಮಗ್ರ ಸಂಪುಟ’, ‘ರಾಘವೇಂದ್ರ ಖಾಸನೀಸ ಸಮಗ್ರ’, ‘ಒಂದಿಷ್ಟು ಹೊಸ ಕತೆಗಳು’ ‘ಸವಣೂರ ವಾಮನರಾವ ಸಮಗ್ರ ನಾಟಕ’, ‘ಮಿತ್ ಇನ್ ಇಂಡಿಯನ್ ಡ್ರಾಮಾ’ ಮೊದಲಾದ ಕೃತಿಗಳನ್ನು ಸಂಪಾದಿಸಿದ್ದಾರೆ. </p><p>ನವದೆಹಲಿಯ ಭಾರತೀಯ ಪ್ರಕಾಶಕರ ಒಕ್ಕೂಟದ 'ವಿಶಿಷ್ಟ ಪ್ರಕಾಶಕ ಪ್ರಶಸ್ತಿ', ಕನ್ನಡ ಪುಸ್ತಕ ಪ್ರಾಧಿಕಾರದ ‘ಅತ್ಯುತ್ತಮ ಪ್ರಕಾಶನ‘ ಪ್ರಶಸ್ತಿ, 'ಆಳ್ವಾ ನುಡಿಸಿರಿ' ಪ್ರಶಸ್ತಿ ಸಹಿತ ಹಲವು ಪುರಸ್ಕಾರಕಗಳು ಸಂದಿವೆ. </p><p>ಅವರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯವರು ಇದ್ದಾರೆ. ನಗರದ ಮಂಗಳವಾರ ಪೇಟೆಯ ಮೆಣಸಿನಕಾಯಿ ಓಣಿಯ ಅವರ ಸ್ವಗೃಹದಲ್ಲಿ ಮೇ 18ರಂದು ಬೆಳಿಗ್ಗೆ 9 ರಿಂದ 10 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹೊಸಯಲ್ಲಾಪುರ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>