<p><strong>ಧಾರವಾಡ</strong>: ಲಾರಿ– ಟ್ರ್ಯಾಕ್ಟರ್ ನಡುವಿನ ಅಪಘಾತದಲ್ಲಿ ವ್ಯಕ್ತಿಯ ಕಾರಣರಾಗಿದ್ದ ಲಾರಿ ಚಾಲಕ ಪರಮೇಶ್ವರ ಹೊರಕೇರಿ ಎಂಬುವರಿಗೆ ಇಲ್ಲಿನ 2ನೇ ಹೆಚ್ಚುವರಿ ಜೆ.ಎಂ.ಎಫ್.ಸಿ ನ್ಯಾಯಾಲಯವು ಶಿಕ್ಷೆ ವಿಧಿಸಿ ಆದೇಶಿಸಿದೆ.</p>.<p>ನ್ಯಾಯಾಧೀಶ ಮೋಹಿತ್ ಬಿ.ಎಂ. ಅವರು ಪ್ರಕರಣದ ವಿಚಾರಣೆ ನಡೆಸಿ ಒಂದು ವರ್ಷ ಸಾದಾ ಜೈಲು ಶಿಕ್ಷೆ ಹಾಗೂ ₹1 ಸಾವಿರ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಅಭಿಯೋಜಕ ಅಕ್ಷಯ ವಾಲಿ ಅವರು ವಾದ ಮಂಡಿಸಿದ್ದರು.</p>.<p>ಏನಿದು ಪ್ರಕರಣ?: 2015 ಏಪ್ರಿಲ್ 3 ರಂದು ಧಾರವಾಡ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪರಮೇಶ್ವರ ಹೊರಕೇರಿ ಹುಬ್ಬಳ್ಳಿ ಕಡೆಯಿಂದ ಲಾರಿಯನ್ನು ಅತಿ ವೇಗವಾಗಿ ಚಾಲನೆ ಮಾಡಿಕೊಂಡು ಬಂದು ಟ್ರ್ಯಾಕ್ಟರ್ಗೆ ಗುದ್ದಿಸಿದ್ದ. ಈ ವೇಳೆ ಟ್ರ್ಯಾಕ್ಟರ್ನಲ್ಲಿದ್ದ ಬಸವರಾಜ ತಿಪ್ಪಣ್ಣ ಕಟಗಿ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದರು. ಟ್ರ್ಯಾಕ್ಟರ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-24-1433013714</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಲಾರಿ– ಟ್ರ್ಯಾಕ್ಟರ್ ನಡುವಿನ ಅಪಘಾತದಲ್ಲಿ ವ್ಯಕ್ತಿಯ ಕಾರಣರಾಗಿದ್ದ ಲಾರಿ ಚಾಲಕ ಪರಮೇಶ್ವರ ಹೊರಕೇರಿ ಎಂಬುವರಿಗೆ ಇಲ್ಲಿನ 2ನೇ ಹೆಚ್ಚುವರಿ ಜೆ.ಎಂ.ಎಫ್.ಸಿ ನ್ಯಾಯಾಲಯವು ಶಿಕ್ಷೆ ವಿಧಿಸಿ ಆದೇಶಿಸಿದೆ.</p>.<p>ನ್ಯಾಯಾಧೀಶ ಮೋಹಿತ್ ಬಿ.ಎಂ. ಅವರು ಪ್ರಕರಣದ ವಿಚಾರಣೆ ನಡೆಸಿ ಒಂದು ವರ್ಷ ಸಾದಾ ಜೈಲು ಶಿಕ್ಷೆ ಹಾಗೂ ₹1 ಸಾವಿರ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಅಭಿಯೋಜಕ ಅಕ್ಷಯ ವಾಲಿ ಅವರು ವಾದ ಮಂಡಿಸಿದ್ದರು.</p>.<p>ಏನಿದು ಪ್ರಕರಣ?: 2015 ಏಪ್ರಿಲ್ 3 ರಂದು ಧಾರವಾಡ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪರಮೇಶ್ವರ ಹೊರಕೇರಿ ಹುಬ್ಬಳ್ಳಿ ಕಡೆಯಿಂದ ಲಾರಿಯನ್ನು ಅತಿ ವೇಗವಾಗಿ ಚಾಲನೆ ಮಾಡಿಕೊಂಡು ಬಂದು ಟ್ರ್ಯಾಕ್ಟರ್ಗೆ ಗುದ್ದಿಸಿದ್ದ. ಈ ವೇಳೆ ಟ್ರ್ಯಾಕ್ಟರ್ನಲ್ಲಿದ್ದ ಬಸವರಾಜ ತಿಪ್ಪಣ್ಣ ಕಟಗಿ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದರು. ಟ್ರ್ಯಾಕ್ಟರ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-24-1433013714</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>