ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ | ಆಲಿಕಲ್ಲು ಸಹಿತ ಸುರಿದ ಮಳೆ; ತೆಂಗಿನ ಮರಕ್ಕೆ ಬಡಿದ ಸಿಡಿಲು

Published 18 ಏಪ್ರಿಲ್ 2024, 11:31 IST
Last Updated 18 ಏಪ್ರಿಲ್ 2024, 11:31 IST
ಅಕ್ಷರ ಗಾತ್ರ

ಧಾರವಾಡ: ನಗರದಲ್ಲಿ ಮಧ್ಯಾಹ್ನ ಆಲಿಕಲ್ಲು ಸಹಿತ ಮಳೆ ಸುರಿಯಿತು. ಕಲಘಟಗಿ ತಾಲ್ಲೂಕಿನ ದ್ಯಾವನಕೊಂಡ ಗ್ರಾಮ ಮನೆಯೊಂದರ ಮುಂದಿನ ತೆಂಗಿನ ಮರಕ್ಕೆ ಸಿಡಿಲು ಬಡಿದು ಸುಳಿಗೆ ಬೆಂಕಿ ಹೊತ್ತಿ ಉರಿಯಿತು.

ಧಾರವಾಡ ಸಂಗೊಳ್ಳಿ ರಾಯಣ್ಣ ನಗರದ ಸಹಿತ ವಿವಿಧೆಡೆ ಆಲಿಕಲ್ಲುಗಳು ಉದುರಿದವು. ಸುಮಾರು ಅರ್ಧ ಗಂಟೆ ಮಳೆ ಸುರಿಯಿತು. ಇಳೆಗೆ ತಂಪೆರೆಯಿತು.

ಕಲಘಟಗಿ ಮತ್ತು ಸುತ್ತಲಿನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಕುಂದಗೋಳ ಪಟ್ಟಣ ಹಾಗೂ ತಾಲ್ಲೂಕಿನ ಅಲ್ಲಾಪುರ, ತರ್ಲಘಟ್ಟ, ಕಮಡೊಳ್ಳಿ, ಯರಿನಾರಾಯಣಪುರ, ಚಾಕಲಬ್ಬಿ, ಶಿರೂರು, ದೇವನೂರು, ಗ್ರಾಮಗಳಲ್ಲಿ ಸಾಧಾರಣ ಮಳೆಯಾಯಿತು. ಚಿಕ್ಕನರ್ತಿ, ಹಿರೇನರ್ತಿ, ಯರಗುಪ್ಪಿ, ಗುಡೇಣಕಟ್ಟಿ ಭಾಗದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT