<p>ಧಾರವಾಡ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಪ್ರಸ್ತಾವಕ್ಕೆ ರಾಜ್ಯಪಾಲರು ಅನುಮೋದನೆ ನೀಡಬೇಕು ಎಂದು ಆಗ್ರಹಿಸಿ ಹೋರಾಟಗಾರರು ಶನಿವಾರ ಪಾಲಿಕೆ ಕಚೇರಿ ಆವರಣದಲ್ಲಿನ ‘ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಆವರಣ’ ಫಲಕದ ‘ಹುಬ್ಬಳ್ಳಿ’ ಪದದ ಮೇಲೆ ಕಾಗದ ಅಂಟಿಸಿ ಪ್ರತಿಭಟಿಸಿದರು.</p>.<p>ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ವೇದಿಕೆಯವರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಶನಿವಾರ ಒಂಬತ್ತನೇ ದಿನ ಪೂರೈಸಿದೆ. ಫಲಕದ ‘ಹುಬ್ಬಳ್ಳಿ’ ಪದಕ್ಕೆ ಕಾಗದ ಅಂಟಿಸಿ ‘ಎಚ್ಡಿಎಂಸಿ ಸಾಕು, ಡಿಎಂಸಿ ಬೇಕು’ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು.</p>.<p>‘ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟವು ಜನಾಂದೋಲನವಾಗಿ ರೂಪುಗೊಳ್ಳುತ್ತಿದೆ. ರಾಜ್ಯಪಾಲರು ಕೂಡಲೇ ಪ್ರಸ್ತಾವಕ್ಕೆ ಅನುಮೋದನೆ ನೀಡಬೇಕು. ಇಲ್ಲದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು’ ಎಂದು ಹಿರಿಯ ವಕೀಲ ಬಿ.ಡಿ.ಹಿರೇಮಠ ಎಚ್ಚರಿಸಿದರು.</p>.<p>ಬೆಳಿಗ್ಗೆಯಿಂದ ಸಂಜೆವರೆಗೆ ಉಪವಾಸ: ಬೆಳಿಗ್ಗೆಯಿಂದ ಸಂಜೆಯವರೆಗೆ ಪ್ರತಿಭಟನೆಯಲ್ಲಿ ಶಿವಶಂಕರ ಹಪ್ಪಣ್ಣವರ, ಕಿಶೋರ ಬಡಿಗೇರ, ಶಂಕರ ನೀರಾವರಿ, ಆಸ್ಮಾ ಸೈಯದ್, ಭಾಷಾ ಸಾಬ್ ಉಪವಾಸ ಮಾಡಿದರು.</p>.<p>ಮರಾಠ ಸಮಾಜದ ಮುಖಂಡ ರಾಜು ಬಿರಜನವರ, ಪ್ರಕಾಶ ಘಾಟಗೆ, ರಾಜಶೇಖರ ಕಮತಿ, ಸಂಭಾಜಿರಾವ್ ಗೋಡಸೆ, ವಿನಯ ಬಾಬರ, ನವೀನ ಕದಂ, ಮಹೇಶ ಘಾಟಗೆ, ಅರವಿಂದ ಏಗನಗೌಡರ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-24-206785676</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಪ್ರಸ್ತಾವಕ್ಕೆ ರಾಜ್ಯಪಾಲರು ಅನುಮೋದನೆ ನೀಡಬೇಕು ಎಂದು ಆಗ್ರಹಿಸಿ ಹೋರಾಟಗಾರರು ಶನಿವಾರ ಪಾಲಿಕೆ ಕಚೇರಿ ಆವರಣದಲ್ಲಿನ ‘ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಆವರಣ’ ಫಲಕದ ‘ಹುಬ್ಬಳ್ಳಿ’ ಪದದ ಮೇಲೆ ಕಾಗದ ಅಂಟಿಸಿ ಪ್ರತಿಭಟಿಸಿದರು.</p>.<p>ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ವೇದಿಕೆಯವರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಶನಿವಾರ ಒಂಬತ್ತನೇ ದಿನ ಪೂರೈಸಿದೆ. ಫಲಕದ ‘ಹುಬ್ಬಳ್ಳಿ’ ಪದಕ್ಕೆ ಕಾಗದ ಅಂಟಿಸಿ ‘ಎಚ್ಡಿಎಂಸಿ ಸಾಕು, ಡಿಎಂಸಿ ಬೇಕು’ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು.</p>.<p>‘ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟವು ಜನಾಂದೋಲನವಾಗಿ ರೂಪುಗೊಳ್ಳುತ್ತಿದೆ. ರಾಜ್ಯಪಾಲರು ಕೂಡಲೇ ಪ್ರಸ್ತಾವಕ್ಕೆ ಅನುಮೋದನೆ ನೀಡಬೇಕು. ಇಲ್ಲದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು’ ಎಂದು ಹಿರಿಯ ವಕೀಲ ಬಿ.ಡಿ.ಹಿರೇಮಠ ಎಚ್ಚರಿಸಿದರು.</p>.<p>ಬೆಳಿಗ್ಗೆಯಿಂದ ಸಂಜೆವರೆಗೆ ಉಪವಾಸ: ಬೆಳಿಗ್ಗೆಯಿಂದ ಸಂಜೆಯವರೆಗೆ ಪ್ರತಿಭಟನೆಯಲ್ಲಿ ಶಿವಶಂಕರ ಹಪ್ಪಣ್ಣವರ, ಕಿಶೋರ ಬಡಿಗೇರ, ಶಂಕರ ನೀರಾವರಿ, ಆಸ್ಮಾ ಸೈಯದ್, ಭಾಷಾ ಸಾಬ್ ಉಪವಾಸ ಮಾಡಿದರು.</p>.<p>ಮರಾಠ ಸಮಾಜದ ಮುಖಂಡ ರಾಜು ಬಿರಜನವರ, ಪ್ರಕಾಶ ಘಾಟಗೆ, ರಾಜಶೇಖರ ಕಮತಿ, ಸಂಭಾಜಿರಾವ್ ಗೋಡಸೆ, ವಿನಯ ಬಾಬರ, ನವೀನ ಕದಂ, ಮಹೇಶ ಘಾಟಗೆ, ಅರವಿಂದ ಏಗನಗೌಡರ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-24-206785676</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>