

ಜುಬಿಲಿ ವೃತ್ತದ ಕಡೆಗೆ ನುಗ್ಗಲು ಮುಂದಾದ ಪ್ರತಿಭಟನಾಕಾರರತ್ತ ಪೊಲೀಸರು ಲಾಠಿ ಬೀಸಿದರು
-ಚಿತ್ರ: ಬಿ.ಎಂ.ಕೇದಾರನಾಥ
ಒಳ ಮೀಸಲಾತಿ ಕಾರಣದಿಂದ ನೇಮಕಾತಿಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕಾಯಿತು. ಹುದ್ದೆಗಳನ್ನು ತುಂಬುವ ಪ್ರಕ್ರಿಯೆ ನಡೆಯುತ್ತಿದೆ. ಎರಡೂವರೆ ವರ್ಷದಲ್ಲಿ40 ಸಾವಿರಕ್ಕೂ ಹೆಚ್ಚು ನೇಮಕಾತಿ ಮಾಡಲಾಗಿದೆ. ಉಳಿದ ಹುದ್ದೆಗಳನ್ನು ಪಾರದರ್ಶಕವಾಗಿ ಕಾಲಮಿತಿ ಒಳಗೆ ಭರ್ತಿ ಮಾಡಲಾಗುವುದುಸಿದ್ದರಾಮಯ್ಯ, ಮುಖ್ಯಮಂತ್ರಿ
ಬಿಜೆಪಿಯವರು ತಮ್ಮ ಅವಧಿಯಲ್ಲಿ ಹುದ್ದೆಗಳನ್ನು ಯಾಕೆ ಭರ್ತಿ ಮಾಡಲಿಲ್ಲ? ನಿರುದ್ಯೋಗಿ ಯುವಕರಿಗೆ ತೊಂದರೆ ಆಗಬಾರದೆಂದು ಯುವನಿಧಿ ಯೋಜನೆ ನೀಡಿದ್ದೇವೆಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿ
ಉದ್ಯೋಗಾಕಾಂಕ್ಷಿಗಳು ಕೋಚಿಂಗ್ ಪಡೆದು ನೇಮಕಾತಿ ಅಧಿಸೂಚನೆ ನಿರೀಕ್ಷೆಯಲ್ಲಿ ಇದ್ದಾರೆ. ನೇಮಕಾತಿ ಆಗ್ರಹದ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಬೇಕಿದೆ. ನ್ಯಾಯ ಸಿಗುವವರೆಗೂ ಹೋರಾಡಬೇಕುಆರ್.ಅಶೋಕ ವಿರೋಧ ಪಕ್ಷದ ನಾಯಕ ವಿಧಾನಸಭೆ
ಅಧಿಕಾರಕ್ಕೆ ಬಂದರೆ ಮೊದಲವರ್ಷ ಒಂದು ಲಕ್ಷ ಹಾಗೂ ಎರಡು ವರ್ಷದಲ್ಲಿ ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಕಾಂಗ್ರೆಸ್ ಪಕ್ಷ ಭರವಸೆ ನೀಡಿತ್ತು. ಆದರೆ ಅಧಿಕಾರದ ಚುಕ್ಕಾಣಿ ಹಿಡಿದ ನಂತರ ಹುದ್ದೆಗಳ ನೇಮಕಾತಿಗೆ ಕ್ರಮ ವಹಿಸಿಲ್ಲಛಲವಾದಿ ನಾರಾಯಣಸ್ವಾಮಿ ವಿರೋಧ ಪಕ್ಷದ ನಾಯಕ ವಿಧಾನ ಪರಿಷತ್ತು
ಯುವಜನರ ಈ ಹೋರಾಟಕ್ಕೆ ಸಹಮತ ಇದೆ. ಪ್ರಧಾನಿ ಮೋದಿ ಅವರು ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇನೆ ಎಂದಿದ್ದರು. ಕೇಂದ್ರ ಸರ್ಕಾರದ ವಿರುದ್ಧವೂ ಹೋರಾಟ ಮಾಡಬೇಕು. ಎಲ್ಲ ಸರ್ಕಾರಗಳನ್ನೂ ಪ್ರಶ್ನಿಸಬೇಕು.ಸಂತೋಷ್ ಎಸ್.ಲಾಡ್ ಜಿಲ್ಲಾ ಉಸ್ತುವಾರಿ ಸಚಿವ
ಸರ್ಕಾರದಲ್ಲಿ ಖಾಲಿ ಇರುವ 2.94 ಲಕ್ಷ ಹುದ್ದೆಗಳನ್ನು ಭರ್ತಿ ಮಾಡದಿದ್ದರೂ ಸಂಪುಟ ದರ್ಜೆಯ ಹುದ್ದೆಗಳು ಮಾತ್ರ ವೇಗವಾಗಿ ಭರ್ತಿಯಾಗುತ್ತಿವೆ. ಇದು ಕಾಂಗ್ರೆಸ್ ಆಡಳಿತದ ವೈಖರಿಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ
ಯುವ ಜನರು ಎರಡೂವರೆ ವರ್ಷಗಳಿಂದ ಕಣ್ಣೀರು ಹಾಕುತ್ತಿದ್ದಾರೆ. ಉದ್ಯೋಗ ಕೇಳಿದವರ ಮೇಲೆ ಕಳೆದ ಬಾರಿ ಲಾಠಿ ರುಚಿ ತೋರಿಸಿದಿರಿ. ಯುವ ಜನರ ಜೀವನದ ಜತೆ ಚೆಲ್ಲಾಟ ನಿಲ್ಲಿಸಿಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. 50 ಸಾವಿರ ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆ ಅನುಮೋದಿಸಿದೆ. ಅಧಿಸೂಚನೆ ಹೊರಡಿಸದಿದ್ದರೆ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಳ್ಳುತ್ತೇವೆಕಾಂತಕುಮಾರ್, ಅಧ್ಯಕ್ಷ, ಅಕ್ಸಾ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.