<p><strong>ಧಾರವಾಡ:</strong> ‘ಜಿಲ್ಲಾ ಗ್ರಾಹಕರ ಆಯೋಗವು ವಂಚನೆ ಪ್ರಕರಣದಲ್ಲಿ ಆರೋಪಿ ಹುಬ್ಬಳ್ಳಿಯ ಪೃಥ್ವಿ ಬಿಲ್ಡರ್ ಮತ್ತು ಡೆವಲಪರ್ಸ್ ಪಾಲುದಾರ ಶಿವನಗೌಡ ಆರ್. ಪಾಟೀಲ ಅವರ ಬಂಧನಕ್ಕೆ ಆದೇಶ ಹೊರಡಿಸಿದ್ದರೂ ಪೊಲೀಸರು ಕ್ರಮ ವಹಿಸಿಲ್ಲ’ ಎಂದು ನಿವೃತ್ತ ಸೈನಿಕ ಚಿಂತಾಮಣಿ ಸುರಪುರ ದೂರಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಆರೋಪಿಯನ್ನು ಬಂಧಿಸುವಂತೆ ವಿದ್ಯಾನಗರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ಗೆ ಮಾರ್ಚ್ 14ರಂದು ಮನವಿ ಸಲ್ಲಿಸಿದ್ದೇವೆ. ಆರೋಪಿ ಸಿಕ್ಕಿಲ್ಲ, ನಿಮಗೆ ಸಿಕ್ಕರೆ ತಿಳಿಸಿ ಎಂದು ನಮಗೇ ಹೇಳಿದ್ದಾರೆ. ಪೊಲೀಸರಿಂದ ಜವಾಬ್ದಾರಿಯುತ ನೆರವು ಸಿಗುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಶಿವನಗೌಡ ಅವರು ತಾಲ್ಲೂಕಿನ ತಡಸಿನಕೊಪ್ಪ ಭಾಗದಲ್ಲಿ ಮೂರನೇ ಹಂತದಲ್ಲಿ ಬಡಾವಣೆ ಅಭಿವೃದ್ಧಿ ನಿವೇಶನ ನೀಡುವುದಾಗಿ ಕಂತುಗಳಲ್ಲಿ ಹಣ ಪಡೆದಿದ್ದಾರೆ. 15 ಮಂದಿ ₹ 1.82 ಕೋಟಿ ಹಣ ಪಡೆದಿದ್ದಾರೆ. ನಂತರ, ನಿವೇಶನ ನೀಡಿಲ್ಲ. ಬಿಲ್ಡರ್ ವಿರುದ್ಧ ಜಿಲ್ಲಾ ಗ್ರಾಹಕರ ಆಯೋಗದಲ್ಲಿ ದೂರು ನೀಡಿದ್ದೇವೆ. ಆಯೋಗ ವಿಚಾರಣೆ ನಡೆಸಿ ಆರೋಪಿ ಬಂಧನಕ್ಕೆ ಆದೇಶ ನೀಡಿದೆ’ ಎಂದರು.</p>.<p>‘ಪೊಲೀಸ್ ಇಲಾಖೆ ಮೇಲಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಬೇಕು. ಜನಪ್ರತಿನಿಧಿಗಳು ನ್ಯಾಯ ದೊರಕಿಸಬೇಕು’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಜಿಲ್ಲಾ ಗ್ರಾಹಕರ ಆಯೋಗವು ವಂಚನೆ ಪ್ರಕರಣದಲ್ಲಿ ಆರೋಪಿ ಹುಬ್ಬಳ್ಳಿಯ ಪೃಥ್ವಿ ಬಿಲ್ಡರ್ ಮತ್ತು ಡೆವಲಪರ್ಸ್ ಪಾಲುದಾರ ಶಿವನಗೌಡ ಆರ್. ಪಾಟೀಲ ಅವರ ಬಂಧನಕ್ಕೆ ಆದೇಶ ಹೊರಡಿಸಿದ್ದರೂ ಪೊಲೀಸರು ಕ್ರಮ ವಹಿಸಿಲ್ಲ’ ಎಂದು ನಿವೃತ್ತ ಸೈನಿಕ ಚಿಂತಾಮಣಿ ಸುರಪುರ ದೂರಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಆರೋಪಿಯನ್ನು ಬಂಧಿಸುವಂತೆ ವಿದ್ಯಾನಗರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ಗೆ ಮಾರ್ಚ್ 14ರಂದು ಮನವಿ ಸಲ್ಲಿಸಿದ್ದೇವೆ. ಆರೋಪಿ ಸಿಕ್ಕಿಲ್ಲ, ನಿಮಗೆ ಸಿಕ್ಕರೆ ತಿಳಿಸಿ ಎಂದು ನಮಗೇ ಹೇಳಿದ್ದಾರೆ. ಪೊಲೀಸರಿಂದ ಜವಾಬ್ದಾರಿಯುತ ನೆರವು ಸಿಗುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಶಿವನಗೌಡ ಅವರು ತಾಲ್ಲೂಕಿನ ತಡಸಿನಕೊಪ್ಪ ಭಾಗದಲ್ಲಿ ಮೂರನೇ ಹಂತದಲ್ಲಿ ಬಡಾವಣೆ ಅಭಿವೃದ್ಧಿ ನಿವೇಶನ ನೀಡುವುದಾಗಿ ಕಂತುಗಳಲ್ಲಿ ಹಣ ಪಡೆದಿದ್ದಾರೆ. 15 ಮಂದಿ ₹ 1.82 ಕೋಟಿ ಹಣ ಪಡೆದಿದ್ದಾರೆ. ನಂತರ, ನಿವೇಶನ ನೀಡಿಲ್ಲ. ಬಿಲ್ಡರ್ ವಿರುದ್ಧ ಜಿಲ್ಲಾ ಗ್ರಾಹಕರ ಆಯೋಗದಲ್ಲಿ ದೂರು ನೀಡಿದ್ದೇವೆ. ಆಯೋಗ ವಿಚಾರಣೆ ನಡೆಸಿ ಆರೋಪಿ ಬಂಧನಕ್ಕೆ ಆದೇಶ ನೀಡಿದೆ’ ಎಂದರು.</p>.<p>‘ಪೊಲೀಸ್ ಇಲಾಖೆ ಮೇಲಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಬೇಕು. ಜನಪ್ರತಿನಿಧಿಗಳು ನ್ಯಾಯ ದೊರಕಿಸಬೇಕು’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>