<p><strong>ಧಾರವಾಡ</strong>: 'ಜಗತ್ತಿನ ಸಮಸ್ಯೆಗಳಿಗೆ ವಚನಗಳಲ್ಲಿ ಪರಿಹಾರವಿದೆ. ವಚನ ಸಾಹಿತ್ಯವು ಕೇವಲ ಒಂದು ಧರ್ಮಕ್ಕೆ ಸೀಮತವಾಗಿರದೆ, ಅವುಗಳು ಮಾನವ ಕುಲದ ಬದುಕಿಗೆ ದಿಕ್ಸೂಚಿಯಾಗಿವೆ' ಎಂದು ಮುಂಡರಗಿ ಸಂಸ್ಥಾನ ಮಠದ ಅನ್ನದಾನೇಶ್ವರ ಸ್ವಾಮೀಜಿ ಹೇಳಿದರು.</p>.<p>ನಗರದ ಮುರುಘಾಮಠದಲ್ಲಿ ಶ್ರೀಮದಥಣಿ ಮುರಘೇಂದ್ರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರದಿಂದ ಪ್ರಾರಂಭವಾದ 'ವಚನ ದರ್ಶನ ಪ್ರವಚನ'ಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಜನರಲ್ಲಿ ಆಧ್ಯಾತ್ಮಿಕ ಚಿಂತನೆ ಕಡಿಮೆ ಆಗುತ್ತಿದೆ. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ಜನರಲ್ಲಿ ಆಧ್ಯಾತ್ಮಿಕ ಚಿಂತನೆ ಹೆಚ್ಚಿಸುವ ಕೆಲಸ ಮಾಡಬೇಕು ಎಂದರು.</p>.<p>ಅವರಾದಿ ಫಲಹಾರೇಶ್ವರ ಮಠದ ಶಿವಮೂರ್ತಿ ಸ್ವಾಮೀಜಿ ಮಾತನಾಡಿ, ವಚನ ದರ್ಶನದ ಪ್ರವಚನದ ಮೂಲಕ ಶರಣರ ತತ್ವಗಳು ಇಂದಿನ ಆಧುನಿಕ ಬದುಕಿಗೆ ಪ್ರಸ್ತುತವಾಗಿವೆ. ಇದನ್ನು ಹೊಸ ತಲೆಮಾರಿಗೂ ಪರಿಚಯಿಸಬೇಕು ಎಂದರು.</p>.<p>ಗರಗ ಮಡಿವಾಳೇಶ್ವರ ಮಠದ ಆತ್ಮಾರಾಮ ಸ್ವಾಮೀಜಿ ಶಿರಸಂಗಿ ಬಸವಮಹಾಂತ ಸ್ವಾಮೀಜಿ, ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಮಾಜಿ ಶಾಸಕಿ ಸೀಮಾ ಮಸೂತಿ, ಮಠದ ಆಡಳಿತ ಮಂಡಳಿ ಪದಾಧಿಕಾರಿಗಳಾದ ನಾಗರಾಜ ಪಟ್ಟಣಶೆಟ್ಟಿ, ಡಿ.ಬಿ.ಲಕ್ಹಮನಹಳ್ಳಿ, ವಿ.ಎಂ.ಕಟಗಿ, ಶಿವಾಜಿ ಕಾಲೇಜಿನ ಪ್ರಾಚಾರ್ಯ ಎಂ.ಎಸ್.ಗಾಣಿಗೇರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: 'ಜಗತ್ತಿನ ಸಮಸ್ಯೆಗಳಿಗೆ ವಚನಗಳಲ್ಲಿ ಪರಿಹಾರವಿದೆ. ವಚನ ಸಾಹಿತ್ಯವು ಕೇವಲ ಒಂದು ಧರ್ಮಕ್ಕೆ ಸೀಮತವಾಗಿರದೆ, ಅವುಗಳು ಮಾನವ ಕುಲದ ಬದುಕಿಗೆ ದಿಕ್ಸೂಚಿಯಾಗಿವೆ' ಎಂದು ಮುಂಡರಗಿ ಸಂಸ್ಥಾನ ಮಠದ ಅನ್ನದಾನೇಶ್ವರ ಸ್ವಾಮೀಜಿ ಹೇಳಿದರು.</p>.<p>ನಗರದ ಮುರುಘಾಮಠದಲ್ಲಿ ಶ್ರೀಮದಥಣಿ ಮುರಘೇಂದ್ರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರದಿಂದ ಪ್ರಾರಂಭವಾದ 'ವಚನ ದರ್ಶನ ಪ್ರವಚನ'ಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಜನರಲ್ಲಿ ಆಧ್ಯಾತ್ಮಿಕ ಚಿಂತನೆ ಕಡಿಮೆ ಆಗುತ್ತಿದೆ. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ಜನರಲ್ಲಿ ಆಧ್ಯಾತ್ಮಿಕ ಚಿಂತನೆ ಹೆಚ್ಚಿಸುವ ಕೆಲಸ ಮಾಡಬೇಕು ಎಂದರು.</p>.<p>ಅವರಾದಿ ಫಲಹಾರೇಶ್ವರ ಮಠದ ಶಿವಮೂರ್ತಿ ಸ್ವಾಮೀಜಿ ಮಾತನಾಡಿ, ವಚನ ದರ್ಶನದ ಪ್ರವಚನದ ಮೂಲಕ ಶರಣರ ತತ್ವಗಳು ಇಂದಿನ ಆಧುನಿಕ ಬದುಕಿಗೆ ಪ್ರಸ್ತುತವಾಗಿವೆ. ಇದನ್ನು ಹೊಸ ತಲೆಮಾರಿಗೂ ಪರಿಚಯಿಸಬೇಕು ಎಂದರು.</p>.<p>ಗರಗ ಮಡಿವಾಳೇಶ್ವರ ಮಠದ ಆತ್ಮಾರಾಮ ಸ್ವಾಮೀಜಿ ಶಿರಸಂಗಿ ಬಸವಮಹಾಂತ ಸ್ವಾಮೀಜಿ, ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಮಾಜಿ ಶಾಸಕಿ ಸೀಮಾ ಮಸೂತಿ, ಮಠದ ಆಡಳಿತ ಮಂಡಳಿ ಪದಾಧಿಕಾರಿಗಳಾದ ನಾಗರಾಜ ಪಟ್ಟಣಶೆಟ್ಟಿ, ಡಿ.ಬಿ.ಲಕ್ಹಮನಹಳ್ಳಿ, ವಿ.ಎಂ.ಕಟಗಿ, ಶಿವಾಜಿ ಕಾಲೇಜಿನ ಪ್ರಾಚಾರ್ಯ ಎಂ.ಎಸ್.ಗಾಣಿಗೇರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>