<p><strong>ಧಾರವಾಡ</strong>: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಮೇ 11ರಂದು ಮತದಾನ ನಡೆಯಲಿದೆ.</p>.<p>ಧಾರವಾಡ ತಾಲ್ಲೂಕಿನ ಉಪ್ಪಿನಬೆಟಗೇರಿ, ಶಿವಳ್ಳಿ, ಹುಬ್ಬಳ್ಳಿ ತಾಲ್ಲೂಕಿನ ಹಳ್ಯಾಳ, ಕಲಘಟಗಿ ತಾಲ್ಲೂಕಿನ ಕುರುವಿನಕೊಪ್ಪ, ಸೂರಶೆಟ್ಟಿಕೊಪ್ಪ, ನವಲಗುಂದ ತಾಲ್ಲೂಕಿನ ಶಿರಕೋಳ, ಯಮನೂರ ಹಾಗೂ ಕುಂದಗೋಳ ತಾಲ್ಲೂಕಿನ ಹಿರೇಹರಕುಣಿ ಸಹಿತ ಎಂಟು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.</p>.<p>ನಾಮಪತ್ರ ಸಲ್ಲಿಸಲು ಏ.28ರ ಕೊನೆ ದಿನವಾಗಿದೆ. ನಾಮಪತ್ರಗಳ ಪರಿಶೀಲನೆ 29ರಂದು ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಮೇ 2 ಕಡೆ ದಿನ.</p>.<p>ಮೇ 11 ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅವಶ್ಯವಿದ್ದರೆ, ಮೇ 13ರಂದು ನಡೆಸಲಾಗುವುದು. ಮೇ 14 ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಮತಗಳ ಎಣಿಕೆ ನಡೆಯಲಿದೆ.</p>.<p>ಉಪಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಏ. 22ರಿಂದ ಮೇ 14 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ದಿವ್ಯಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಮೇ 11ರಂದು ಮತದಾನ ನಡೆಯಲಿದೆ.</p>.<p>ಧಾರವಾಡ ತಾಲ್ಲೂಕಿನ ಉಪ್ಪಿನಬೆಟಗೇರಿ, ಶಿವಳ್ಳಿ, ಹುಬ್ಬಳ್ಳಿ ತಾಲ್ಲೂಕಿನ ಹಳ್ಯಾಳ, ಕಲಘಟಗಿ ತಾಲ್ಲೂಕಿನ ಕುರುವಿನಕೊಪ್ಪ, ಸೂರಶೆಟ್ಟಿಕೊಪ್ಪ, ನವಲಗುಂದ ತಾಲ್ಲೂಕಿನ ಶಿರಕೋಳ, ಯಮನೂರ ಹಾಗೂ ಕುಂದಗೋಳ ತಾಲ್ಲೂಕಿನ ಹಿರೇಹರಕುಣಿ ಸಹಿತ ಎಂಟು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.</p>.<p>ನಾಮಪತ್ರ ಸಲ್ಲಿಸಲು ಏ.28ರ ಕೊನೆ ದಿನವಾಗಿದೆ. ನಾಮಪತ್ರಗಳ ಪರಿಶೀಲನೆ 29ರಂದು ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಮೇ 2 ಕಡೆ ದಿನ.</p>.<p>ಮೇ 11 ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅವಶ್ಯವಿದ್ದರೆ, ಮೇ 13ರಂದು ನಡೆಸಲಾಗುವುದು. ಮೇ 14 ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಮತಗಳ ಎಣಿಕೆ ನಡೆಯಲಿದೆ.</p>.<p>ಉಪಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಏ. 22ರಿಂದ ಮೇ 14 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ದಿವ್ಯಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>