<p><strong>ಧಾರವಾಡ</strong>: ‘ಶಿಸ್ತು, ಸಂಯಮ ಮತ್ತು ರಾಷ್ಟ್ರಪ್ರೇಮವುಳ್ಳ ವ್ಯಕ್ತಿಗಳಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯವಿದೆ’ ಆರ್ಎಸ್ಎಸ್ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ ಹೇಳಿದರು.</p>.<p>ಇಲ್ಲಿನ ರಾಮನಗರದ ಆದರ್ಶ ಬಾಲಿಕಾ ಪ್ರೌಢಶಾಲೆ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಆರ್ಎಸ್ಎಸ್ನ ಶಿವಕೃಪಾ ನೂತನ ಕಾರ್ಯಾಲಯ ಲೋಕಾರ್ಪಣೆಯ ಕಾರ್ಯಕ್ರಮದ ಅವರು ಮಾತನಾಡಿದರು.</p>.<p>‘ರಾಷ್ಟ್ರ ಭಕ್ತಿ ಬೆಳೆಸಿಕೊಳ್ಳಿ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಸೇವೆಗೆ ಸಿದ್ಧನಿರಬೇಕು. ಸಂಘಟನಾ ಶಕ್ತಿ ಹೆಚ್ಚಿಸಬೇಕು. ಸಂಘಟಿತ ಸಮಾಜ ರಾಷ್ಟ್ರದ ಆಸ್ತಿ. ಪ್ರತಿಯೊಬ್ಬರೂ ತಮ್ಮ ಪಾಲಿನ ಕರ್ತವ್ಯಗಳನ್ನು ನಿರ್ವಹಿಸಬೇಕು. ಸಾಮಾಜಿಕ ಪರಿವರ್ತನೆಗಾಗಿ ಕೆಲಸ ಮಾಡುವವರಿಗೆ ಶಿವಕೃಪಾ ಕಾರ್ಯಾಲಯ ಶಕ್ತಿಕೇಂದ್ರವಾಗಲಿ’ ಎಂದು ಆಶಿಸಿದರು.</p>.<p>ಅಮ್ಮಿನಭಾವಿ ಪಂಚಗೃಹ ಹಿರೇಮಠದ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಸಂಚಾಲಕ ವೇದವ್ಯಾಸ ದೇಶಪಾಂಡೆ, ಉತ್ತರ ಪ್ರಾಂತ ಪ್ರಚಾರಕ ಬಸವರಾಜ ಡಂಬಳ, ಟ್ರಸ್ಟ್ ಅಧ್ಯಕ್ಷ ಅಮರ ಟಿಕಾರೆ, ವೆಂಕಟೇಶ ಕರಿಕಲ್ಲ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-24-1190858545</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ಶಿಸ್ತು, ಸಂಯಮ ಮತ್ತು ರಾಷ್ಟ್ರಪ್ರೇಮವುಳ್ಳ ವ್ಯಕ್ತಿಗಳಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯವಿದೆ’ ಆರ್ಎಸ್ಎಸ್ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ ಹೇಳಿದರು.</p>.<p>ಇಲ್ಲಿನ ರಾಮನಗರದ ಆದರ್ಶ ಬಾಲಿಕಾ ಪ್ರೌಢಶಾಲೆ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಆರ್ಎಸ್ಎಸ್ನ ಶಿವಕೃಪಾ ನೂತನ ಕಾರ್ಯಾಲಯ ಲೋಕಾರ್ಪಣೆಯ ಕಾರ್ಯಕ್ರಮದ ಅವರು ಮಾತನಾಡಿದರು.</p>.<p>‘ರಾಷ್ಟ್ರ ಭಕ್ತಿ ಬೆಳೆಸಿಕೊಳ್ಳಿ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಸೇವೆಗೆ ಸಿದ್ಧನಿರಬೇಕು. ಸಂಘಟನಾ ಶಕ್ತಿ ಹೆಚ್ಚಿಸಬೇಕು. ಸಂಘಟಿತ ಸಮಾಜ ರಾಷ್ಟ್ರದ ಆಸ್ತಿ. ಪ್ರತಿಯೊಬ್ಬರೂ ತಮ್ಮ ಪಾಲಿನ ಕರ್ತವ್ಯಗಳನ್ನು ನಿರ್ವಹಿಸಬೇಕು. ಸಾಮಾಜಿಕ ಪರಿವರ್ತನೆಗಾಗಿ ಕೆಲಸ ಮಾಡುವವರಿಗೆ ಶಿವಕೃಪಾ ಕಾರ್ಯಾಲಯ ಶಕ್ತಿಕೇಂದ್ರವಾಗಲಿ’ ಎಂದು ಆಶಿಸಿದರು.</p>.<p>ಅಮ್ಮಿನಭಾವಿ ಪಂಚಗೃಹ ಹಿರೇಮಠದ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಸಂಚಾಲಕ ವೇದವ್ಯಾಸ ದೇಶಪಾಂಡೆ, ಉತ್ತರ ಪ್ರಾಂತ ಪ್ರಚಾರಕ ಬಸವರಾಜ ಡಂಬಳ, ಟ್ರಸ್ಟ್ ಅಧ್ಯಕ್ಷ ಅಮರ ಟಿಕಾರೆ, ವೆಂಕಟೇಶ ಕರಿಕಲ್ಲ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-24-1190858545</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>