<p><strong>ಧಾರವಾಡ:</strong> 12 ವರ್ಷದ ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಕಲಘಟಗಿ ತಾಲ್ಲೂಕಿನ ನೆಲ್ಲಿಹರವಿ ತಾಂಡಾದ ಉಮೇಶ ರತ್ನಪ್ಪ ಲಮಾಣಿ (30) ಎಂಬಾತಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹ 60,500 ದಂಡವನ್ನು ನಗರದ ಎರಡನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ವಿಶೇಷ ಪೊಕ್ಸೊ ಕೋರ್ಟ್ ವಿಧಿಸಿದೆ. </p><p>ನ್ಯಾಯಾಧೀಶ ರಾಜಕುಮಾರ ಸಿ. ಅವರು ಆದೇಶ ನೀಡಿದ್ದಾರೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಡಿ (ಪೊಕ್ಸೊ) ಶಿಕ್ಷೆ ವಿಧಿಸಿದ್ದಾರೆ. ದಂಡದ ಹಣ ₹ 60,500ಮತ್ತು ಪರಿಹಾರ ನಿಧಿಯಿಂದ ₹ 6 ಲಕ್ಷವನ್ನು ಸಂತ್ರಸ್ತ ಬಾಲಕಿಗೆ ನೀಡುವಂತೆ ಆದೇಶಿಸಿದ್ದಾರೆ. </p><p><strong>ಏನಿದು ಪ್ರಕರಣ?:</strong> 2022 ಆಗಸ್ಟ್ 16ರಂದು ಪ್ರಕರಣ ನಡೆದಿತ್ತು. ನೆಲ್ಲಿಹರವಿ ತಾಂಡಾದ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಾಲಕಿಯನ್ನು ಉಮೇಶ ಬೈಕ್ನಲ್ಲಿ ಕರೆದೊಯ್ದಿದ್ದ. ಬಮ್ಮಿಗಟ್ಟಿ ಸಮೀಪ ಬೈಕ್ ನಿಲ್ಲಿಸಿ, ಬಾಲಕಿಯನ್ನು ಹೊಲಕ್ಕೆ ಹೊತ್ತೊಯ್ದು ಅತ್ಯಾಚಾರ ಎಸಗಿದ್ದ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. </p><p>ಪೊಲೀಸ್ ಇನ್ಸ್ಪೆಕ್ಟರ್ ಶ್ರೀಶೈಲ ಕೌಜಲಗಿ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿಯನ್ನು ಕೋರ್ಟ್ಗೆ ಸಲ್ಲಿಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಶೈಲಾ ಅಂಗಡಿ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> 12 ವರ್ಷದ ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಕಲಘಟಗಿ ತಾಲ್ಲೂಕಿನ ನೆಲ್ಲಿಹರವಿ ತಾಂಡಾದ ಉಮೇಶ ರತ್ನಪ್ಪ ಲಮಾಣಿ (30) ಎಂಬಾತಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹ 60,500 ದಂಡವನ್ನು ನಗರದ ಎರಡನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ವಿಶೇಷ ಪೊಕ್ಸೊ ಕೋರ್ಟ್ ವಿಧಿಸಿದೆ. </p><p>ನ್ಯಾಯಾಧೀಶ ರಾಜಕುಮಾರ ಸಿ. ಅವರು ಆದೇಶ ನೀಡಿದ್ದಾರೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಡಿ (ಪೊಕ್ಸೊ) ಶಿಕ್ಷೆ ವಿಧಿಸಿದ್ದಾರೆ. ದಂಡದ ಹಣ ₹ 60,500ಮತ್ತು ಪರಿಹಾರ ನಿಧಿಯಿಂದ ₹ 6 ಲಕ್ಷವನ್ನು ಸಂತ್ರಸ್ತ ಬಾಲಕಿಗೆ ನೀಡುವಂತೆ ಆದೇಶಿಸಿದ್ದಾರೆ. </p><p><strong>ಏನಿದು ಪ್ರಕರಣ?:</strong> 2022 ಆಗಸ್ಟ್ 16ರಂದು ಪ್ರಕರಣ ನಡೆದಿತ್ತು. ನೆಲ್ಲಿಹರವಿ ತಾಂಡಾದ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಾಲಕಿಯನ್ನು ಉಮೇಶ ಬೈಕ್ನಲ್ಲಿ ಕರೆದೊಯ್ದಿದ್ದ. ಬಮ್ಮಿಗಟ್ಟಿ ಸಮೀಪ ಬೈಕ್ ನಿಲ್ಲಿಸಿ, ಬಾಲಕಿಯನ್ನು ಹೊಲಕ್ಕೆ ಹೊತ್ತೊಯ್ದು ಅತ್ಯಾಚಾರ ಎಸಗಿದ್ದ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. </p><p>ಪೊಲೀಸ್ ಇನ್ಸ್ಪೆಕ್ಟರ್ ಶ್ರೀಶೈಲ ಕೌಜಲಗಿ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿಯನ್ನು ಕೋರ್ಟ್ಗೆ ಸಲ್ಲಿಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಶೈಲಾ ಅಂಗಡಿ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>