<p>ಧಾರವಾಡ: ‘ನೀರು ಅಮೃತಕ್ಕೆ ಸಮಾನ, ನೀರಿನ ಮಹತ್ವವನ್ನು ಎಲ್ಲರೂ ತಿಳಿದುಕೊಳ್ಳಬೇಕು’ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.</p>.<p>ಇಲ್ಲಿನ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ(ವಾಲ್ಮಿ) ಸಭಾಭವನದಲ್ಲಿ ಈಚೆಗೆ ನಡೆದ ವಿಶ್ವ ಜಲ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘4 ಟಿ.ಎಂ.ಸಿ ನೀರಿಗಾಗಿ ಮಹದಾಯಿ-ಕಳಸಾ ಬಂಡೂರು ಹೋರಾಟ ಮಾಡಬೇಕಾದ ಪರಿಸ್ಥಿತಿ ಎದುರಿಸಿದ್ದೇವೆ. ಕೃಷಿಗಾಗಿ ನೀರು ಹರಿಸುವಾಗ ಅದನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು. ನೀರು ಹಳ್ಳಗಳಿಗೆ ಹರಿಯದಂತೆ ನೋಡಿಕೊಳ್ಳಬೇಕು’ ಎಂದರು.</p>.<p>‘ರೈತರು ಕಾಲಕ್ಕೆ ತಕ್ಕಂತೆ ಕೃಷಿಯಲ್ಲಿ ಹೊಸ ತಂತ್ರಜ್ಞಾನ ಮತ್ತು ಸೂಕ್ಷ್ಮ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಬೇಕು. ಹೊಲವನ್ನು ಮಾರಾಟ ಮಾಡಬಾರದು, ಸಾಂಪ್ರದಾಯಿಕ ಬೆಳೆ ಜೊತೆಗೆ ಲಾಭದಾಯಕ ಇತರೆ ಬೆಳೆಗಳನ್ನು ಬೆಳೆಯಬೇಕು’ ಎಂದು ಸಲಹೆ ನೀಡಿದರು.</p>.<p>ವಾಲ್ಮಿ ನಿರ್ದೇಶಕ ಗಿರೀಶ ಮರಡ್ಡಿ ಮಾತನಾಡಿ, ‘ಪಶು ಆಧಾರಿತ, ಸಸ್ಯ ಆಧಾರಿತ, ಮೌಲ್ಯ ವರ್ಧಿತ ಒಕ್ಕಲುತನ ಮಾಡುವುದರ ಮೂಲಕ ಕೃಷಿಯಲ್ಲಿ ಹೆಚ್ಚಿನ ಲಾಭ ಪಡೆಯಬಹುದು’ ಎಂದರು.</p>.<p>ಪ್ರಗತಿಪರ ಕೃಷಿಕರನ್ನು ಸನ್ಮಾನಿಸಲಾಯಿತು. ವಾಲ್ಮಿ ಪ್ರಾಧ್ಯಾಪಕ ಸುಧೀಂದ್ರ ಕೆ.ಎಸ್., ಸುರೇಶ ದಿಕ್ಷೀತ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-24-1246402774</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ನೀರು ಅಮೃತಕ್ಕೆ ಸಮಾನ, ನೀರಿನ ಮಹತ್ವವನ್ನು ಎಲ್ಲರೂ ತಿಳಿದುಕೊಳ್ಳಬೇಕು’ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.</p>.<p>ಇಲ್ಲಿನ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ(ವಾಲ್ಮಿ) ಸಭಾಭವನದಲ್ಲಿ ಈಚೆಗೆ ನಡೆದ ವಿಶ್ವ ಜಲ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘4 ಟಿ.ಎಂ.ಸಿ ನೀರಿಗಾಗಿ ಮಹದಾಯಿ-ಕಳಸಾ ಬಂಡೂರು ಹೋರಾಟ ಮಾಡಬೇಕಾದ ಪರಿಸ್ಥಿತಿ ಎದುರಿಸಿದ್ದೇವೆ. ಕೃಷಿಗಾಗಿ ನೀರು ಹರಿಸುವಾಗ ಅದನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು. ನೀರು ಹಳ್ಳಗಳಿಗೆ ಹರಿಯದಂತೆ ನೋಡಿಕೊಳ್ಳಬೇಕು’ ಎಂದರು.</p>.<p>‘ರೈತರು ಕಾಲಕ್ಕೆ ತಕ್ಕಂತೆ ಕೃಷಿಯಲ್ಲಿ ಹೊಸ ತಂತ್ರಜ್ಞಾನ ಮತ್ತು ಸೂಕ್ಷ್ಮ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಬೇಕು. ಹೊಲವನ್ನು ಮಾರಾಟ ಮಾಡಬಾರದು, ಸಾಂಪ್ರದಾಯಿಕ ಬೆಳೆ ಜೊತೆಗೆ ಲಾಭದಾಯಕ ಇತರೆ ಬೆಳೆಗಳನ್ನು ಬೆಳೆಯಬೇಕು’ ಎಂದು ಸಲಹೆ ನೀಡಿದರು.</p>.<p>ವಾಲ್ಮಿ ನಿರ್ದೇಶಕ ಗಿರೀಶ ಮರಡ್ಡಿ ಮಾತನಾಡಿ, ‘ಪಶು ಆಧಾರಿತ, ಸಸ್ಯ ಆಧಾರಿತ, ಮೌಲ್ಯ ವರ್ಧಿತ ಒಕ್ಕಲುತನ ಮಾಡುವುದರ ಮೂಲಕ ಕೃಷಿಯಲ್ಲಿ ಹೆಚ್ಚಿನ ಲಾಭ ಪಡೆಯಬಹುದು’ ಎಂದರು.</p>.<p>ಪ್ರಗತಿಪರ ಕೃಷಿಕರನ್ನು ಸನ್ಮಾನಿಸಲಾಯಿತು. ವಾಲ್ಮಿ ಪ್ರಾಧ್ಯಾಪಕ ಸುಧೀಂದ್ರ ಕೆ.ಎಸ್., ಸುರೇಶ ದಿಕ್ಷೀತ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-24-1246402774</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>