<p><strong>ಧಾರವಾಡ:</strong> ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಮಾಡಲೇಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಮಂಗಳವಾರ ಕಲ್ಯಾಣನಗರದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಮೇಯರ್ ಜ್ಯೋತಿ ಪಾಟೀಲ ಅವರ ಮನೆ ಮುಂದೆ ಸಮಾವೇಶಗೊಂಡ ಪ್ರತಿಭಟನಕಾರರು, ‘ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಬೇಕೇ ಬೇಕು’ ಘೋಷಣೆ ಕೂಗಿದರು. ‘ಧಾರವಾಡಕ್ಕೆ ಮಲತಾಯಿ ಧೋರಣೆ ಖಂಡಿಸಿ ಪ್ರತಿಭಟನೆ’ ಮೊದಲಾದ ಭಿತ್ತಿಫಲಕಗಳನ್ನು ಪ್ರದರ್ಶಿಸಿದರು.</p>.<p>‘ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆಗೆ ಆಗ್ರಹಿಸಿ ಈ ಹಿಂದೆ ನಡೆದ ಹೋರಾಟಗಳಲ್ಲಿ ಮೇಯರ್ ಜ್ಯೋತಿ ಪಾಟೀಲ ಅವರು ಪಾಲ್ಗೊಂಡಿದ್ದರು. ಆದರೆ, ಈಗ ವ್ಯತಿರಿಕ್ತ ನಿಲುವು ವ್ಯಕ್ತಪಡಿಸಿದ್ದಾರೆ’ ಎಂದು ಪ್ರತಿಭಟನಾಕಾರರು ದೂರಿದರು.</p>.<p>ಪ್ರತಿಭಟನಾಕಾರರು ಮೇಯರ್ ಜ್ಯೋತಿ ಪಾಟೀಲ ಅವರನ್ನು ಭೇಟಿಯಾಗಿ, ಬೇಡಿಕೆಗೆ ಸ್ಪಂದಿಸಬೇಕು ಎಂದು ಕೋರಿದರು.</p>.<p>ಕಾಂಗ್ರೆಸ್ ಮುಖಂಡ ದೀಪಕ್ ಚಿಂಚೊರೆ, ಕವಿತಾ ಕಬ್ಬೇರ, ರವಿ ಮಾಳಿಗೇರ, ಶಂಭು ಸಾಲಮನಿ, ಮೆಹಬೂಬ್ ಪಠಾಣ್, ವೀರಣ್ಣ ಪ್ರತಿಭಟನೆಯಲ್ಲಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-24-43501671</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಮಾಡಲೇಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಮಂಗಳವಾರ ಕಲ್ಯಾಣನಗರದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಮೇಯರ್ ಜ್ಯೋತಿ ಪಾಟೀಲ ಅವರ ಮನೆ ಮುಂದೆ ಸಮಾವೇಶಗೊಂಡ ಪ್ರತಿಭಟನಕಾರರು, ‘ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಬೇಕೇ ಬೇಕು’ ಘೋಷಣೆ ಕೂಗಿದರು. ‘ಧಾರವಾಡಕ್ಕೆ ಮಲತಾಯಿ ಧೋರಣೆ ಖಂಡಿಸಿ ಪ್ರತಿಭಟನೆ’ ಮೊದಲಾದ ಭಿತ್ತಿಫಲಕಗಳನ್ನು ಪ್ರದರ್ಶಿಸಿದರು.</p>.<p>‘ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆಗೆ ಆಗ್ರಹಿಸಿ ಈ ಹಿಂದೆ ನಡೆದ ಹೋರಾಟಗಳಲ್ಲಿ ಮೇಯರ್ ಜ್ಯೋತಿ ಪಾಟೀಲ ಅವರು ಪಾಲ್ಗೊಂಡಿದ್ದರು. ಆದರೆ, ಈಗ ವ್ಯತಿರಿಕ್ತ ನಿಲುವು ವ್ಯಕ್ತಪಡಿಸಿದ್ದಾರೆ’ ಎಂದು ಪ್ರತಿಭಟನಾಕಾರರು ದೂರಿದರು.</p>.<p>ಪ್ರತಿಭಟನಾಕಾರರು ಮೇಯರ್ ಜ್ಯೋತಿ ಪಾಟೀಲ ಅವರನ್ನು ಭೇಟಿಯಾಗಿ, ಬೇಡಿಕೆಗೆ ಸ್ಪಂದಿಸಬೇಕು ಎಂದು ಕೋರಿದರು.</p>.<p>ಕಾಂಗ್ರೆಸ್ ಮುಖಂಡ ದೀಪಕ್ ಚಿಂಚೊರೆ, ಕವಿತಾ ಕಬ್ಬೇರ, ರವಿ ಮಾಳಿಗೇರ, ಶಂಭು ಸಾಲಮನಿ, ಮೆಹಬೂಬ್ ಪಠಾಣ್, ವೀರಣ್ಣ ಪ್ರತಿಭಟನೆಯಲ್ಲಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-24-43501671</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>