<p><strong>ಧಾರವಾಡ</strong>: ‘ವಿಶ್ವ ಹಿಂದೂ ಪರಿಷತ್(ವಿಎಚ್ಪಿ) ವತಿಯಿಂದ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ100 ಸಮಿತಿಗಳನ್ನು ರಚಿಸಲಾಗಿದೆ. ಸದಸ್ಯರ ಕಾರ್ಯಾಗಾರ ಆಯೋಜಿಸಲಾ ಗಿದೆ’ ಎಂದು ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಮಿಲಿಂದ್ ಪರಾಂಡೆ ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಅವರು, ‘ವಿಶ್ವ ಹಿಂದೂ ಪರಿಷತ್ ವತಿಯಿಂದ ರಕ್ತದಾನ ಶಿಬಿರ, ಸ್ವಉದ್ಯೋಗ ತರಬೇತಿ ಮೊದಲಾದವನ್ನು ಆಯೋಜಿಸಲಾಗುತ್ತಿದೆ. ವಿವಿಧ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ’ ಎಂದರು.</p>.<p>‘ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಲೈಂಗಿಕ ಶೋಷಣೆ ಪ್ರಕರಣಗಳು ಆತಂಕಕಾರಿಯಾಗಿವೆ. ಗುರಿಪಡಿಸಿದ ಶೋಷಣೆ, ಬಲವಂತದ ಮತಾಂತರ, ದುರ್ಬಲ ವರ್ಗಗಳನ್ನು ತಪ್ಪು ದಾರಿಗೆಳೆಯುವ ಸಂಘಟಿತ ಪ್ರಯತ್ನಗಳು ಮೊದಲಾದವು ಅಶಾಂತಿ ಉಂಟು ಮಾಡುತ್ತವೆ. ಇಂಥ ಚಟುವಟಿಕೆಗಳವಿರುದ್ಧ ಸಮಾಜ ಎಚ್ಚರಿಕೆಯಿಂದಇರಬೇಕು’ ಎಂದು ಹೇಳಿದರು.</p>.<p>‘ಲವ್ ಜಿಹಾದ್’ ಪ್ರಕರಣಗಳು ಆತಂಕಕಾರಿ. ಇಂಥ ಘಟನೆಗಳು ನಡೆದಾಗ ಪೊಲೀಸರು ಎಫ್ಐಆರ್ ದಾಖಲಿಸಲು ವಿಳಂಬ ಮಾಡಬಾರದು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆ ನಡೆಸಬೇಕು. ಗೋರಕ್ಷಾ ಕಾನೂನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು’ ಎಂದು ತಿಳಿಸಿದರು.</p>.<p>‘ದೇಶದಲ್ಲಿ ಮಾದಕ ಪದಾರ್ಥಗಳಿಗೆ ಕಡಿವಾಣ ಹಾಕಬೇಕಿದೆ. ಶಾಲೆ, ಕಾಲೇಜು ವಿದ್ಯಾರ್ಥಿಗಳು ಮಾದಕ ಪದಾರ್ಥಗಳಗೀಳು ಬೆಳೆಸಿಕೊಂಡಿದ್ದಾರೆ. ‘ನಶಾ ಮುಕ್ತಭಾರತ’ ನಿರ್ಮಾಣ ಮಾಡುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಪೊಲೀಸರು ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳುವ ಅಗತ್ಯ ಇದೆ. ವಿಶ್ವ ಹಿಂದೂ ಪರಿಷತ್ ವತಿಯಿಂದಲೂ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜನೆ ಮಾಡುತ್ತಿದ್ದೇವೆ’ ಎಂದರು.</p>.<p>ಲಿಂಗರಾಜ ಅಪ್ಪ, ಶಿವಕುಮಾರ ಬೋಳಶೆಟ್ಟಿ, ಮಹೇಶ ಪಾಟೀಲ, ಎಸ್.ಆರ್.ರಾಮನಗೌಡರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-24-2113367442</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ವಿಶ್ವ ಹಿಂದೂ ಪರಿಷತ್(ವಿಎಚ್ಪಿ) ವತಿಯಿಂದ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ100 ಸಮಿತಿಗಳನ್ನು ರಚಿಸಲಾಗಿದೆ. ಸದಸ್ಯರ ಕಾರ್ಯಾಗಾರ ಆಯೋಜಿಸಲಾ ಗಿದೆ’ ಎಂದು ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಮಿಲಿಂದ್ ಪರಾಂಡೆ ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಅವರು, ‘ವಿಶ್ವ ಹಿಂದೂ ಪರಿಷತ್ ವತಿಯಿಂದ ರಕ್ತದಾನ ಶಿಬಿರ, ಸ್ವಉದ್ಯೋಗ ತರಬೇತಿ ಮೊದಲಾದವನ್ನು ಆಯೋಜಿಸಲಾಗುತ್ತಿದೆ. ವಿವಿಧ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ’ ಎಂದರು.</p>.<p>‘ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಲೈಂಗಿಕ ಶೋಷಣೆ ಪ್ರಕರಣಗಳು ಆತಂಕಕಾರಿಯಾಗಿವೆ. ಗುರಿಪಡಿಸಿದ ಶೋಷಣೆ, ಬಲವಂತದ ಮತಾಂತರ, ದುರ್ಬಲ ವರ್ಗಗಳನ್ನು ತಪ್ಪು ದಾರಿಗೆಳೆಯುವ ಸಂಘಟಿತ ಪ್ರಯತ್ನಗಳು ಮೊದಲಾದವು ಅಶಾಂತಿ ಉಂಟು ಮಾಡುತ್ತವೆ. ಇಂಥ ಚಟುವಟಿಕೆಗಳವಿರುದ್ಧ ಸಮಾಜ ಎಚ್ಚರಿಕೆಯಿಂದಇರಬೇಕು’ ಎಂದು ಹೇಳಿದರು.</p>.<p>‘ಲವ್ ಜಿಹಾದ್’ ಪ್ರಕರಣಗಳು ಆತಂಕಕಾರಿ. ಇಂಥ ಘಟನೆಗಳು ನಡೆದಾಗ ಪೊಲೀಸರು ಎಫ್ಐಆರ್ ದಾಖಲಿಸಲು ವಿಳಂಬ ಮಾಡಬಾರದು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆ ನಡೆಸಬೇಕು. ಗೋರಕ್ಷಾ ಕಾನೂನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು’ ಎಂದು ತಿಳಿಸಿದರು.</p>.<p>‘ದೇಶದಲ್ಲಿ ಮಾದಕ ಪದಾರ್ಥಗಳಿಗೆ ಕಡಿವಾಣ ಹಾಕಬೇಕಿದೆ. ಶಾಲೆ, ಕಾಲೇಜು ವಿದ್ಯಾರ್ಥಿಗಳು ಮಾದಕ ಪದಾರ್ಥಗಳಗೀಳು ಬೆಳೆಸಿಕೊಂಡಿದ್ದಾರೆ. ‘ನಶಾ ಮುಕ್ತಭಾರತ’ ನಿರ್ಮಾಣ ಮಾಡುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಪೊಲೀಸರು ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳುವ ಅಗತ್ಯ ಇದೆ. ವಿಶ್ವ ಹಿಂದೂ ಪರಿಷತ್ ವತಿಯಿಂದಲೂ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜನೆ ಮಾಡುತ್ತಿದ್ದೇವೆ’ ಎಂದರು.</p>.<p>ಲಿಂಗರಾಜ ಅಪ್ಪ, ಶಿವಕುಮಾರ ಬೋಳಶೆಟ್ಟಿ, ಮಹೇಶ ಪಾಟೀಲ, ಎಸ್.ಆರ್.ರಾಮನಗೌಡರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-24-2113367442</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>