<p>ಧಾರವಾಡ: ‘ನೀರನ್ನು ಮಿತವಾಗಿ ಬಳಸಬೇಕು, ಸದ್ಬಳಕೆ ಮಾಡಿಕೊಳ್ಳಬೇಕು, ಜಲ ಮಾಲಿನ್ಯ ತಡೆಗಟ್ಟಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಎಫ್.ಎಚ್.ಜಕ್ಕಪ್ಪನವರ ಹೇಳಿದರು.</p>.<p>ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯಲ್ಲಿ (ವಾಲ್ಮಿ) ಬುಧವಾರ ನಡೆದ ಭೂ ದಿನಾಚರಣೆಯಲ್ಲಿ ಮಾತನಾಡಿ, ಮಣ್ಣು ಮತ್ತು ನೀರಿನ ಸಂರಕ್ಷಣೆಗೆ ಪೂರಕವಾದ ಕೃಷಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಕುರಿತು ವಾಲ್ಮಿ ನಿರಂತರವಾಗಿ ತರಬೇತಿ ನೀಡುತ್ತಿದೆ’ ಎಂದರು.</p>.<p>‘ಜಮೀನಿನ ಮಣ್ಣಿನ ಪರೀಕ್ಷೆ ಮಾಡಿಸಿಕೊಳ್ಳುವುದು ಅವಶ್ಯ. ಗುಜರಾತ್ ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಹೈನುಗಾರಿಕೆ ಮತ್ತು ಹಾಲು ಉತ್ಪಾದನಾ ಘಟಕಗಳ ಮೂಲಕ ರೈತರು ಆದಾಯ ಗಳಿಸುತ್ತಿದ್ದಾರೆ. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗಗಳ ರೈತರು ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದರು.</p>.<p>ರೈತ ಗುರುಸಿದ್ದಪ್ಪ ಹುಬ್ಬಳ್ಳಿ, ವಿಷ್ಣು, ಚಾಲಕ ಬಸವರಾಜ ಮಾಟೊಳ್ಳಿ ಅವರನ್ನು ಸನ್ಮಾನಿಸಲಾಯಿತು. ವಾಲ್ಮಿ ನಿರ್ದೇಶಕ ಪ್ರೊ.ಗಿರೀಶ ಎನ್. ಮರಡ್ಡಿ ಅಧ್ಯಕ್ಷತೆ ವಹಿಸಿದ್ದರು. ನಿರ್ಮಿತಿ ಕೇಂದ್ರದ ಅಧಿಕಾರಿ ಬೈಲಪ್ಪ, ಪ್ರೊ.ಬಿ.ವೈ.ಬಂಡಿವಡ್ಡರ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-24-245899064</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ನೀರನ್ನು ಮಿತವಾಗಿ ಬಳಸಬೇಕು, ಸದ್ಬಳಕೆ ಮಾಡಿಕೊಳ್ಳಬೇಕು, ಜಲ ಮಾಲಿನ್ಯ ತಡೆಗಟ್ಟಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಎಫ್.ಎಚ್.ಜಕ್ಕಪ್ಪನವರ ಹೇಳಿದರು.</p>.<p>ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯಲ್ಲಿ (ವಾಲ್ಮಿ) ಬುಧವಾರ ನಡೆದ ಭೂ ದಿನಾಚರಣೆಯಲ್ಲಿ ಮಾತನಾಡಿ, ಮಣ್ಣು ಮತ್ತು ನೀರಿನ ಸಂರಕ್ಷಣೆಗೆ ಪೂರಕವಾದ ಕೃಷಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಕುರಿತು ವಾಲ್ಮಿ ನಿರಂತರವಾಗಿ ತರಬೇತಿ ನೀಡುತ್ತಿದೆ’ ಎಂದರು.</p>.<p>‘ಜಮೀನಿನ ಮಣ್ಣಿನ ಪರೀಕ್ಷೆ ಮಾಡಿಸಿಕೊಳ್ಳುವುದು ಅವಶ್ಯ. ಗುಜರಾತ್ ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಹೈನುಗಾರಿಕೆ ಮತ್ತು ಹಾಲು ಉತ್ಪಾದನಾ ಘಟಕಗಳ ಮೂಲಕ ರೈತರು ಆದಾಯ ಗಳಿಸುತ್ತಿದ್ದಾರೆ. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗಗಳ ರೈತರು ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದರು.</p>.<p>ರೈತ ಗುರುಸಿದ್ದಪ್ಪ ಹುಬ್ಬಳ್ಳಿ, ವಿಷ್ಣು, ಚಾಲಕ ಬಸವರಾಜ ಮಾಟೊಳ್ಳಿ ಅವರನ್ನು ಸನ್ಮಾನಿಸಲಾಯಿತು. ವಾಲ್ಮಿ ನಿರ್ದೇಶಕ ಪ್ರೊ.ಗಿರೀಶ ಎನ್. ಮರಡ್ಡಿ ಅಧ್ಯಕ್ಷತೆ ವಹಿಸಿದ್ದರು. ನಿರ್ಮಿತಿ ಕೇಂದ್ರದ ಅಧಿಕಾರಿ ಬೈಲಪ್ಪ, ಪ್ರೊ.ಬಿ.ವೈ.ಬಂಡಿವಡ್ಡರ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-24-245899064</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>