<p><strong>ಧಾರವಾಡ</strong>: ಧಾರವಾಡದ ಸಪ್ತಾಪೂರ ಬಾವಿ ಬಳಿಯ ಮಾಜಿ ಸೈನಿಕರೊಬ್ಬರ ‘ಸೈನಿಕ್ ಮೆಸ್’ನಲ್ಲಿ ಇತ್ತೀಚೆಗೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಉಪನಗರ ಠಾಣೆ ಎಎಸ್ಐ ವಿದ್ಯಾನಂದ ಸುಬೇದಾರ್ ಹಾಗೂ ಕಾನ್ಸ್ಟೆಬಲ್ ರಾಚಪ್ಪ ಕಣಬೂರು ಅವರನ್ನು ಅಮಾನತುಗೊಳಿಸಲಾಗಿದೆ.</p><p>ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.</p><p>ಸಪ್ತಾಪೂರ ಬಾವಿಯ ವಿವೇಕಾನಂದ ವೃತ್ತದ ಸೈನಿಕ ಮೆಸ್ನಲ್ಲಿ ಸೆ.28 ರಂದು ರಾತ್ರಿ ಗಲಾಟೆ ನಡೆದಿತ್ತು. ಅವಧಿ ಮೀರಿದ್ದರೂ ಬಾಗಿಲು ಬಂದ್ ಮಾಡಿಲ್ಲ ಎಂಬ ವಿಚಾರವಾಗಿ ಗಲಾಟೆ ನಡೆದಿದೆ ಎಂದು ಆರೋಪಿಸಲಾಗಿತ್ತು.</p><p>ಪೋಲೀಸರು ಮೆಸ್ ಮಾಲೀಕ, ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ಆರೋಪಿಸಿ ರಾಮಪ್ಪ ಪತ್ನಿ ಗೀತಾ ದೂರು ನೀಡಿದ್ದರು.</p>.ಧಾರವಾಡ | ಸಾಧನೆಗೆ ಶ್ರದ್ಧೆ, ಕಠಿಣ ಪರಿಶ್ರಮ ಮುಖ್ಯ: ಎನ್. ಶಶಿಕುಮಾರ್.ಧಾರವಾಡ | ಐದು ವರ್ಷದಲ್ಲಿ 5,002 ಅಪಘಾತ ಪ್ರಕರಣ: 1,743 ಮಂದಿ ಸಾವು!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಧಾರವಾಡದ ಸಪ್ತಾಪೂರ ಬಾವಿ ಬಳಿಯ ಮಾಜಿ ಸೈನಿಕರೊಬ್ಬರ ‘ಸೈನಿಕ್ ಮೆಸ್’ನಲ್ಲಿ ಇತ್ತೀಚೆಗೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಉಪನಗರ ಠಾಣೆ ಎಎಸ್ಐ ವಿದ್ಯಾನಂದ ಸುಬೇದಾರ್ ಹಾಗೂ ಕಾನ್ಸ್ಟೆಬಲ್ ರಾಚಪ್ಪ ಕಣಬೂರು ಅವರನ್ನು ಅಮಾನತುಗೊಳಿಸಲಾಗಿದೆ.</p><p>ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.</p><p>ಸಪ್ತಾಪೂರ ಬಾವಿಯ ವಿವೇಕಾನಂದ ವೃತ್ತದ ಸೈನಿಕ ಮೆಸ್ನಲ್ಲಿ ಸೆ.28 ರಂದು ರಾತ್ರಿ ಗಲಾಟೆ ನಡೆದಿತ್ತು. ಅವಧಿ ಮೀರಿದ್ದರೂ ಬಾಗಿಲು ಬಂದ್ ಮಾಡಿಲ್ಲ ಎಂಬ ವಿಚಾರವಾಗಿ ಗಲಾಟೆ ನಡೆದಿದೆ ಎಂದು ಆರೋಪಿಸಲಾಗಿತ್ತು.</p><p>ಪೋಲೀಸರು ಮೆಸ್ ಮಾಲೀಕ, ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ಆರೋಪಿಸಿ ರಾಮಪ್ಪ ಪತ್ನಿ ಗೀತಾ ದೂರು ನೀಡಿದ್ದರು.</p>.ಧಾರವಾಡ | ಸಾಧನೆಗೆ ಶ್ರದ್ಧೆ, ಕಠಿಣ ಪರಿಶ್ರಮ ಮುಖ್ಯ: ಎನ್. ಶಶಿಕುಮಾರ್.ಧಾರವಾಡ | ಐದು ವರ್ಷದಲ್ಲಿ 5,002 ಅಪಘಾತ ಪ್ರಕರಣ: 1,743 ಮಂದಿ ಸಾವು!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>